ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

ದೇವೇಗೌಡರನ್ನು ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೋ. ಕೆ.ಎಸ್ ರಂಗಪ್ಪ ಭೇಟಿಯನ್ನ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ
ಐಸಿಯುನಿಂದ ಜನರಲ್ ವಾರ್ಡ್ಗೆ ಶಿಫ್ಟ್

ಮೊದಲು ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿತ್ತು. ಖ್ಯಾತ ವೈದ್ಯ ಡಾ. ಸುದರ್ಶನ್ ಬಲ್ಲಾಳ್ ನೇತ್ವತ್ವದಲ್ಲಿ ಚಿಕಿತ್ಸೆ ನಡೆಯುತ್ತಿತ್ತು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಹೀಗಾಗಿ ಬಳಿಕ ಅವರನ್ನು ನಿನ್ನೆ ಐಸಿಯುನಿಂದ ಜನರಲ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು.
ಮಾಜಿ ಪ್ರಧಾನಮಂತ್ರಿಗಳು ಹಾಗೂ ವರಿಷ್ಠರಾದ ಶ್ರೀ ಹೆಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.





