ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದೀರಾ ಹುಷಾರ್ : ನಿಮ್ಮ ಮನೆ ಮುಂದೆಯೇ ಬೀಳಲಿದೆ ರಾಶಿ ರಾಶಿ ತ್ಯಾಜ್ಯ!

ಸಾಕಷ್ಟು ಜನ ಜಾಗೃತಿ ಬಳಿಕವೂ ಬೆಂಗಳೂರು ನಗರದಲ್ಲಿ ಖುಷಿ ಬಂದಂತೆ ಕಸ ಎಸೆದು ಹೋಗುವ ಪ್ರಕರಣಗಳು ನಿಂತಿಲ್ಲ. ಹೀಗಾಗಿ ಈ ವಿಚಾರದಲ್ಲಿ ಒಂದಿಷ್ಟು ಕಠಿಣ ಕ್ರಮಗಳನ್ನ ಕೈಗೊಳ್ಳಲು ಗ್ರೇಟರ್​ ಬೆಂಗಳೂರು ಪ್ರಾಧಿಕಾರ ನಿರ್ಧರಿಸಿದೆ. ಕಸ ಎಸೆಯುವವರ ಮನೆ ಬಾಗಿಲಲ್ಲೇ ಲೋಡ್​ಗಟ್ಟಲೆ ಕಸ ಸುರಿಯಲು ತೀರ್ಮಾನಿಸಿದೆ. ಜೊತೆಗೆ ದಂಡವನ್ನೂ ವಿಧಿಸಲಿದೆ.

ಬೆಂಗಳೂರು: ಎಲ್ಲೆಂದರಲ್ಲಿ ಕಸ ಎಸೆಯೋ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಿದ್ದಾರೆ ನಿಮ್ಮ ಮನೆ ಮುಂದೆಯೇ ಇನ್ನು ಲೋಡ್​ಗಟ್ಟಲೆ ಕಸ ಬಂದು ಬೀಳಲಿದೆ. ಹೌದು, ಸಾಕಷ್ಟು ಜನಜಾಗೃತಿ ಬಳಿಕವೂ ಹಲವು ಮಂದಿ ತಮಗೆ ಖುಷಿ ಬಂದಲ್ಲಿ ಕಸ ಎಸೆದು ಹೋಗುವ ಅಭ್ಯಾಸ ಮುಂದುವರಿಸಿದ್ದಾರೆ. ಇಂತಹ ಪ್ರಕರಣಗಳ ಕಡಿವಾಣಕ್ಕೆ ಮುಂದಾಗಿರುವ ಗ್ರೇಟರ್​ ಬೆಂಗಳೂರು ಪ್ರಾಧಿಕಾರ (GBA) ಇಂತಹದ್ದೊಂದು ಕಠಿಣ ಕ್ರಮಕ್ಕೆ ಮುಂದಾಗಿದೆ. ಕಸ ಎಸೆಯುವವರ ಮನೆ ಮುಂದೆಯೇ ಕಸ ಸುರಿಯುವ ಜೊತೆಗೆ ದಂಡ ವಿಧಿಸಲು ತೀರ್ಮಾನಿಸಿದೆ.

 

