ಆಸ್ಟ್ರೇಲಿಯಾಗೆ 264 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸರಣಿ ಗೆಲ್ಲುವ ತವಕದಲ್ಲಿ ಆಸ್ಟ್ರೇಲಿಯಾ

ಆಸ್ಟ್ರೇಲಿಯಾಗೆ 264 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸರಣಿ ಗೆಲ್ಲುವ ತವಕದಲ್ಲಿ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 264 ರನ್​ಗಳಿಸಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕನಾಗಿ ಕಣಕ್ಕಿಳಿದ ಶುಭ್​​ಮನ್ ಗಿಲ್ ಕೇವಲ 4 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ವಿರಾಟ್ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. 4ನೇ ವಿಕೆಟ್​ಗೆ ಶತಕದ ಜೊತೆಯಾವಾಟವಾಡುವ ಈ ಮೂಲಕ ಈ ಜೋಡಿ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಇದರ ನಡುವೆ ರೋಹಿತ್ ಶರ್ಮಾ 97 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 73 ರನ್ ಬಾರಿಸಿದರು. ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಹಿಟ್​ಮ್ಯಾನ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ (61) ಕೂಡ ಬೌಲ್ಡ್ ಆಗಿ ಹೊರ ನಡೆದರು.ಈ ವೇಳೆಗ ಆಗಮಿಸಿದ ಅಕ್ಷರ್ ಪಟೇಲ್ 41 ರನ್​ಗಳ ಕೊಡುಗೆ ನೀಡಿದರೆ, ಕೆಎಲ್ ರಾಹುಲ್ 11 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಇನ್ನು ವಾಷಿಂಗ್ಟನ್ ಸುಂದರ್ 12 ರನ್​ಗಳಿಸಿದರೆ, ನಿತೀಶ್ ಕುಮಾರ್ ರೆಡ್ಡಿ 8 ರನ್ ಬಾರಿಸಿ ಪೆವಿಲಿಯನ್​ಗೆ ಹಿಂತಿರುಗಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!