ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದೀರಾ ಹುಷಾರ್ : ನಿಮ್ಮ ಮನೆ ಮುಂದೆಯೇ ಬೀಳಲಿದೆ ರಾಶಿ ರಾಶಿ ತ್ಯಾಜ್ಯ!

ಸಾಕಷ್ಟು ಜನ ಜಾಗೃತಿ ಬಳಿಕವೂ ಬೆಂಗಳೂರು ನಗರದಲ್ಲಿ ಖುಷಿ ಬಂದಂತೆ ಕಸ ಎಸೆದು ಹೋಗುವ ಪ್ರಕರಣಗಳು ನಿಂತಿಲ್ಲ. ಹೀಗಾಗಿ ಈ ವಿಚಾರದಲ್ಲಿ ಒಂದಿಷ್ಟು ಕಠಿಣ ಕ್ರಮಗಳನ್ನ ಕೈಗೊಳ್ಳಲು ಗ್ರೇಟರ್​ ಬೆಂಗಳೂರು ಪ್ರಾಧಿಕಾರ ನಿರ್ಧರಿಸಿದೆ. ಕಸ ಎಸೆಯುವವರ ಮನೆ ಬಾಗಿಲಲ್ಲೇ ಲೋಡ್​ಗಟ್ಟಲೆ ಕಸ ಸುರಿಯಲು ತೀರ್ಮಾನಿಸಿದೆ. ಜೊತೆಗೆ ದಂಡವನ್ನೂ ವಿಧಿಸಲಿದೆ.

ಬೆಂಗಳೂರು: ಎಲ್ಲೆಂದರಲ್ಲಿ ಕಸ ಎಸೆಯೋ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಿದ್ದಾರೆ ನಿಮ್ಮ ಮನೆ ಮುಂದೆಯೇ ಇನ್ನು ಲೋಡ್​ಗಟ್ಟಲೆ ಕಸ ಬಂದು ಬೀಳಲಿದೆ. ಹೌದು, ಸಾಕಷ್ಟು ಜನಜಾಗೃತಿ ಬಳಿಕವೂ ಹಲವು ಮಂದಿ ತಮಗೆ ಖುಷಿ ಬಂದಲ್ಲಿ ಕಸ ಎಸೆದು ಹೋಗುವ ಅಭ್ಯಾಸ ಮುಂದುವರಿಸಿದ್ದಾರೆ. ಇಂತಹ ಪ್ರಕರಣಗಳ ಕಡಿವಾಣಕ್ಕೆ ಮುಂದಾಗಿರುವ ಗ್ರೇಟರ್​ ಬೆಂಗಳೂರು ಪ್ರಾಧಿಕಾರ (GBA) ಇಂತಹದ್ದೊಂದು ಕಠಿಣ ಕ್ರಮಕ್ಕೆ ಮುಂದಾಗಿದೆ. ಕಸ ಎಸೆಯುವವರ ಮನೆ ಮುಂದೆಯೇ ಕಸ ಸುರಿಯುವ ಜೊತೆಗೆ ದಂಡ ವಿಧಿಸಲು ತೀರ್ಮಾನಿಸಿದೆ.

 

