ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ: ಸಿ.ಎಂ

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ: ಸಿ.ಎಂ ಅಪಾರ ಮೆಚ್ಚುಗೆ. ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.ನಮ್ಮ ಯುವ ಶಕ್ತಿ, ವಿದ್ಯಾರ್ಥಿ ಯುವಜನರ ಚೈತನ್ಯ ಮತ್ತು ಸಾಮರ್ಥ್ಯ ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ದ ನಿಲುವು ತಳೆಯಬೇಕು ಎಂದರು.ಮಂಗಳೂರು ಹತೋಟಿಗೆ ಬಂದಿದ್ದು ನಮ್ಮ ಅಧಿಕಾರಿಗಳಿಂದಲೇ: ಸಿಎಂ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸಿ ತೋರಿಸಿ ಎಂದು ಕರೆ ನೀಡಿದರು.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಸಾಧ್ಯ ಮಾಡಿದರೆ ಕರ್ನಾಟಕ ಪೊಲೀಸ್ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ ಎಂದರು. ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ನಿಮ್ಮಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ನಿಮ್ಮನ್ನು ನೀವೇ ಪ್ರಶ್ನಿಸಿಕೊಂಡರೆ ಉತ್ತರ ನಿಮಗೇ ಗೊತ್ತಿರುತ್ತದೆ ಎಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಆತ್ಮಸಾಕ್ಷಿಯನ್ನು ಕೆದಕಿದರು.

ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಮಾಡಿ ತೋರಿಸಿ ಎಂದು ಕರೆ ನೀಡಿದರು. ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ನಾನೇ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದು ಕರೆ ನೀಡಿದರು.

ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ ಎಂದು ಕರೆ ನೀಡಿದರು. ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದು ಸಿ.ಎಂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!