ರಿಷಾ ಬಟ್ಟೆ ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು, ಗಿಲ್ಲಿ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಗಿಲ್ಲಿ ನಟ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ. ರಿಷಾ ಅವರ ಬಟ್ಟೆಗಳನ್ನು ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿಲಾಗಿದೆ. ಸದ್ಯ ಈ ಪ್ರಕರಣವನ್ನು ಮಹಿಳಾ ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಎಲ್ಲರ ಜೊತೆ ತಮಾಷೆ ಮಾಡುತ್ತಾ ಕಾಲ ಕಳೆಯುತ್ತಾ ಇದ್ದಾರೆ. ಆದರೆ ಅವರು ಮಾಡುವ ಕೆಲವು ತಮಾಷೆಯಿಂದ ತೊಂದರೆ ಕೂಡ ಉಂಟಾಗುತ್ತದೆ. ಅಚ್ಚರಿ ಎಂದರೆ, ಈಗ ಬಿಗ್ ಬಾಸ್ ಮನೆ ಒಳಗಿನ ವಿಷಯ ಮಹಿಳಾ ಆಯೋಗದ (Women Commission) ತನಕ ತಲುಪಿದೆ! ಹೌದು, ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಅಷ್ಟಕ್ಕೂ ಗಿಲ್ಲಿ ಮಾಡಿದ ತಪ್ಪು ಏನು? ಸಹ ಸ್ಪರ್ಧಿ ರಿಷಾ (Risha) ಅವರ ಬಟ್ಟೆಗಳನ್ನು ಮುಟ್ಟಿದ್ದು. ಈ ವಿಚಾರವನ್ನು ಇಟ್ಟುಕೊಂಡು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಿಗ್ ಬಾಸ್ ಮನೆಯಲ್ಲಿ ಒಂದು ದಿನ ರಿಷಾ ಅವರು ಗಿಲ್ಲಿ ನಟನ ತಾಳ್ಮೆ ಕೆಡುವಂತೆ ನಡೆದುಕೊಂಡಿದ್ದರು. ಬಾತ್ ರೂಮ್ ಒಳಗೆ ಹೋಗಿದ್ದ ರಿಷಾ ಅವರು ದೀರ್ಘ ಸಮಯ ತೆಗೆದುಕೊಂಡರು. ತಮಗೆ ನೀರು ಬೇಕು ಎಂದು ಗಿಲ್ಲಿ ನಟ ಮನವಿ ಮಾಡಿದರೂ ಕೂಡ ರಿಷಾ ಅದಕ್ಕೆ ಸ್ಪಂದಿಸಲಿಲ್ಲ. ಅದರಿಂದಾಗಿ ಗಿಲ್ಲಿಗೆ ಕೋಪ ಬಂತು. ಆಗ ಗಿಲ್ಲಿ ನಡೆದುಕೊಂಡ ರೀತಿಯಿಂದ ಎಲ್ಲರಿಗೂ ಅಚ್ಚರಿ ಆಯಿತು.

ಗಿಲ್ಲಿ ಅವರು ರಿಷಾ ಅವರ ಬಟ್ಟೆಗಳನ್ನೆಲ್ಲ ತಂದು ಬಾತ್​ ರೂಮ್​ ಮುಂದೆ ಸುರಿದರು. ಆ ಬಳಿಕ ಗಿಲ್ಲಿ ಮತ್ತು ರಿಷಾ ನಡುವೆ ದೊಡ್ಡ ಜಗಳ ಆಯಿತು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಈಗ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ಅಲ್ಲದೇ, ಗಿಲ್ಲಿ ನಟ ಅವರು ಮಹಿಳೆಯರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಈ ದೂರಿನ ಅನ್ವಯ ಮಹಿಳಾ ಆಯೋಗವು ವಿಡಿಯೋ ಫೂಟೇಜ್ ಪರಿಶೀಲನೆ ಮಾಡುತ್ತಿದೆ. ಆದರೆ ಬಿಗ್ ಬಾಸ್ ಆಯೋಜಕರು ಯಾವುದೇ ವಿಡಿಯೋ ಫೂಟೇಜ್ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಸಿಗದ ಕಾರಣಕ್ಕೆ ಈ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳಿಸಲಾಗಿದೆ.

ಜಗಳ ನಡೆದಾಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದರು. ಅದು ಬಿಗ್ ಬಾಸ್ ಮನೆಯ ಮೂಲ ನಿಯಮದ ಉಲ್ಲಂಘನೆ. ಆದರೂ ಕೂಡ ಇನ್ನುಳಿದ ಸ್ಪರ್ಧಿಗಳು ಕೇವಲ ವಾರ್ನಿಂಗ್ ನೀಡಿ ರಿಷಾ ಅವರನ್ನು ಉಳಿಸಿಕೊಂಡರು. ವಾರಾಂತ್ಯದ ಸಂಚಿಕೆಯಲ್ಲಿ ಈ ವಿಚಾರದ ಬಗ್ಗೆ ಸುದೀಪ್ ಕೂಡ ಮಾತನಾಡಿದ್ದರು. ಹೆಣ್ಮಕ್ಕಳ ಬಟ್ಟೆ, ಬ್ಯಾಗ್​​ಗಳಿಗೆ ಅನುಮತಿ ಇಲ್ಲದೇ ಕೈ ಹಾಕಬಾರದು ಎಂದು ಗಿಲ್ಲಿಗೆ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದರು.

Related Posts

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!