ರಘು ದೀಕ್ಷಿತ್ ಜೊತೆ ನೆರವೇರಿತು ಗಾಯಕಿ ವಾರಿಜಶ್ರೀ ಮದುವೆ

ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಹಾಗೂ ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸಡಗರದಿಂದ ಈ ವಿವಾಹ ನೆರವೇರಿದೆ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ನವಜೋಡಿಗೆ ಶುಭಾಶಯ ತಿಳಿಸುತ್ತಿದ್ದಾರೆ.

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ (Raghu Dixit) ಅವರು 2ನೇ ಮದುವೆ ಆಗಿದ್ದಾರೆ. ಗಾಯಕಿ ವಾರಿಜಶ್ರೀ ವೇಣುಗೋಪಾಲ್ (Varijashree Venugopal) ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಆ ಬಗ್ಗೆ ಮಾಧ್ಯಮವೊಂದಕ್ಕೆ ರಘು ದೀಕ್ಷಿತ್ ಅವರು ಪ್ರತಿಕ್ರಿಯೆ ಕೂಡ ನೀಡಿದ್ದರು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ (Raghu Dixit Marriage) ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡು ಈ ಜೋಡಿಗೆ ಅಭಿನಂದನೆ ತಿಳಿಸಲಾಗಿದೆ.

ರಘು ದೀಕ್ಷಿತ್ ಮತ್ತು ವಾರಿಜಶ್ರೀ ವೇಣುಗೋಪಾಲ್ ಅವರು ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಇಬ್ಬರಿಗೂ ಬೇಡಿಕೆ ಇದೆ. ಗಾಯಕಿಯಾಗಿ, ಕೊಳಲು ವಾದಕಿಯಾಗಿ ವಾರಿಜಶ್ರೀ ಅವರು ಖ್ಯಾತಿ ಗಳಿಸಿದ್ದಾರೆ. ಇಬ್ಬರು ಜೊತೆಯಾಗಿ ಕೆಲಸ ಮಾಡಿದ್ದಾರೆ. ಪರಿಚಯದಿಂದ ಪ್ರೀತಿ ಬೆಳೆದು, ಕುಟುಂಬದ ಒಪ್ಪಿಗೆ ಪಡೆದು ಅವರಿಬ್ಬರು ದಾಂಪತ್ಯ ಜೀವನ ಆರಂಭಿಸಿದ್ದಾರೆ.

ಕುಟುಂಬದವರು ಹಾಗೂ ಆಪ್ತ ಸ್ನೇಹಿತರು ರಘು ದೀಕ್ಷಿತ್-ವಾರಿಜಶ್ರೀ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ಯಮುನಾ ಶ್ರೀನಿಧಿ, ಅಯ್ಯೋ ಶ್ರದ್ಧಾ ಸೇರಿದಂತೆ ಹಲವರು ಈ ಮದುವೆಯಲ್ಲಿ ಭಾಗಿಯಾಗಿದ್ದಾರೆ. ರಘು ದೀಕ್ಷಿತ್ ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಫೋಟೋ ನೋಡಿದ ಅಭಿಮಾನಿಗಳು ಕಮೆಂಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಯಮುನಾ ಶ್ರೀನಿಧಿ ಅವರು ಮದುವೆಯ ಫೋಟೋಗಳನ್ನು ಹಂಚಿಕೊಂಡು ನವಜೋಡಿಗೆ ಶುಭ ಹಾರೈಸಿದ್ದಾರೆ. ‘ಕನ್ನಡ ನಾಡಿನ ಹೆಮ್ಮೆಯ ಸಂಗೀತಗಾರ ರಘು ದೀಕ್ಷಿತ್ ಹಾಗೂ ಪ್ರತಿಭಾವಂತ ಸಂಗೀತಗಾರ್ತಿ ವಾರಿಜಾ ವೇಣುಗೋಪಾಲ್ ಅವರ ವಿವಾಹದ ಈ ಶುಭ ಸಂದರ್ಭದಲ್ಲಿ ಹೃತ್ಪೂರ್ವಕ ಅಭಿನಂದನೆಗಳು! ನಿಮ್ಮ ಜೀವನ ಸಂಗಮವು ಪ್ರೀತಿ, ಸಂತೋಷ ಮತ್ತು ಸಂಗೀತದ ಸುಂದರ ರಾಗಗಳಿಂದ ತುಂಬಿರಲಿ’ ಎಂದು ಅವರು ಹಾರೈಸಿದ್ದಾರೆ.

50 ವರ್ಷ ವಯಸ್ಸಿನ ರಘು ದೀಕ್ಷಿತ್ ಅವರಿಗೆ ಇದು 2ನೇ ಮದುವೆ. ಈ ಮೊದಲು (2005) ಅವರು ಡ್ಯಾನ್ಸರ್ ಮಯೂರಿ ಉಪಾಧ್ಯ ಜೊತೆ ವಿವಾಹ ಆಗಿದ್ದರು. 2019ರಲ್ಲಿ ಅವರಿಬ್ಬರು ವಿಚ್ಛೇದನ ಪಡೆದರು. ಬಳಿಕ ಇನ್ನೊಂದು ಮದುವೆ ಬಗ್ಗೆ ರಘು ದೀಕ್ಷಿತ್ ಅವರು ಆಲೋಚನೆ ಮಾಡಿರಲಿಲ್ಲ. ಆದರೆ ವಾರಿಜಶ್ರೀ ಜೊತೆ ಒಡನಾಟ ಬೆಳೆದ ಬಳಿಕ ಮದುವೆ ಬಗ್ಗೆ ನಿರ್ಧರಿಸಿದರು. ವಾರಿಜಶ್ರೀ ಅವರಿಗೆ ಈಗ 34 ವರ್ಷ ವಯಸ್ಸು.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!