‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್

ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’ ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕುರಿತಾದ ಎಲ್ಲಾ ವದಂತಿಗಳನ್ನು ನಿರ್ಮಾಪಕರು ತಳ್ಳಿ ಹಾಕಿದ್ದು, ಸಿನಿಮಾ ಯುಗಾದಿಗೆ ತೆರೆಗೆ ಬರಲಿದೆ.

ರಾಕಿಂಗ್ ಸ್ಟಾರ್ ಯಶ್ (Yash) ಅವರು ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರಿಗೆ ಕನ್ನಡದ ಮೇಲೆ ಗೌರವ ಇನ್ನೂ ಹಾಗೆಯೇ ಉಳಿದುಕೊಂಡಿದೆ. ಆದರೆ, ಅವರು ಕರ್ನಾಟಕದಲ್ಲಿ ನಡೆಯೋ ಎಲ್ಲಾ ಬೆಳವಣಿಗೆ ಬಗ್ಗೆಯೂ ಪ್ರತಿಕ್ರಿಯೆ ನೀಡೋದಿಲ್ಲ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಯಶ್ ಕನ್ನಡ ಮರೆತಿದ್ದಾರೆ ಎಂಬ ಆರೋಪ ಮರೆತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಒಂದೇ ಟ್ವೀಟ್ ಮೂಲಕ ಅವರು ಅದನ್ನು ಸುಳ್ಳು ಮಾಡಿದ್ದಾರೆ.

ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವ. ಈ ಸಮಯದಲ್ಲಿ ಅನೇಕರು ಶುಭಾಶಯ ಕೋರುತ್ತಿದ್ದಾರೆ. ಯಶ್ ಕೂಡ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಟ್ವೀಟ್ ಮಾಡಿದ್ದಾರೆ. ‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು. ಸಾವಿರ ಭಾಷೆ ನಾಲಿಗೆಯಲ್ಲಿರಲಿ. ಕನ್ನಡ ಭಾಷೆ ಹೃದಯದಲ್ಲಿರಲಿ. ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ’ ಎಂದು ಯಶ್ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಟಾಕ್ಸಿಕ್ ಸಿನಿಮಾ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟನೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಹಲವು ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್​ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಮುಂದಿನ ವರ್ಷ ಮಾರ್ಚ್ 19ರಂದು ತೆರೆಗೆ ಬರಲಿದೆ. ಯುಗಾದಿ ಪ್ರಯುಕ್ತ ಸಿನಿಮಾ ರಿಲೀಸ್ ಆಗಲಿದೆ.

ಹಬ್ಬಿತ್ತು ವದಂತಿ
‘ಟಾಕ್ಸಿಕ್’ ಸಿನಿಮಾ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿದ್ದವು. ಈ ಸಿನಿಮಾದ ಶೂಟಿಂಗ್ ಬಗ್ಗೆ ಯಶ್ ಹಾಗೂ ನಿರ್ದೇಶಕಿ ಗೀತು ಮೋಹನ್​ದಾಸ್​ಗೆ ಕಿರಿಕ್ ಆಗಿದೆ ಎಂದು ವರದಿ ಆಗಿತ್ತು. ಆದರೆ, ಇದನ್ನು ನಿರ್ಮಾಣ ಸಂಸ್ಥೆ ಕೆವಿಎನ್ ತಳ್ಳಿ ಹಾಕಿದೆ. ಇದು ಕೇವಲ ವಂದತಿ ಎಂದು ಸ್ಪಷ್ಟಪಡಿಸಿದೆ. ಇದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಸಿನಿಮಾ ಅಂದುಕೊಂಡ ದಿನಾಂಕದಂದೇ ತೆರೆಗೆ ಬರಲಿದೆ.

Related Posts

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!