ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ; FIR ದಾಖಲು

ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲು ಪ್ರಕರಣಗಳು ದಾಖಲಾಗಿವೆ. ಮೂರು ಎನ್​ಸಿಆರ್ ಮತ್ತು ಒಂದು ಎಫ್ಐಆರ್ ದಾಖಲಾಗಿದೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದು, ಎನ್​​ಐಎ ಕೂಡ ಮಧ್ಯೆ ಪ್ರವೇಶಿಸಿದೆ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ (parappana agrahara jail) ಕರ್ಮಕಾಂಡಗಳು ಒಂದೊಂದಾಗಿ ಹೊರಬರುತ್ತಿವೆ. ಐಷಾರಾಮಿ ಬದುಕಿನ ಒಂದೊಂದೇ ಕರಾಳತೆ ಬಯಲಾಗುತ್ತಿದೆ. ಈ ಬೆನ್ನಲ್ಲೇ ಗೃಹ ಇಲಾಖೆ ಅಲರ್ಟ್ ಆಗಿದೆ. ಇಬ್ಬರು ಜೈಲಧಿಕಾರಿಗಳ ತಲೆದಂಡವಾಗಿದೆ. ಇದೀಗ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಎನ್​​ಸಿಆರ್​​ ಮತ್ತು ಒಂದು ಎಫ್​​ಐಆರ್​​​ ದಾಖಲಾಗಿದೆ. ಜೊತೆಗೆ ಎನ್​​ಐಎ ಎಂಟ್ರಿ ಆಗಿದೆ.

ವಿಕೃತ ಕಾಮಿ, ನಟೋರಿಯಸ್ ರೌಡಿಶೀಟರ್​ಗಳು, ಅಷ್ಟೇ ಯಾಕೆ ಮೋಸ್ಟ್ ವಾಂಟೆಡ್ ಉಗ್ರಗಾಮಿಗಳು ಪರಪ್ಪನ ಅಗ್ರಹಾರ ಜೈಲಿಗೆ ಯಾವುದೋ ರೆಸಾರ್ಟ್​​ಗೆ ಬಂದಂತಿದ್ದಾರೆ. ಹೈಪ್ರೊಫೈಲ್ ಕೇಸ್​ಗಳ ಆರೋಪಿಗಳು, ಅಪರಾಧಿಗಳು ಶಿಕ್ಷೆ ಸನುಭವಿಸುತ್ತಿರುವ ಈ ಜೈಲು ಕ್ರಿಮಿನಲ್​ಗಳ ಪಾಲಿಗೆ ಸ್ವರ್ಗ. ಅದಕ್ಕೆ ಸಾಕ್ಷಿಯಾಗಿ ಕೈದಿಗಳು ಮೋಜು ಮಸ್ತಿ ಮಾಡುತ್ತಿದ್ದ ಸಾಲು ಸಾಲು ವಿಡಿಯೋಗಳು ರಾಜ್ಯದ ಜನರನ್ನು ಬೆಚ್ಚಿಬೀಳಿಸಿವೆ.

ಒಟ್ಟು ನಾಲ್ಕು ಪ್ರಕರಣಗಳ ದಾಖಲು
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರವಾಗಿ ಈವರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಒಟ್ಟು ನಾಲ್ಕು ದೂರು ದಾಖಲಾಗಿವೆ. ಈ ಪೈಕಿ ಮೂರು ಎನ್​​ಸಿ ಆರ್​​ ದಾಖಲಾದರೆ, ಒಂದು ಎಫ್ಐಆರ್​​ ದಾಖಲಾಗಿದೆ.
ಇಂದು ಸಸ್ಪೆಂಡ್ ಆಗಿರುವ ಜೈಲಿನ ಅಧೀಕ್ಷಕ ಮ್ಯಾಗೇರಿ ಅವರಿಂದಲೇ ದೂರು ನೀಡಲಾಗಿದೆ. ಅವರ ದೂರಿನ ಮೇರೆಗೆ ಜೈಲಿನಲ್ಲಿ ತಟ್ಟೆ, ಡ್ರಮ್ ಬಾರಿಸಿ ಡ್ಯಾನ್ಸ್ ಮಾಡಿದ್ದ ಸಜಾ ಬಂಧಿ ಪ್ಯಾಟ್ರಿಕ್ ಟೀಮ್​​​ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಎನ್​​ಸಿಆರ್​​ ಪ್ರಕರಣಗಳನ್ನ ಪೊಲೀಸರು ಎಫ್ಐಆರ್ ಮಾಡಿಕೊಳ್ಳಲಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಎನ್​ಐಎ ಅಧಿಕಾರಿಗಳ ಎಂಟ್ರಿ
ಇನ್ನು ಪರಪ್ಪನ ಅಗ್ರಹಾರದಲ್ಲಿ ಉಗ್ರರ ಕೈಗೆ ಮೊಬೈಲ್ ಸಿಗುತ್ತಿದ್ದಂತೆ ಎನ್​ಐಎ ಅಧಿಕಾರಿಗಳ ಎಂಟ್ರಿಯಾಗಿದೆ. ಸಿಸಿಬಿ ಕಚೇರಿಗೆ ಬಂದ ಅಧಿಕಾರಿಗಳ ತಂಡ, ಜೈಲಿನಲ್ಲಿ ಯಾವಾಗ ವಿಡಿಯೋ ರೆಕಾರ್ಡ್ ಮಾಡಲಾಗಿದೆ? ಜೈಲಿನಲ್ಲಿ ಉಗ್ರರು ಬಳಸುತ್ತಿದ್ದ ಮೊಬೈಲ್ ಫೋನ್ ಸಿಕ್ಕಿದೆಯಾ ಎಂಬೆಲ್ಲಾ ಮಾಹಿತಿ ಪಡೆದಿದ್ದಾರೆ. ಜೈಲಿನಲ್ಲಿ ಮೊಬೈಲ್ ಬಳಕೆ ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗಿಲ್ಲ. ಈ ಬಗ್ಗೆ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ.

ಇಂದು ಬೆಂಗಳೂರಿನ ಕಾರಾಗೃಹ ಕಚೇರಿಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸಭೆ ಮಾಡಿದರು. ಸುಮಾರು ಎರಡು ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪರಮೇಶ್ವರ್, ತರಾಟೆಗೆ ತೆಗೆದುಕೊಂಡರು. ಸಭೆಯ ಬಳಿಕ ಮಾತನಾಡಿದ ಪರಮೇಶ್ವರ್, ಜೈಲು ಅಧೀಕ್ಷಕ ಇಮಾಮ್ ಸಾಬ್ ಮ್ಯಾಗೇರಿ, ಹಾಗೂ ಉಪಾಧೀಕ್ಷಕರಾದ ಅಶೋಕ್ ಭಜಂತ್ರಿ ಎಂಬುವವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕ ಸುರೇಶ್​ರನ್ನು ಬೇರೆ ಕಡೆಗೆ ಎತ್ತಂಗಡಿ ಮಾಡಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!