‘ನಾನು ನಿನ್ನ ಮಿಸ್ ಮಾಡಿಕೊಳ್ತೀನಿ’; ಬಿಗ್ ಬಾಸ್​ನಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್

Bigg Boss Kannada Elimination: ಬಿಗ್ ಬಾಸ್ ಕನ್ನಡ ಸೀಸನ್ 12ರ ನಾಲ್ಕನೇ ವಾರ ದೀಪಾವಳಿ ಪ್ರಯುಕ್ತ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಯಿತು. ರಾಶಿಕಾ ಮತ್ತು ಸ್ಪಂದನಾ ಮನೆಯಿಂದ ಹೊರಹೋಗುವವರ ಲಿಸ್ಟ್‌ನಲ್ಲಿದ್ದರು. ಸೂರಜ್ ರಾಶಿಕಾರನ್ನು ಅಪ್ಪಿಕೊಂಡರು. ಕೊನೆಗೆ ಇದು ಪ್ರ್ಯಾಂಕ್ ಎಂದು ತಿಳಿದು ಸ್ಪರ್ಧಿಗಳು ನಿಟ್ಟುಸಿರು ಬಿಟ್ಟರು.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBk 12) ನಾಲ್ಕನೇ ವೀಕೆಂಡ್​ನಲ್ಲಿ ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಗಿದೆ. ದೀಪಾವಳಿ ಪ್ರಯುಕ್ತ ಯಾವುದೇ ಎಲಿಮಿನೇಷನ್ ಇರೋದಿಲ್ಲ ಎಂದು ವೀಕ್ಷಕರಿಗೆ ಮೊದಲೇ ತಿಳಿಸಲಾಗಿತ್ತು. ಆದರೆ, ಬಿಗ್ ಬಾಸ್​ನಲ್ಲಿ ಇದ್ದ ಸ್ಪರ್ಧಿಗಳಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲ. ಪ್ರ್ಯಾಂಕ್ ಎಲಿಮಿನೇಷನ್​ಗೆ ರಾಶಿಕಾ ಹಾಗೂ ಸ್ಪಂದನಾ ಸೋಮಣ್ಣ ಒಂದು ಕ್ಷಣ ಕಂಗಾಲಾದರು. ಮನೆಯಿಂದ ಹೊರ ಹೊರಟ ರಾಶಿಕಾನ ಸೂರಜ್ ತಬ್ಬಿದ್ದಾರೆ.

ಸೂರಜ್ ಹಾಗೂ ರಾಶಿಕಾ ಮಧ್ಯೆ ಪ್ರೀತಿ ಮೂಡುತ್ತಿರುವುದು ಸ್ಪಷ್ಟವಾಗುತ್ತಿದೆ. ಆದರೆ, ನೋಡುಗರಿಗೆ ಇದು ತುಂಬಾನೇ ನಾಟಕೀಯ ಎನಿಸುತ್ತಿದೆ. ಜನಪ್ರಿಯತೆ ಗಳಿಸಬೇಕು ಎಂಬ ಕಾರಣಕ್ಕೆ ರಾಶಿಕಾ ಅವರು ಈ ರೀತಿಯ ಪ್ರೀತಿ ನಾಟಕ ಮಾಡುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಸುದೀಪ್ ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಹೀಗೆ ಮುಂದುವರಿದರೆ ಆಟ ಶೀಘ್ರವೇ ಕೊನೆ ಆಗುತ್ತದೆ ಎಂದು ರಾಶಿಕಾಗೆ ಸುದೀಪ್ ಬುದ್ಧಿಮಾತು ಹೇಳಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಬಿಗ್ ಬಾಸ್ ರಾಶಿಕಾಗೆ ಚಮಕ್ ನೀಡಿದರು. ನಾಮಿನೇಟ್ ಆದವರ ಪೈಕಿ ಧ್ರುವಂತ್, ರಾಶಿಕಾ ಹಾಗೂ ಸ್ಪಂದನಾ ಅವರು ಅಂತಿಮವಾಗಿ ಉಳಿದುಕೊಂಡರು. ಈ ಪೈಕಿ ಧ್ರುವಂತ್ ಸೇವ್ ಆದರು. ಈ ಬೆನ್ನಲ್ಲೇ, ‘ರಾಶಿಕಾ ಹಾಗೂ ಸ್ಪಂದನಾ ನೀವಿನ್ನು ಮನೆಯಿಂದ ಹೊರಡಬಹುದು’ ಎಂದರು. ಇದರಿಂದ ರಾಶಿಕಾ ಹಾಗೂ ಸ್ಪಂದನಾ ಕಣ್ಣೀರು ಹಾಕಲು ಆರಂಭಿಸಿದರು.

ಓಡಿ ಬಂದ ಸೂರಜ್ ಅವರು ರಾಶಿಕಾನ ತಬ್ಬಿಕೊಂಡರು. ಸೂರಜ್​ಗೂ ಇದು ಸಾಕಷ್ಟು ಬೇಸರ ಮೂಡಿಸಿತು. ‘ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಸೂರಜ್ ಹೇಳಿದರು. ಆ ಬಳಿಕ ಮುಖ್ಯದ್ವಾರ ಓಪನ್ ಆದಾಗ, ‘ಎಲಿಮಿನೇಷನ್ ಇರೋದಿಲ್ಲ’ ಎಂಬ ಬೋರ್ಡ್ ಕಂಡು ರಾಶಿಕಾ ಹಾಗೂ ಸ್ಪಂದನಾ ಖುಷಿ ಆದರು. ಈ ವೇಳೆ ಮತ್ತೆ ಓಡೋಡಿ ಬಂದ ಸೂರಜ್ ರಾಶಿಕಾನ ಮತ್ತೆ ತಬ್ಬಿಕೊಂಡರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!