ಕಸ ಎಸೆದು ಹೋಗುವುದನ್ನು ಮೊದಲು ಮಾರ್ಷಲ್​ಗಳು ವಿಡಿಯೋ ಮಾಡಿಕೊಳ್ಳಲಿದ್ದಾರೆ. ಆ ಬಳಿಕ ಅಂತವರ ಮನೆಗಳನ್ನು ಶೀಘ್ರ ಪತ್ತೆಮಾಡಿ ಅವರ ಮನೆ ಮುಂದೆಯೇ ಕಸ ಸುರಿಯಲಾಗುತ್ತೆ. ಇಷ್ಟೇ ಅಲ್ಲ, ಮನೆ ಮುಂದೆ ಸರಿಯಲಾದ ಕಸದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಲೂ ತೀರ್ಮಾನಿಸಲಾಗಿದ್ದು, ಆ ಮೂಲಕ ಕಸ ಎಸೆಯುವವರನ್ನು ಜಗಜ್ಜಾಹೀರಗೊಳಿಸಲು ಜಿಬಿಎ ಮುಂದಾಗಿದೆ. ವಿಂಗಡಣೆ ಮಾಡದ ತ್ಯಾಜ್ಯ, ಪ್ಲ್ಯಾಸ್ಟಿಕ್​ ಮತ್ತು ಬಾಕ್ಸ್​ಗಳನ್ನ ಎಸೆದು ಹೋಗುವವರ ವಿಡಿಯೋಗಳನ್ನ ದಾಖಲಿಸುವ ಕೆಲಸ ಈಗಾಗಲೇ ಆರಂಭವಾಗಿದ್ದು, ಕಳೆದ ಒಂದು ವಾರದಿಂದ ಈ ಬಗ್ಗೆ ಮಾರ್ಷಲ್​ಗಳು ಕಾರ್ಯನಿರತರಾಗಿದ್ದಾರೆ. ಕಸ ಎಸೆದು ಹೋಗುವವರ ಮನೆಗಳನ್ನ ಸ್ಥಳೀಯ ಪೊಲೀಸರ ಜೊತೆಗೆ ಮಾರ್ಷಲ್​ಗಳು ತಲುಪಲಿದ್ದು, ಅವರ ಮನೆ ಬಾಗಿಲಲ್ಲೇ ಕಸದ ಲೋಡ್​ ಅನ್ನು ಹಾಕಲಾಗುತ್ತೆ. ಇದರ ಜೊತೆಗೆ ದಂಡವನ್ನೂ ವಿಧಿಸಲು ತೀರ್ಮಾನಿಸಲಾಗಿದೆ.

2-10 ಸಾವಿರ ರೂ.ವರೆಗೆ ದಂಡ
ಮನೆಮುಂದೆ ಸುರಿಯಲಾದ ಕಸವನ್ನ ಕೆಲ ಗಂಟೆಗಳ ಬಳಿಕ ತೆರವು ಮಾಡಲಾಗುತ್ತದೆ. ಆದರೆ 2 ರಿಂದ 10 ಸಾವಿರ ರೂಪಾಯಿಗಳ ವರೆಗಿನ ದಂಡವನ್ನು ಎಲ್ಲೆಂದರಲ್ಲಿ ಕಸ ಹಾಕುವವರು ಪಾವತಿಸಬೇಕು. ಈ ಬಗ್ಗೆ ತಕರಾರು, ವಾದ ಮಾಡುವಂತೆಯೂ ಇಲ್ಲ. ನಾವು ಕಸ ಎಸೆದಿಲ್ಲ ಎಂದರೂ ಮಾರ್ಷಲ್​ ಗಳು ಅದಾಗಲೇ ಸೆರೆ ಹಿಡಿದ ನೀವು ಕಸ ಎಸೆಯುವ ವಿಡಿಯೋ ತೋರಿಸಲಿದ್ದಾರೆ. ಜನ ಜಾಗೃತಿ ಕೆಲಸಗಳ ಮೂಲಕ ನಗರದಲ್ಲಿದ್ದ 869 ಬ್ಲ್ಯಾಕ್​ ಸ್ಪಾಟ್​ಗಳನ್ನ 150ಕ್ಕೆ ಇಳಿಸುವಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ ಈಗಾಗಲೇ ಸಫಲವಾಗಿದೆ. ಈ ನಡುವೆ ನಗರವನ್ನು ಸ್ವಚ್ಛವಾಗಿ ಇರಿಸುವಂತೆ ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್​ ಕೂಡ ಸೂಚನೆ ನೀಡಿದ್ದಾರೆ. ಹೀಗಾಗಿ ಕಸ ಎಸೆಯುವವರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ ಎಂದು BSWML ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕರೀಗೌಡ ತಿಳಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!