ಅದ್ದೂರಿಯಾಗಿ ನಡೆದ ಕಾರ್ಯ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ

ಅದ್ದೂರಿಯಾಗಿ ನಡೆದ ಕಾರ್ಯ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಕಾರ್ಯ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು. ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿಯ ಕಾರ್ಯ ಗ್ರಾಮದಲ್ಲಿ ದೀಪಾವಳಿ ಹಬ್ಬದ ಮಾರನೇ ದಿನ ಪ್ರಾರಂಭವಾಗುವ ಶ್ರೀ ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮೂರು ದಿನಗಳ ಕಾಲ ನಡೆಯಲಿದೆ. ಇಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಸಿದ್ದೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಗ್ರಾಮದಿಂದ ಬೆಟ್ಟಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ನಂತರ ಸುಮಾರು 25 ಅಡಿ ಎತ್ತರದ ಖುರ್ಜು (ತೇರು) ತಯಾರು ಮಾಡಿ ವಸ್ತ್ರಾಲಂಕಾರ, ಹೂವಿನ ಅಲಂಕಾರಗಳಿಂದ ಆ ತೇರನ್ನು ಶೃಂಗರಿಸಿ ಕಳಸರೋಹಣ ಮಾಡಿ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಆರು ಅಡಿ ಎತ್ತರದ ರಥದ ಸಹಾಯದಿಂದ ಕಾರ್ಯ ಗ್ರಾಮದ ಕೊನೆಯ ಭಾಗದವರೆಗೂ ಆ ರಥವನ್ನು ಎಳೆದುಕೊಂಡು ಹೋಗಿ ತದನಂತರ ಎರಡು ಟನ್ ಭಾರವುಳ್ಳ ತೇರನ್ನು ಸುಮಾರು 200ಕ್ಕೂ ಹೆಚ್ಚು ಜನರು ಹೆಗಲ ಮೇಲೆ ಹೊತ್ತು ಸುಮಾರು 600 ಅಡಿ ಎತ್ತರದ ಶ್ರೀ ಸಿದ್ದೇಶ್ವರ ಬೆಟ್ಟಕ್ಕೆ ಹೊತ್ತುಕೊಂಡು ಹೋಗುತ್ತಾರೆ. ಅದನ್ನು ವೀಕ್ಷಿಸಲು ಲಕ್ಷಾಂತರ ಭಕ್ತರು ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದರು. ಅ.24 ರಂದು ಶುಕ್ರವಾರ ಪಲ್ಲಕ್ಕಿ ಉತ್ಸವ, ಪಂಚ ದೇವರುಗಳ ಉತ್ಸವ ಮೂರ್ತಿಗಳ ಮೆರವಣಿಗೆ ಗ್ರಾಮದಲ್ಲಿ ನಡೆಯುತ್ತದೆ. ಅ.25 ರಂದು ಶನಿವಾರ ಗ್ರಾಮದ ದರೋಬರೋ ಕೆರೆಯಲ್ಲಿ ಶ್ರೀ ಸ್ವಾಮಿಯ ತೆಪ್ಪೋತ್ಸವ ಜರುಗಲಿದೆ. ಅ.30 ರಂದು ಗುರುವಾರ ಶ್ರೀ ಸಿದ್ದೇಶ್ವರ ಸ್ವಾಮಿಯ ಬೆಟ್ಟದಲ್ಲಿ ಚಿಕ್ಕ ಜಾತ್ರಾ ಮಹೋತ್ಸವ ನಡೆಸಲಾಗುತ್ತದೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!