World Cup 2025: ಇನ್ನೂ ಆರಂಭವಾಗದ ವಿಶ್ವಕಪ್ ಫೈನಲ್ ; ಮುಂಬೈನಲ್ಲಿ ಭಾರಿ ಮಳೆ

ICC Women’s World Cup 2025 Final: ಮುಂಬೈನಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಭಾರತ-ದಕ್ಷಿಣ ಆಫ್ರಿಕಾ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮಳೆಯಿಂದ ಪಂದ್ಯ ಇದುವರೆಗೂ ಆರಂಭವಾಗಿಲ್ಲ. ಒಂದು ವೇಳೆ ಇಂದು ಪಂದ್ಯ ನಡೆಯದಿದ್ದರೆ, ನವೆಂಬರ್ 2 ರಂದು ಮೀಸಲು ದಿನದಂದು ಪಂದ್ಯ ಪೂರ್ಣಗೊಳಿಸಲಾಗುತ್ತದೆ. ಮಳೆ ನಿಂತರೆ 20 ಓವರ್‌ಗಳ ಪಂದ್ಯ ನಡೆಸಲು ಪ್ರಯತ್ನಿಸಲಾಗುತ್ತದೆ.

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಫೈನಲ್ (ICC Women’s World Cup 2025 Final) ಪಂದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾದಂತಹ (India vs South Africa) ಬಲಿಷ್ಠ ತಂಡಗಳ ನಡುವೆ ನಡೆಯಲಿದೆ. ಆದರೆ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 3:00 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ ಇದುವರೆಗೂ ಆರಂಭವಾಗಿಲ್ಲ. ವಾಸ್ತವವಾಗಿ ಪಂದ್ಯದ ದಿನದಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೊದಲೇ ಮುನ್ಸೂಚನೆ ನೀಡಿತ್ತು. ಅದರಂತೆ ಮುಂಬೈನಲ್ಲಿ ಮಳೆ ಎಡಬಿಡದೆ ಸುರಿಯುತ್ತಿದೆ. ಇದರಿಂದಾಗಿ ಟಾಸ್ ಕೂಡ ನಡೆದಿಲ್ಲ.

ಶೇ. 63 ರಷ್ಟು ಮಳೆ
ಹವಾಮಾನ ಇಲಾಖೆಯ ವರದಿ ಪ್ರಕಾರ ನವಿ ಮುಂಬೈನಲ್ಲಿ ಪಂದ್ಯದ ದಿನದಂದು ಮಳೆಯಾಗುವ ಸಾಧ್ಯತೆ ಶೇ. 63 ರಷ್ಟು ಇರಲಿದೆ ಎಂದು ವರದಿಯಾಗಿತ್ತು. ಅದರಂತೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಒಂದೊಮ್ಮೆ ಮಳೆ ಕೊಂಚ ವಿರಾಮ ತೆಗೆದುಕೊಂಡ ಕಾರಣ 3 ಗಂಟೆಗೆ ಟಾಸ್ ನಡೆಸಲು ತೀರ್ಮಾನಿಸಲಾಗಿತ್ತು. ಹಾಗೆಯೇ 3:30 ಕ್ಕೆ ಪಂದ್ಯ ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಟಾಸ್ ನಡೆಯುವುದಕ್ಕೂ ಮುನ್ನವೇ ಮತ್ತೆ ಮಳೆ ಸುರಿಯಲಾರಂಭಿಸಿದೆ.

ಮೀಸಲು ದಿನ ನಿಗದಿಪಡಿಸಲಾಗಿದೆ
ಮಳೆ ಧಾರಕಾರವಾಗಿ ಸುರಿಯುತ್ತಿರುವ ಕಾರಣ ಈ ಪಂದ್ಯ ನಡೆಯುತ್ತದೋ ಇಲ್ಲವೋ ಎಂಬ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಅಭಿಮಾನಿಗಳು ಚಿಂತಿಸಬೇಕಿಲ್ಲ. ಏಕೆಂದರೆ ಮಳೆಯಿಂದಾಗಿ ಇಂದು ಪಂದ್ಯ ನಡೆಯದಿದ್ದರೆ, ಮೀಸಲು ದಿನದಂದು ಈ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಮಳೆಯ ಮುನ್ಸೂಚನೆಯನ್ನು ಗಮನದಲಿಟ್ಟುಕೊಂಡು ಆಯೋಜಕರು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಿಗೆ ಮೀಸಲು ದಿನವನ್ನು ನಿಗದಿಪಡಿಸಿದ್ದರು. ಅದರಂತೆ ಫೈನಲ್ ಪಂದ್ಯಕ್ಕೆ ನವೆಂಬರ್ 2 ಅನ್ನು ಮೀಸಲು ದಿನವಾಗಿ ಕಾಯ್ದಿರಿಸಲಾಗಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!