ಕಸ ಎಸೆದು ಹೋಗುವುದನ್ನು ಮೊದಲು ಮಾರ್ಷಲ್​ಗಳು ವಿಡಿಯೋ ಮಾಡಿಕೊಳ್ಳಲಿದ್ದಾರೆ. ಆ ಬಳಿಕ ಅಂತವರ ಮನೆಗಳನ್ನು ಶೀಘ್ರ ಪತ್ತೆಮಾಡಿ ಅವರ ಮನೆ ಮುಂದೆಯೇ ಕಸ ಸುರಿಯಲಾಗುತ್ತೆ. ಇಷ್ಟೇ ಅಲ್ಲ, ಮನೆ ಮುಂದೆ ಸರಿಯಲಾದ ಕಸದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಲೂ ತೀರ್ಮಾನಿಸಲಾಗಿದ್ದು, ಆ ಮೂಲಕ ಕಸ ಎಸೆಯುವವರನ್ನು ಜಗಜ್ಜಾಹೀರಗೊಳಿಸಲು ಜಿಬಿಎ ಮುಂದಾಗಿದೆ. ವಿಂಗಡಣೆ ಮಾಡದ ತ್ಯಾಜ್ಯ, ಪ್ಲ್ಯಾಸ್ಟಿಕ್​ ಮತ್ತು ಬಾಕ್ಸ್​ಗಳನ್ನ ಎಸೆದು ಹೋಗುವವರ ವಿಡಿಯೋಗಳನ್ನ ದಾಖಲಿಸುವ ಕೆಲಸ ಈಗಾಗಲೇ ಆರಂಭವಾಗಿದ್ದು, ಕಳೆದ ಒಂದು ವಾರದಿಂದ ಈ ಬಗ್ಗೆ ಮಾರ್ಷಲ್​ಗಳು ಕಾರ್ಯನಿರತರಾಗಿದ್ದಾರೆ. ಕಸ ಎಸೆದು ಹೋಗುವವರ ಮನೆಗಳನ್ನ ಸ್ಥಳೀಯ ಪೊಲೀಸರ ಜೊತೆಗೆ ಮಾರ್ಷಲ್​ಗಳು ತಲುಪಲಿದ್ದು, ಅವರ ಮನೆ ಬಾಗಿಲಲ್ಲೇ ಕಸದ ಲೋಡ್​ ಅನ್ನು ಹಾಕಲಾಗುತ್ತೆ. ಇದರ ಜೊತೆಗೆ ದಂಡವನ್ನೂ ವಿಧಿಸಲು ತೀರ್ಮಾನಿಸಲಾಗಿದೆ.

2-10 ಸಾವಿರ ರೂ.ವರೆಗೆ ದಂಡ
ಮನೆಮುಂದೆ ಸುರಿಯಲಾದ ಕಸವನ್ನ ಕೆಲ ಗಂಟೆಗಳ ಬಳಿಕ ತೆರವು ಮಾಡಲಾಗುತ್ತದೆ. ಆದರೆ 2 ರಿಂದ 10 ಸಾವಿರ ರೂಪಾಯಿಗಳ ವರೆಗಿನ ದಂಡವನ್ನು ಎಲ್ಲೆಂದರಲ್ಲಿ ಕಸ ಹಾಕುವವರು ಪಾವತಿಸಬೇಕು. ಈ ಬಗ್ಗೆ ತಕರಾರು, ವಾದ ಮಾಡುವಂತೆಯೂ ಇಲ್ಲ. ನಾವು ಕಸ ಎಸೆದಿಲ್ಲ ಎಂದರೂ ಮಾರ್ಷಲ್​ ಗಳು ಅದಾಗಲೇ ಸೆರೆ ಹಿಡಿದ ನೀವು ಕಸ ಎಸೆಯುವ ವಿಡಿಯೋ ತೋರಿಸಲಿದ್ದಾರೆ. ಜನ ಜಾಗೃತಿ ಕೆಲಸಗಳ ಮೂಲಕ ನಗರದಲ್ಲಿದ್ದ 869 ಬ್ಲ್ಯಾಕ್​ ಸ್ಪಾಟ್​ಗಳನ್ನ 150ಕ್ಕೆ ಇಳಿಸುವಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ ಈಗಾಗಲೇ ಸಫಲವಾಗಿದೆ. ಈ ನಡುವೆ ನಗರವನ್ನು ಸ್ವಚ್ಛವಾಗಿ ಇರಿಸುವಂತೆ ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್​ ಕೂಡ ಸೂಚನೆ ನೀಡಿದ್ದಾರೆ. ಹೀಗಾಗಿ ಕಸ ಎಸೆಯುವವರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ ಎಂದು BSWML ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕರೀಗೌಡ ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!