ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುಸಲ್ಮಾನರಿಗೆ, ಭಯೋತ್ಪಾದಕರಿಗೆ ಎಲ್ಲಾ ಸೌಲಭ್ಯ: ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರು: ಪರಪ್ಪನ ಅಗ್ರಹಾರದ ಕರ್ಮಕಾಂಡಗಳು ಒಂದೊಂದಾಗಿ ಬಯಲಾಗುತ್ತಿವೆ. ಜೈಲಿನಿಂದ ಹೊರಬಿದ್ದ ದೃಶ್ಯಗಳು ಜೈಲು ವ್ಯವಸ್ಥೆಯ ಅವ್ಯವಸ್ಥೆಗೆ ಕನ್ನಡಿ ಹಿಡಿದಿದೆ. ಉಗ್ರರು, ನಟೋರಿಯಸ್ ರೇಪಿಸ್ಟ್ ಹಾಗೂ ಅಪಾಯಕಾರಿ ಕೈದಿಗಳಿಗೆ ಸಿಗ್ತಿರೋ ಸವಲತ್ತು ಸಮಾಜವನ್ನ ಆತಂಕಕ್ಕೆ ದೂಡುವಂತೆ ಮಾಡಿದೆ. ಈ ಅಕ್ರಮ ಚಟುವಟಿಕೆಗಳ ವಿರುದ್ಧ ಬಿಜೆಪಿ ಹೋರಾಟ ನಡೆಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರನ್ನ ಹೊಣೆ ಮಾಡಿರೋ ಬಿಜೆಪಿ ನಿಗಿನಿಗಿ ಅಂತಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮುಸಲ್ಮಾನರನ್ನು ಮುಟ್ಟಿದರೆ ನಮಗೆ ಪ್ರಮೋಷನ್ ಇಲ್ಲ ಅಂತಾ ಕರ್ನಾಟಕದ ಪೊಲೀಸರು ಭಯಗೊಂಡಿದ್ದಾರೆ. ಯಾವ ಸ್ಟೇಷನ್ ಗಳಲ್ಲೂ ಈಗ ಮುಸಲ್ಮಾನರ ಮೇಲೆ ಏನೂ ಕೇಸ್ ಮಾಡಲ್ಲ. ಈಗ ಅದು ಪರಪ್ಪನ ಅಗ್ರಹಾರದವರೆಗೆ ಹೋಗಿದೆ. ಪರಪ್ಪನ ಅಗ್ರಹಾರದಲ್ಲಿ ಮುಸಲ್ಮಾನರಿಗೆ, ಭಯೋತ್ಪಾದಕರಿಗೆ ಎಲ್ಲಾ ಸೌಲಭ್ಯ ಕೊಡುತ್ತಾರೆ. ದೇಶದಲ್ಲಿರುವ ಎಲ್ಲಾ ಭಯೋತ್ಪಾದಕರು ನಮಗೆ ಕರ್ನಾಟಕ ಕೊಡಿ ಎಂದು ಅರ್ಜಿ ಹಾಕುತ್ತಿದ್ದಾರಂತೆ. ದರ್ಶನ್ ಬೀಡಿ ಸೇದಿದ್ದಕ್ಕೆ ಸುಪ್ರೀಂ ಕೋರ್ಟ್ ಗೆ ಹೋಗಿ ಬೇಲ್ ಕ್ಯಾನ್ಸಲ್ ಮಾಡಿಸಿದರು. ಇದರಲ್ಲಿ ಸುಪ್ರೀಂ ಕೋರ್ಟ್ ಗೆ ಸರ್ಕಾರ ಹೋಗಲ್ಲ. ದರ್ಶನ್ ಗೆ ಒಂದು ಕಾನೂನು, ಭಯೋತ್ಪಾದಕರಿಗೆ ರಾಜಾತಿಥ್ಯ. ಯಾಕೆಂದರೆ ದರ್ಶನ್ ಹಿಂದೂ, ಇವರು ಮುಸಲ್ಮಾನರು. ದರ್ಶನ್ ತಪ್ಪು ಮಾಡಿದ್ದಾರೆ, ಇಲ್ಲ ಅಂತಾ ಹೇಳಲ್ಲ. ಆದರೆ ಕಾನೂನು ಎಲ್ಲರಿಗೂ ಒಂದೇ ತಾನೇ. ದೇಶದ್ರೋಹಿಗೆ ಒಂದು ಕಾನೂನು, ದರ್ಶನ್ ಗೆ ಒಂದು ಕಾನೂನಾ? ಎಂದು ಪ್ರಶ್ನಿಸಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!