World Cup 2025: ಇನ್ನೂ ಆರಂಭವಾಗದ ವಿಶ್ವಕಪ್ ಫೈನಲ್ ; ಮುಂಬೈನಲ್ಲಿ ಭಾರಿ ಮಳೆ

ICC Women’s World Cup 2025 Final: ಮುಂಬೈನಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮಳೆಯಿಂದ ಪಂದ್ಯ ಇದುವರೆಗೂ ಆರಂಭವಾಗಿಲ್ಲ. ಒಂದು ವೇಳೆ ಇಂದು ಪಂದ್ಯ ನಡೆಯದಿದ್ದರೆ, ನವೆಂಬರ್ 2 ರಂದು ಮೀಸಲು ದಿನದಂದು ಪಂದ್ಯ ಪೂರ್ಣಗೊಳಿಸಲಾಗುತ್ತದೆ. ಮಳೆ ನಿಂತರೆ 20 ಓವರ್‌ಗಳ ಪಂದ್ಯ ನಡೆಸಲು ಪ್ರಯತ್ನಿಸಲಾಗುತ್ತದೆ.

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಫೈನಲ್ (ICC Women’s World Cup 2025 Final) ಪಂದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾದಂತಹ (India vs South Africa) ಬಲಿಷ್ಠ ತಂಡಗಳ ನಡುವೆ ನಡೆಯಲಿದೆ. ಆದರೆ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3:00 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ ಇದುವರೆಗೂ ಆರಂಭವಾಗಿಲ್ಲ. ವಾಸ್ತವವಾಗಿ ಪಂದ್ಯದ ದಿನದಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೊದಲೇ ಮುನ್ಸೂಚನೆ ನೀಡಿತ್ತು. ಅದರಂತೆ ಮುಂಬೈನಲ್ಲಿ ಮಳೆ ಎಡಬಿಡದೆ ಸುರಿಯುತ್ತಿದೆ. ಇದರಿಂದಾಗಿ ಟಾಸ್ ಕೂಡ ನಡೆದಿಲ್ಲ.

ಶೇ. 63 ರಷ್ಟು ಮಳೆ
ಹವಾಮಾನ ಇಲಾಖೆಯ ವರದಿ ಪ್ರಕಾರ ನವಿ ಮುಂಬೈನಲ್ಲಿ ಪಂದ್ಯದ ದಿನದಂದು ಮಳೆಯಾಗುವ ಸಾಧ್ಯತೆ ಶೇ. 63 ರಷ್ಟು ಇರಲಿದೆ ಎಂದು ವರದಿಯಾಗಿತ್ತು. ಅದರಂತೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಒಂದೊಮ್ಮೆ ಮಳೆ ಕೊಂಚ ವಿರಾಮ ತೆಗೆದುಕೊಂಡ ಕಾರಣ 3 ಗಂಟೆಗೆ ಟಾಸ್ ನಡೆಸಲು ತೀರ್ಮಾನಿಸಲಾಗಿತ್ತು. ಹಾಗೆಯೇ 3:30 ಕ್ಕೆ ಪಂದ್ಯ ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಟಾಸ್ ನಡೆಯುವುದಕ್ಕೂ ಮುನ್ನವೇ ಮತ್ತೆ ಮಳೆ ಸುರಿಯಲಾರಂಭಿಸಿದೆ.

ಮೀಸಲು ದಿನ ನಿಗದಿಪಡಿಸಲಾಗಿದೆ
ಮಳೆ ಧಾರಕಾರವಾಗಿ ಸುರಿಯುತ್ತಿರುವ ಕಾರಣ ಈ ಪಂದ್ಯ ನಡೆಯುತ್ತದೋ ಇಲ್ಲವೋ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಅಭಿಮಾನಿಗಳು ಚಿಂತಿಸಬೇಕಿಲ್ಲ. ಏಕೆಂದರೆ ಮಳೆಯಿಂದಾಗಿ ಇಂದು ಪಂದ್ಯ ನಡೆಯದಿದ್ದರೆ, ಮೀಸಲು ದಿನದಂದು ಈ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಮಳೆಯ ಮುನ್ಸೂಚನೆಯನ್ನು ಗಮನದಲಿಟ್ಟುಕೊಂಡು ಆಯೋಜಕರು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಿಗೆ ಮೀಸಲು ದಿನವನ್ನು ನಿಗದಿಪಡಿಸಿದ್ದರು. ಅದರಂತೆ ಫೈನಲ್ ಪಂದ್ಯಕ್ಕೆ ನವೆಂಬರ್ 2 ಅನ್ನು ಮೀಸಲು ದಿನವಾಗಿ ಕಾಯ್ದಿರಿಸಲಾಗಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!