ಅಶ್ವಿನಿ ಕಣ್ಣಲ್ಲಿ ನೀರು ತರಿಸಿದ ಗಿಲ್ಲಿ, ‘ನಾನು ಬದುಕ್ತಾ ಇರೋದೇ ಮರ್ಯಾದೆಗೋಸ್ಕರ.’

ಬಿಗ್​ಬಾಸ್​​ನ ಇವತ್ತಿನ ಎಪಿಸೋಡ್​​ನಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ಮಧ್ಯೆ ಘನಘೋರ ಮಾತಿನ ಯುದ್ಧ ನಡೆದಿದ್ದು, ಕೊನೆಯಲ್ಲಿ ಅಶ್ವಿನಿ ಗೌಡ ಕಣ್ಣೀರಿಟ್ಟಿದ್ದಾರೆ.

ಇಬ್ಬರ ಮಧ್ಯೆ ಆಗಿದ್ದೇನು?
ಇಂದು ರಾತ್ರಿ ಬಿಗ್​​ಬಾಸ್ ಮನೆಯಲ್ಲಿ ಏನು ಆಗಿದೆ ಅನ್ನೋದಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಗಿಲ್ಲಿ ಮತ್ತು ಅಶ್ವಿನಿ ಗೌಡ ಮಧ್ಯೆ ಗಲಾಟೆ ಆಗಿರೋದಂತೂ ಸತ್ಯ. ಕಲರ್ಸ್ ಕನ್ನಡ ಬೆಳಗ್ಗೆ ಪ್ರೊಮೋ ಶೇರ್ ಮಾಡಿದೆ. ಅದರಲ್ಲಿ ಗಿಲ್ಲಿ ಹಾಗೂ ಅಶ್ವಿನಿ ಗೌಡ ಗೇಮ್​ನ ಉಸ್ತುವಾರಿ ನೀಡಲಾಗಿದೆ. ಈ ವೇಳೆ ಸ್ಪರ್ಧಿಗಳ ನಡುವೆ ಗೇಮ್ ಆಡಿಸುವ ವಿಚಾರಕ್ಕೆ ಗಲಾಟೆ ಆಗಿದೆ. ಒಬ್ಬರಿಗೊಬ್ಬರು ಕರೆಕ್ಟ್ ಆಗಿ ಉಸ್ತುವಾರಿ ಮಾಡುವಂತೆ ಕಿರುಚಾಡಿದ್ದಾರೆ. ಆಗ ಗಿಲ್ಲಿ, ನೀನು ಕರೆಕ್ಟ್ ಆಗಿ ಮಾಡು ಎಂದಿದ್ದಾರೆ. ಅಷ್ಟಕ್ಕೆ ರೊಚ್ಚಿಗೇಳುವ ಅಶ್ವಿನಿ, ನೀನ್ಯಾರು ಅಂತಾ ಹೇಳೋಕೆ ನೀನ್ಯಾವನೋ ಎಂದು ಕೂಗಾಡಿದ್ದಾರೆ. ಆಗ ಇಬ್ಬರ ಮಧ್ಯೆ ಮಾತಿನ ಯುದ್ಧ ಜೋರಾಗಿ ನಡೆದಿದೆ. ಮಾತಿನ ಮಧ್ಯೆ ನೀನ್ಯಾವನೋ, ಯೋಗ್ಯತೆ ಎಂಬ ಪದಗಳೆಲ್ಲ ತೂರಿಕೊಂಡು ಬಂದಿವೆ. ಇದೇ ಗಲಾಟೆಯಲ್ಲಿ ಅಶ್ವಿನಿಗೆ ಗಿಲ್ಲಿ ನೋವು ತರುವ ರೀತಿಯಲ್ಲಿ ಮಾತನ್ನಾಡಿದಂತೆ ಕಾಣ್ತಿದೆ. ಗಲಾಟೆ ಮುಗಿದ ಬಳಿಕ ಧ್ರುವಂತ್, ಜಾಹ್ನವಿ ಹಾಗೂ ಧನುಷ್ ಜೊತೆ ಅಶ್ವಿನಿ ನೋವು ಹಂಚಿಕೊಂಡಿದ್ದಾರೆ. ಒಬ್ಬ ಕಾಮಿಡಿ ನಟ ಅಂದಮಾತ್ರಕ್ಕೆ ಏನು ಮಾತಾಡಿದರೂ ಓಕೆನಾ? ಒಬ್ಬರನ್ನ ತೇಜೋವಧೆ ಮಾಡೋದು ಎಷ್ಟು ಸರಿ? ಅದೆಲ್ಲ ಮಾತನ್ನಾಡೋಕೆ ಆತ ಯಾರು? ಎಂದು ಬೇಸರ ಹೊರ ಹಾಕಿದ್ದಾರೆ.ಗಿಲ್ಲಿ ಹೇಳಿದ್ದೇನು..?
ಗಾರ್ಡನ್ ಏರಿಯಾದಲ್ಲಿ ಅಶ್ವಿನಿ, ಜಾಹ್ನವಿ ಹಾಗೂ ಧ್ರುವಂತ್ ಮತ್ತು ರಾಶಿಕಾ ಒಂದು ಕಡೆ ಕೂತ್ಕೊಂಡು ಗಲಾಟೆ ವಿಚಾರವನ್ನು ಚರ್ಚೆ ಮಾಡ್ತಿರುತ್ತಾರೆ. ಅವರಿಗೆ ಕೇಳುವ ರೀತಿಯಲ್ಲಿ ಜೋರಾಗಿ.. ಎಲ್ಲರೂ ವೃದ್ಧಾಪ್ಯದವರೇ ಸೇರಿ ಹೋಗ್ತಾರೆ ಎಂದು ಕಷ್ಟಪಟ್ಟು ಕಳುಹಿಸುತ್ತ ಇದ್ದಾರೆ ಎಂದಿದ್ದಾರೆ. ವೃದ್ಧರು ಅಂತಾ ಹೇಳಿರೋದು ಅಶ್ವಿನಿಗೆ ಹರ್ಟ್ ಆದಂತೆ ಕಾಣ್ತಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!