ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ; FIR ದಾಖಲು

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲು ಪ್ರಕರಣಗಳು ದಾಖಲಾಗಿವೆ. ಮೂರು ಎನ್​ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಎನ್​​ಐಎ ಕೂಡ ಮಧ್ಯೆ ಪ್ರವೇಶಿಸಿದೆ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ (parappana agrahara jail) ಕರ್ಮಕಾಂಡಗಳು ಒಂದೊಂದಾಗಿ ಹೊರಬರುತ್ತಿವೆ. ಐಷಾರಾಮಿ ಬದುಕಿನ ಒಂದೊಂದೇ ಕರಾಳತೆ ಬಯಲಾಗುತ್ತಿದೆ. ಈ ಬೆನ್ನಲ್ಲೇ ಗೃಹ ಇಲಾಖೆ ಅಲರ್ಟ್ ಆಗಿದೆ. ಇಬ್ಬರು ಜೈಲಧಿಕಾರಿಗಳ ತಲೆದಂಡವಾಗಿದೆ. ಇದೀಗ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಎನ್​​ಸಿಆರ್​​ ಮತ್ತು ಒಂದು ಎಫ್​​ಐಆರ್​​​ ದಾಖಲಾಗಿದೆ. ಜೊತೆಗೆ ಎನ್​​ಐಎ ಎಂಟ್ರಿ ಆಗಿದೆ.

ವಿಕೃತ ಕಾಮಿ, ನಟೋರಿಯಸ್ ರೌಡಿಶೀಟರ್​ಗಳು, ಅಷ್ಟೇ ಯಾಕೆ ಮೋಸ್ಟ್ ವಾಂಟೆಡ್ ಉಗ್ರಗಾಮಿಗಳು ಪರಪ್ಪನ ಅಗ್ರಹಾರ ಜೈಲಿಗೆ ಯಾವುದೋ ರೆಸಾರ್ಟ್​​ಗೆ ಬಂದಂತಿದ್ದಾರೆ. ಹೈಪ್ರೊಫೈಲ್ ಕೇಸ್​ಗಳ ಆರೋಪಿಗಳು, ಅಪರಾಧಿಗಳು ಶಿಕ್ಷೆ ಸನುಭವಿಸುತ್ತಿರುವ ಈ ಜೈಲು ಕ್ರಿಮಿನಲ್​ಗಳ ಪಾಲಿಗೆ ಸ್ವರ್ಗ. ಅದಕ್ಕೆ ಸಾಕ್ಷಿಯಾಗಿ ಕೈದಿಗಳು ಮೋಜು ಮಸ್ತಿ ಮಾಡುತ್ತಿದ್ದ ಸಾಲು ಸಾಲು ವಿಡಿಯೋಗಳು ರಾಜ್ಯದ ಜನರನ್ನು ಬೆಚ್ಚಿಬೀಳಿಸಿವೆ.

ಒಟ್ಟು ನಾಲ್ಕು ಪ್ರಕರಣಗಳ ದಾಖಲು
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಈವರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಒಟ್ಟು ನಾಲ್ಕು ದೂರು ದಾಖಲಾಗಿವೆ. ಈ ಪೈಕಿ ಮೂರು ಎನ್​​ಸಿ ಆರ್​​ ದಾಖಲಾದರೆ, ಒಂದು ಎಫ್ಐಆರ್​​ ದಾಖಲಾಗಿದೆ.
ಇಂದು ಸಸ್ಪೆಂಡ್ ಆಗಿರುವ ಜೈಲಿನ ಅಧೀಕ್ಷಕ ಮ್ಯಾಗೇರಿ ಅವರಿಂದಲೇ ದೂರು ನೀಡಲಾಗಿದೆ. ಅವರ ದೂರಿನ ಮೇರೆಗೆ ಜೈಲಿನಲ್ಲಿ ತಟ್ಟೆ, ಡ್ರಮ್ ಬಾರಿಸಿ ಡ್ಯಾನ್ಸ್ ಮಾಡಿದ್ದ ಸಜಾ ಬಂಧಿ ಪ್ಯಾಟ್ರಿಕ್ ಟೀಮ್​​​ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಎನ್​​ಸಿಆರ್​​ ಪ್ರಕರಣಗಳನ್ನ ಪೊಲೀಸರು ಎಫ್ಐಆರ್ ಮಾಡಿಕೊಳ್ಳಲಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಎನ್​ಐಎ ಅಧಿಕಾರಿಗಳ ಎಂಟ್ರಿ
ಇನ್ನು ಪರಪ್ಪನ ಅಗ್ರಹಾರದಲ್ಲಿ ಉಗ್ರರ ಕೈಗೆ ಮೊಬೈಲ್ ಸಿಗುತ್ತಿದ್ದಂತೆ ಎನ್​ಐಎ ಅಧಿಕಾರಿಗಳ ಎಂಟ್ರಿಯಾಗಿದೆ. ಸಿಸಿಬಿ ಕಚೇರಿಗೆ ಬಂದ ಅಧಿಕಾರಿಗಳ ತಂಡ, ಜೈಲಿನಲ್ಲಿ ಯಾವಾಗ ವಿಡಿಯೋ ರೆಕಾರ್ಡ್ ಮಾಡಲಾಗಿದೆ? ಜೈಲಿನಲ್ಲಿ ಉಗ್ರರು ಬಳಸುತ್ತಿದ್ದ ಮೊಬೈಲ್ ಫೋನ್ ಸಿಕ್ಕಿದೆಯಾ ಎಂಬೆಲ್ಲಾ ಮಾಹಿತಿ ಪಡೆದಿದ್ದಾರೆ. ಜೈಲಿನಲ್ಲಿ ಮೊಬೈಲ್ ಬಳಕೆ ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗಿಲ್ಲ. ಈ ಬಗ್ಗೆ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ.

ಇಂದು ಬೆಂಗಳೂರಿನ ಕಾರಾಗೃಹ ಕಚೇರಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸಭೆ ಮಾಡಿದರು. ಸುಮಾರು ಎರಡು ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪರಮೇಶ್ವರ್, ತರಾಟೆಗೆ ತೆಗೆದುಕೊಂಡರು. ಸಭೆಯ ಬಳಿಕ ಮಾತನಾಡಿದ ಪರಮೇಶ್ವರ್, ಜೈಲು ಅಧೀಕ್ಷಕ ಇಮಾಮ್ ಸಾಬ್ ಮ್ಯಾಗೇರಿ, ಹಾಗೂ ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್​ರನ್ನು ಬೇರೆ ಕಡೆಗೆ ಎತ್ತಂಗಡಿ ಮಾಡಲಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!