ಬಿಗ್​ಬಾಸ್ ಸ್ಪರ್ಧಿ ರಕ್ಷಿತಾಗೆ ಕಾನೂನು ಸಂಕಷ್ಟ ಎದುರಾಗಿದೆ . ಅಶ್ವಿನಿ ಗೌಡ ವಿರುದ್ಧ ಮಾತಾಡಿದ್ದೇ ರಕ್ಷಿತಾಗೆ ತಪ್ಪಾಯ್ತಾ?

ಬಿಗ್​ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ (Rakshita Shetty) ಕಾನೂನು ಸಂಕಷ್ಟ ಎದುರಾಗಿದೆ. ಕಲಾವಿದರಿಗೆ ಅವಮಾನ ಮಾಡಿದ ಆರೋಪವನ್ನು ಅಶ್ವಿನಿ ಗೌಡ ಮಾಡಿದ್ದು, ಈ ಸಂಬಂಧ ನಗರ ಪೊಲೀಸ್ ಕಮಿಷನರ್​​ಗೆ ದೂರು ಕೊಡಲು ನಿರ್ಧಾರ ಮಾಡಲಾಗಿದೆ.

ಬೆಂಗಳೂರು: ಬಿಗ್​ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ (Rakshita Shetty) ಕಾನೂನು ಸಂಕಷ್ಟ ಎದುರಾಗಿದೆ. ಕಲಾವಿದರಿಗೆ ಅವಮಾನ ಮಾಡಿದ ಆರೋಪವನ್ನು ಅಶ್ವಿನಿ ಗೌಡ ಮಾಡಿದ್ದು, ಈ ಸಂಬಂಧ ನಗರ ಪೊಲೀಸ್ ಕಮಿಷನರ್​​ಗೆ ದೂರು ಕೊಡಲು ನಿರ್ಧಾರ ಮಾಡಲಾಗಿದೆ. ಕುಶಲ ಕಲಾ ವೃಂದದಿಂದ ಕಂಪ್ಲೆಂಟ್ ಕೊಡಲು ನಿರ್ಧಾರ ಮಾಡಿದೆ. ಅಶ್ವಿನಿ ಗೌಡ ವಾರದ ಕಥೆಯಲ್ಲಿ ಸುದೀಪ್ ಎದುರು ಈ ವಿಚಾರವನ್ನು ಉಲ್ಲೇಖ ಮಾಡಿದ್ದಾರೆ. ನಿನ್ನೆ ನಡೆದ ಕಿಚ್ಚನ ಪಂಚಾಯ್ತಿಯಲ್ಲಿ ಈ ವಿಚಾರ ಚರ್ಚೆಗೆ ಬಂದಿತ್ತು.

ಅಶ್ವಿನಿ ಗೌಡ ಮತ್ತು ಕಾವ್ಯ ಶೈವ ಕಳೆದ ವಾರ ಬಿಗ್​ಬಾಸ್ ಮನೆಯಲ್ಲಿ ಜಗಳ ಆಡುತ್ತಿದ್ದರು. ಜೋರಾಗಿ ಕಿತ್ತಾಡುವಾಗ ಕಾವ್ಯ ಪರ ಬ್ಯಾಟ್ ಬೀಸಲು ರಕ್ಷಿತಾ ಶೆಟ್ಟಿ ಬಂದಿದ್ದಾರೆ. ಆಗ ರಕ್ಷಿತಾ ಶೆಟ್ಟಿ ನಿಮ್ಮ ಧಾರಾವಾಹಿಯನ್ನು ಹೊರಗೆ ಮಾಡಿ. ಬಿಗ್​ಬಾಸ್ ಮನೆಯಲ್ಲಿ ಅಲ್ಲ ಎಂದು ಕೂಗಿದ್ದಾರೆ. ಅದಕ್ಕೆ ಅಶ್ವಿನಿ ಗೌಡ, ಬೆಟ್ಟು ಮಾಡುತ್ತ ಕಲಾವಿದರಿಗೆ ಅವಮಾನ ಮಾಡಬೇಡ ಎಂದು ರಕ್ಷಿತಾ ಕಡೆ ತಿರುಗಿದ್ದಾರೆ. ನಿಂಗೆ ಅದ್ರಲ್ಲೇ ಹೊಡೀತಾರೆ ಹುಷಾರ್ ಎಂದಿದ್ದಾರೆ. ಅದಕ್ಕೆ ರಕ್ಷಿತಾ ಗೌಡ, ಮಾಡ್ತೀನಿ, ಮಾಡ್ತೀನಿ ಎಂದು ಜೋರಾಗಿ ಕೂಗಿದ್ದಾರೆ.

ಈ ವಿಚಾರದ ಬಗ್ಗೆ ಕಾವ್ಯ ಶೈವ ಸುದೀಪ್ ಎದುರು ಸ್ಪಷ್ಟನೆ ನೀಡಿದ್ದಾರೆ. ನಾನು ಜಗಳ ಆಡಬೇಕಾದರೆ ರಕ್ಷಿತಾ ಬಂದಿದ್ದು ನಿಜ. ಇದು ಸೀರಿಯಲ್ ಅಲ್ಲ, ನಾಟಕವಾಡಬೇಡಿ ಎಂಬ ಉದ್ದೇಶದಲ್ಲಿ ರಕ್ಷಿತಾ ಹೇಳಿದ್ದಾರೆ. ಆದರೆ ಅಶ್ವಿನಿ ಅವರು ಆ ಸ್ಟೇಟ್​ಮೆಂಟ್ ಅನ್ನು ತಿರುಚಿರೋದನ್ನು ಕಣ್ಣಾರೆ ನೋಡಿದೆ. ಕಲಾವಿದರ ಬಗ್ಗೆ ಕಮ್ಮಿ ಮಾತಾಡ್ತಾ ಇದ್ದೀಯಾ.. ಕಲಾವಿದರನ್ನ ಕೆಳಗೆ ಇಟ್ಟು ಮಾತಾಡ್ತೀಯಾ ಎಂದು ಹೇಳಿದರು. ಆದರೆ ರಕ್ಷಿತಾ ಮಾತಾಡಿದ್ದ ಉದ್ದೇಶವೇ ಬೇರೆ ಆಗಿತ್ತು ಎಂದು ಕಾವ್ಯ ಹೇಳಿದ್ದಾರೆ. ಇದೀಗ ಅಶ್ವಿನಿ ಗೌಡ ಮಾಡಿದ ಆರೋಪಕ್ಕೆ ಸಂಬಂಧಿಸಿ ಕುಶಲ ಕಲಾ ವೃಂದ ರಕ್ಷಿತಾ ಶೆಟ್ಟಿ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!