ರಿಷಾ ಬಟ್ಟೆ ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು, ಗಿಲ್ಲಿ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಗಿಲ್ಲಿ ನಟ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ. ರಿಷಾ ಅವರ ಬಟ್ಟೆಗಳನ್ನು ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿಲಾಗಿದೆ. ಸದ್ಯ ಈ ಪ್ರಕರಣವನ್ನು ಮಹಿಳಾ ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಎಲ್ಲರ ಜೊತೆ ತಮಾಷೆ ಮಾಡುತ್ತಾ ಕಾಲ ಕಳೆಯುತ್ತಾ ಇದ್ದಾರೆ. ಆದರೆ ಅವರು ಮಾಡುವ ಕೆಲವು ತಮಾಷೆಯಿಂದ ತೊಂದರೆ ಕೂಡ ಉಂಟಾಗುತ್ತದೆ. ಅಚ್ಚರಿ ಎಂದರೆ, ಈಗ ಬಿಗ್ ಬಾಸ್ ಮನೆ ಒಳಗಿನ ವಿಷಯ ಮಹಿಳಾ ಆಯೋಗದ (Women Commission) ತನಕ ತಲುಪಿದೆ! ಹೌದು, ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಅಷ್ಟಕ್ಕೂ ಗಿಲ್ಲಿ ಮಾಡಿದ ತಪ್ಪು ಏನು? ಸಹ ಸ್ಪರ್ಧಿ ರಿಷಾ (Risha) ಅವರ ಬಟ್ಟೆಗಳನ್ನು ಮುಟ್ಟಿದ್ದು. ಈ ವಿಚಾರವನ್ನು ಇಟ್ಟುಕೊಂಡು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಿಗ್ ಬಾಸ್ ಮನೆಯಲ್ಲಿ ಒಂದು ದಿನ ರಿಷಾ ಅವರು ಗಿಲ್ಲಿ ನಟನ ತಾಳ್ಮೆ ಕೆಡುವಂತೆ ನಡೆದುಕೊಂಡಿದ್ದರು. ಬಾತ್ ರೂಮ್ ಒಳಗೆ ಹೋಗಿದ್ದ ರಿಷಾ ಅವರು ದೀರ್ಘ ಸಮಯ ತೆಗೆದುಕೊಂಡರು. ತಮಗೆ ನೀರು ಬೇಕು ಎಂದು ಗಿಲ್ಲಿ ನಟ ಮನವಿ ಮಾಡಿದರೂ ಕೂಡ ರಿಷಾ ಅದಕ್ಕೆ ಸ್ಪಂದಿಸಲಿಲ್ಲ. ಅದರಿಂದಾಗಿ ಗಿಲ್ಲಿಗೆ ಕೋಪ ಬಂತು. ಆಗ ಗಿಲ್ಲಿ ನಡೆದುಕೊಂಡ ರೀತಿಯಿಂದ ಎಲ್ಲರಿಗೂ ಅಚ್ಚರಿ ಆಯಿತು.

ಗಿಲ್ಲಿ ಅವರು ರಿಷಾ ಅವರ ಬಟ್ಟೆಗಳನ್ನೆಲ್ಲ ತಂದು ಬಾತ್​ ರೂಮ್​ ಮುಂದೆ ಸುರಿದರು. ಆ ಬಳಿಕ ಗಿಲ್ಲಿ ಮತ್ತು ರಿಷಾ ನಡುವೆ ದೊಡ್ಡ ಜಗಳ ಆಯಿತು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಈಗ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ಅಲ್ಲದೇ, ಗಿಲ್ಲಿ ನಟ ಅವರು ಮಹಿಳೆಯರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಈ ದೂರಿನ ಅನ್ವಯ ಮಹಿಳಾ ಆಯೋಗವು ವಿಡಿಯೋ ಫೂಟೇಜ್ ಪರಿಶೀಲನೆ ಮಾಡುತ್ತಿದೆ. ಆದರೆ ಬಿಗ್ ಬಾಸ್ ಆಯೋಜಕರು ಯಾವುದೇ ವಿಡಿಯೋ ಫೂಟೇಜ್ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಸಿಗದ ಕಾರಣಕ್ಕೆ ಈ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಲಾಗಿದೆ.

ಜಗಳ ನಡೆದಾಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದರು. ಅದು ಬಿಗ್ ಬಾಸ್ ಮನೆಯ ಮೂಲ ನಿಯಮದ ಉಲ್ಲಂಘನೆ. ಆದರೂ ಕೂಡ ಇನ್ನುಳಿದ ಸ್ಪರ್ಧಿಗಳು ಕೇವಲ ವಾರ್ನಿಂಗ್ ನೀಡಿ ರಿಷಾ ಅವರನ್ನು ಉಳಿಸಿಕೊಂಡರು. ವಾರಾಂತ್ಯದ ಸಂಚಿಕೆಯಲ್ಲಿ ಈ ವಿಚಾರದ ಬಗ್ಗೆ ಸುದೀಪ್ ಕೂಡ ಮಾತನಾಡಿದ್ದರು. ಹೆಣ್ಮಕ್ಕಳ ಬಟ್ಟೆ, ಬ್ಯಾಗ್​​ಗಳಿಗೆ ಅನುಮತಿ ಇಲ್ಲದೇ ಕೈ ಹಾಕಬಾರದು ಎಂದು ಗಿಲ್ಲಿಗೆ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!