ಬಂಡೀಪುರ – ನಾಗರಹೊಳೆ ಸಫಾರಿ ಬಂದ್ ! ರಾಷ್ಟ್ರೀಯ ಉದ್ಯಾನವನದ ಸಿ ಎಫ್ ಪ್ರಭಾಕರನ್ ಎತ್ತಂಗಡಿ.

ಮೈಸೂರು ಜಿಲ್ಲೆಯ ನಂಜನಗೂಡು ಮತ್ತು ಸರಗೂರು ತಾಲೂಕಿನ ಗಡಿ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನರಭಕ್ಷಕ ವ್ಯಾಘ್ರಗಳು ನಾಲ್ಕು ಜನರ ಮೇಲೆ ದಾಳಿ ಮಾಡಿ ಮೂವರು ಮೃತಪಟ್ಟಿದ್ದಾರೆ.
ಸರಗೂರು ತಾಲೂಕಿನಲ್ಲಿ ಇಂದು ನಡೆದಿರುವ ಹುಲಿಯ ದಾಳಿಯಿಂದ ಜನರು ರೊಚ್ಚಿಗೆದ್ದಿದ್ದಾರೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಸಿಎಫ್ ಪ್ರಭಾಕರ್ ಎಂಬುವರನ್ನ ವರ್ಗಾವಣೆಗೊಳಿಸಿ ನೂತನ ಸಿಎಫ್ ಸಂಪತ್ ಕುಮಾರ್ ಎಂಬುವರನ್ನು ನಿಯೋಜನೆ ಮಾಡಿದ್ದಾರೆ.

ಹಳೆ ಹೆಗ್ಗುಡಿಲು ಗ್ರಾಮದ ದಂಡನಾಯಕ ಎಂಬ ರೈತನನ್ನು ಬಲಿ ಪಡೆದ ನರಭಕ್ಷಕ ವ್ಯಾಘ್ರವನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಅಗ್ರಹಿಸಿ ಸಾಕಷ್ಟು ಜನರ ತಂಡ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮುಗಿಬಿದ್ದಿದ್ದಾರೆ ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದಾರೆ. ಮೊಳೆಯೂರು ಮತ್ತು ಸರಗೂರು ಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೃತ ಎಂಬ ಮಹಿಳಾ ಆರ್ ಎಫ್ ಓ ಗೆ ಛೀಮಾರಿ ಹಾಕಿ ವಾಗ್ದಾಳಿ ನಡೆಸಿ ತಳ್ಳಾಟ ನೂಕಾಟ ನಡೆಸಲಾಗಿದೆ. ಹುಲಿಯ ದಾಳಿಯಿಂದ ಮೃತಪಟ್ಟಿರುವ ರೈತ ದಂಡ ನಾಯಕ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದಂಡನಾಯಕನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲು ಗ್ರಾಮಸ್ಥರು ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಗಡಿಭಾಗದ ತಾಲೂಕಾಗಿರುವ ನಂಜನಗೂಡು ಮತ್ತು ಸರಗೂರು ಭಾಗದ ರೈತರು ಆತಂಕದಲ್ಲೇ ದಿನದೊಡುತ್ತಿದ್ದಾರೆ.

ಹುಲಿಗಳ ಸಂತತಿ ಹೆಚ್ಚಾಗಿರುವ ಹಿನ್ನೆಲೆ ಯಾವ ವೇಳೆಯಲ್ಲಿ ಯಾರ ಮೇಲೆ ದಾಳಿ ಮಾಡುತ್ತದೆ? ಯಾರ ಜೀವ ಬಲಿ ತೆಗೆದುಕೊಳ್ಳುತ್ತದೆ ಎಂದು ರೈತರಲ್ಲಿ ಜೀವ ಭಯ ಎದುರಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಎಂದು ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಸಾರ್ವಜನಿಕರು ಮತ್ತು ರೈತರು ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದಾರೆ

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!