ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್… ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ

ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಲತಾ ರವರ ಆದೇಶದ ಮೇರೆಗೆ ಮುಡಾ ಆಯುಕ್ತರು ಸಸ್ಪೆಂಡ್ ಆರ್ಡರ್ ಹೊರಡಿಸಿದ್ದಾರೆ.ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ರವರು ನೀಡಿದ ದೂರಿನ ಅನ್ವಯದಂತೆ ದಾಖಲೆಗಳನ್ನ ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ.

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು…

ಮೈಸೂರಿನ ಗೋಕುಲಂ ಬಡಾವಣೆ 3 ನೇ ಹಂತ ಮನೆ ಸಂಖ್ಯೆ 867 ಕ್ಕೆ 02-04-1982 ರಂದು ಲಿಲಿಯನ್ ಶಾರದಾ ಜೋಸೆಫ್ w/o ಅನ್ನಿ ಜೋಸೆಫ್ ಎಂಬುವರಿಗೆ ಮುಡಾ ದಿಂದ 30*40 ವಿಸ್ತೀರ್ಣ ನಿವೇಶನ ಮಂಜೂರಾಗಿದೆ.ಇದಕ್ಕೆ ಕರಾರು ಪತ್ರ ಸಹ ನೀಡಲಾಗಿದೆ.03-09-1983 ರಲ್ಲಿ ಲಿಲಿಯನ್ ಜೋಸೆಫ್ ಮರಣ ಹೊಂದಿರುತ್ತಾರೆ.06-04-2024 ರ ವರೆಗೂ ಸದರಿ ಸ್ವತ್ತು ಯಾರಿಗೂ ವರ್ಗಾವಣೆ ಆಗಿರುವುದಿಲ್ಲ.ಆದರೆ 26-03-2024 ರಂದು ಕ್ರಮಬದ್ದ ವಾರಸುದಾರರಲ್ಲದವರಿಗೆ ಅಂದರೆ ನೆವಿಲ್ ಮಾರ್ಕಸ್ ಜೋಸೆಫ್ ರವರ ಹೆಸರಿಗೆ ಕ್ರಮಬದ್ದ ವಂಶವೃಕ್ಷ ಪಡೆಯದೆ ಪೌತಿಖಾತೆ ವರ್ಗಾವಣೆ ಮಾಡಿ ಜೊತೆಗೆ ತುಂಡು ಜಾಗವನ್ನೂ ಸಹ ಮಂಜೂರು ಮಾಡಿ ಹಕ್ಕುಪತ್ರ ನೀಡಲಾಗಿದೆ.ಈ ಅಕ್ರಮದ ಬಗ್ಗೆ ಆರ್.ಟಿ.ಐ.ಕಾರ್ಯಕರ್ತರಾದ ಬಿ.ಎನ್.ನಾಗೇಂದ್ರ ರವರು ದಾಖಲೆಗಳನ್ನ ಪಡೆದು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿ ದೂರು ನೀಡಿದ್ದರು.

ಈ ಸಂಬಂಧ ಪರಿಶೀಲನೆ ನಡೆಸಿದಾಗ ಮುಡಾದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಹಾಗೂ ವ್ಯವಸ್ಥಾಪಕ ಸೋಮಸುಂದ್ರು ರವರ ಕೈವಾಡ ಇರುವುದು ಬೆಳಕಿಗೆ ಬಂದಿದೆ.ಮುಡಾದಲ್ಲಿ ಯಾವುದೇ ಕ್ರಯಪತ್ರ ನೀಡುವ ಹಾಗೂ ಅನುಮೋದಿಸುವ ಅಧಿಕಾರ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿ ಆದೇಶವಾಗಿರುತ್ತದೆ.ಆದರೆ ಈ ಇಬ್ಬರು ಅಧಿಕಾರಿಗಳು ಕಾರ್ಯದರ್ಶಿಯವರಿಂದ ಅನುಮೋದನೆ ಪಡೆಯಲು ಕಡತಗಳನ್ನು ಮಂಡಿಸದೆ ಆಯುಕ್ತರ ಆದೇಶ ಮೀರಿ ತಮ್ಮ ಹಂತದಲ್ಲಿಯೇ ತಿದ್ದುಪಡಿ ಕ್ರಯಪತ್ರ ಮಾಡಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.ಈ ಅಕ್ರಮದ ಹಿನ್ನಲೆ ಈಗಾಗಲೇ ವ್ಯವಸ್ಥಾಪಕರಾದ ಸೋಮಸುಂದ್ರ ಅಮಾನತು ಶಿಕ್ಷೆ ಅನುಭವಿಸುತ್ತಿದ್ದಾರೆ.ವಿಶೇಷ ತಹಸೀಲ್ದಾರ್ ವಿರುದ್ದವೂ ಕ್ರಮ ಕೈಗೊಳ್ಳಬೇಕೆಂದು ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಸರ್ಕಾರಕ್ಕೆ ಮಾಡಿದ ಮನವಿಗೆ ಸ್ಪಂದನೆ ದೊರೆತಿದೆ.ಮುಡಾ ಕಾರ್ಯದರ್ಶಿಗಳು ಅಕ್ರಮ ನಡೆದಿರುವುದಾಗಿ ವರದಿಯನ್ನೂ ಸಹ ನೀಡಿದ್ದಾರೆ.

ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿಗಳ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತರ ಆದೇಶದಂತೆ ಮುಡಾ (MDA) ಆಯುಕ್ತರು ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಅಮಾನತ್ತಿನಲ್ಲಿ ಇಡುವಂತೆ ಆದೇಶ ಹೊರಡಿಸಿದ್ದಾರೆ…

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!