ರಿಷಾ ಬಟ್ಟೆ ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು, ಗಿಲ್ಲಿ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಗಿಲ್ಲಿ ನಟ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ. ರಿಷಾ ಅವರ ಬಟ್ಟೆಗಳನ್ನು ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿಲಾಗಿದೆ. ಸದ್ಯ ಈ ಪ್ರಕರಣವನ್ನು ಮಹಿಳಾ ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಎಲ್ಲರ ಜೊತೆ ತಮಾಷೆ ಮಾಡುತ್ತಾ ಕಾಲ ಕಳೆಯುತ್ತಾ ಇದ್ದಾರೆ. ಆದರೆ ಅವರು ಮಾಡುವ ಕೆಲವು ತಮಾಷೆಯಿಂದ ತೊಂದರೆ ಕೂಡ ಉಂಟಾಗುತ್ತದೆ. ಅಚ್ಚರಿ ಎಂದರೆ, ಈಗ ಬಿಗ್ ಬಾಸ್ ಮನೆ ಒಳಗಿನ ವಿಷಯ ಮಹಿಳಾ ಆಯೋಗದ (Women Commission) ತನಕ ತಲುಪಿದೆ! ಹೌದು, ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಅಷ್ಟಕ್ಕೂ ಗಿಲ್ಲಿ ಮಾಡಿದ ತಪ್ಪು ಏನು? ಸಹ ಸ್ಪರ್ಧಿ ರಿಷಾ (Risha) ಅವರ ಬಟ್ಟೆಗಳನ್ನು ಮುಟ್ಟಿದ್ದು. ಈ ವಿಚಾರವನ್ನು ಇಟ್ಟುಕೊಂಡು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಿಗ್ ಬಾಸ್ ಮನೆಯಲ್ಲಿ ಒಂದು ದಿನ ರಿಷಾ ಅವರು ಗಿಲ್ಲಿ ನಟನ ತಾಳ್ಮೆ ಕೆಡುವಂತೆ ನಡೆದುಕೊಂಡಿದ್ದರು. ಬಾತ್ ರೂಮ್ ಒಳಗೆ ಹೋಗಿದ್ದ ರಿಷಾ ಅವರು ದೀರ್ಘ ಸಮಯ ತೆಗೆದುಕೊಂಡರು. ತಮಗೆ ನೀರು ಬೇಕು ಎಂದು ಗಿಲ್ಲಿ ನಟ ಮನವಿ ಮಾಡಿದರೂ ಕೂಡ ರಿಷಾ ಅದಕ್ಕೆ ಸ್ಪಂದಿಸಲಿಲ್ಲ. ಅದರಿಂದಾಗಿ ಗಿಲ್ಲಿಗೆ ಕೋಪ ಬಂತು. ಆಗ ಗಿಲ್ಲಿ ನಡೆದುಕೊಂಡ ರೀತಿಯಿಂದ ಎಲ್ಲರಿಗೂ ಅಚ್ಚರಿ ಆಯಿತು.

ಗಿಲ್ಲಿ ಅವರು ರಿಷಾ ಅವರ ಬಟ್ಟೆಗಳನ್ನೆಲ್ಲ ತಂದು ಬಾತ್​ ರೂಮ್​ ಮುಂದೆ ಸುರಿದರು. ಆ ಬಳಿಕ ಗಿಲ್ಲಿ ಮತ್ತು ರಿಷಾ ನಡುವೆ ದೊಡ್ಡ ಜಗಳ ಆಯಿತು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಈಗ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ಅಲ್ಲದೇ, ಗಿಲ್ಲಿ ನಟ ಅವರು ಮಹಿಳೆಯರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಈ ದೂರಿನ ಅನ್ವಯ ಮಹಿಳಾ ಆಯೋಗವು ವಿಡಿಯೋ ಫೂಟೇಜ್ ಪರಿಶೀಲನೆ ಮಾಡುತ್ತಿದೆ. ಆದರೆ ಬಿಗ್ ಬಾಸ್ ಆಯೋಜಕರು ಯಾವುದೇ ವಿಡಿಯೋ ಫೂಟೇಜ್ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಸಿಗದ ಕಾರಣಕ್ಕೆ ಈ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಲಾಗಿದೆ.

ಜಗಳ ನಡೆದಾಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದರು. ಅದು ಬಿಗ್ ಬಾಸ್ ಮನೆಯ ಮೂಲ ನಿಯಮದ ಉಲ್ಲಂಘನೆ. ಆದರೂ ಕೂಡ ಇನ್ನುಳಿದ ಸ್ಪರ್ಧಿಗಳು ಕೇವಲ ವಾರ್ನಿಂಗ್ ನೀಡಿ ರಿಷಾ ಅವರನ್ನು ಉಳಿಸಿಕೊಂಡರು. ವಾರಾಂತ್ಯದ ಸಂಚಿಕೆಯಲ್ಲಿ ಈ ವಿಚಾರದ ಬಗ್ಗೆ ಸುದೀಪ್ ಕೂಡ ಮಾತನಾಡಿದ್ದರು. ಹೆಣ್ಮಕ್ಕಳ ಬಟ್ಟೆ, ಬ್ಯಾಗ್​​ಗಳಿಗೆ ಅನುಮತಿ ಇಲ್ಲದೇ ಕೈ ಹಾಕಬಾರದು ಎಂದು ಗಿಲ್ಲಿಗೆ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!