ಟಾಸ್ಕ್ ಸೋತ ಅಶ್ವಿನಿಗೆ ಸಂಗೀತಾ, ಡ್ರೋನ್ ಉದಾಹರಣೆ ಕೊಟ್ಟ ಸುದೀಪ್

Bigg Boss: 10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ ತೊಂದರೆ ಆಗಿತ್ತು. ಇದನ್ನು ಸುದೀಪ್ ನೆನಪಿಸಿಕೊಂಡರು.

ಬಿಗ್ ಬಾಸ್ ಮನೆಯಲ್ಲಿ ಕೆಲವೊಮ್ಮೆ ಟಾಸ್ಕ್​ಗಳು ನಡೆಯುವಾಗ ಅದು ಯಾವ ಹಂತಕ್ಕೆ ಬೇಕಾದರೂ ಹೋಗಬಹುದು. ಆಟವನ್ನು ಗೆಲ್ಲಬೇಕು ಎಂಬ ಭರದಲ್ಲಿ ಸಾಕಷ್ಟು ತಪ್ಪುಗಳು ನಡೆದು ಹೋಗುತ್ತವೆ. ಈ ವಾರವೂ ಕೆಲವು ತಪ್ಪುಗಳು ನಡೆದವು. ಅದನ್ನು ಸುದೀಪ್ ತಿದ್ದಿದ್ದಾರೆ. ಇನ್ನು, ಆಟವನ್ನು ವೈಯಕ್ತಿಕವಾಗಿ ತೆಗೆದುಕೊಂಡ ಅಶ್ವಿನಿ ಗೌಡ ಅವರಿಗೆ ಸುದೀಪ್ ಪಾಠ ಮಾಡಿದರು. 10ನೇ ಸೀಸನ್​ನ ಸಂಗೀತಾ ಹಾಗೂ ಡ್ರೋನ್ ಪ್ರತಾಪ್ ಉದಾಹರಣೆಯನ್ನು ನೀಡಿದರು.

ಬಿಗ್ ಬಾಸ್ ಕನ್ನಡದಲ್ಲಿ ಈ ವಾರ ಒಂದು ಟಾಸ್ಕ್ ನೀಡಲಾಗಿತ್ತು. ಕ್ಯಾಪ್ಟನ್ ರೇಸ್​ ಅಲ್ಲಿ ಕುಳಿತ ಅಶ್ವಿನಿ ಹಾಗೂ ಅಭಿಷೇಕ್ ಅವರನ್ನು ಡಿಸ್ಟ್ರಾಕ್ಟ್ ಮಾಡಬೇಕು. ಗಿಲ್ಲಿ ಅವರು ಅಶ್ವಿನಿ ಅವರ ವೈಯಕ್ತಿಕ ವಿಚಾರ ಇಟ್ಟುಕೊಂಡು ಅವರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದರು. ಈ ಪ್ರಯತ್ನ ಯಶಸ್ಸು ಆಗಿದೆ ಎಂದೇ ಹೇಳಿದರೂ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಗಿಲ್ಲಿ ಮಾತು ಕೇಳುತ್ತಾ ಕೇಳುತ್ತಾ ಅವರು ತಾವು 12 ನಿಮಿಷಕ್ಕೆ ಬೆಲ್ ಹೊಡೆಯಬೇಕು ಎಂಬುದನ್ನು ಮರೆತಿದ್ದರು. ತಮ್ಮ ಕೆಲಸವನ್ನು ಅವರು ಸಮರ್ಥಿಸಿಕೊಳ್ಳಲು ಬಂದರು. ‘ಗಿಲ್ಲಿ ಮನಸ್ಸಲ್ಲಿ ಎಷ್ಟು ಕೆಟ್ಟ ಅಂಶಗಳು ಇವೆ ಎಂಬುದನ್ನು ನೋಡಬೇಕಿತ್ತು’ ಎಂದು ಅಶ್ವಿನಿ ಹೇಳಿದರು. ಇದನ್ನು ಸುದೀಪ್ ಒಪ್ಪಲಿಲ್ಲ. ‘10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಟಾಸ್ಕ್ ಆಡುವಾಗ ಸಾಕಷ್ಟು ತೊಂದರೆ ಅನುಭವಿಸಿದರು. ಅವರು ಆಸ್ಪತ್ರೆಗೆ ಕೂಡ ಹೋಗಬೇಕಾಯಿತು. ಅಲ್ಲಿ ಆಟ ಆಡಿ ಗೆಲ್ಲೋದಷ್ಟೇ ಮುಖ್ಯ. ಹಾಗೆ ನೋಡಿದರೆ ಗಿಲ್ಲಿ-ಕಾವ್ಯಾ ಗೆದ್ದರು’ ಎಂದು ಹೇಳಿದರು.

‘ನೀವು ಟ್ರಿಗರ್ ಆಗದೆ 12 ನಿಮಿಷದ ಲೆಕ್ಕಾಚಾರಕ್ಕೆ ಬೆಲ್ ಹೊಡೆದಿದ್ದರೆ ಮೊದಲ ಮಹಿಳಾ ಕ್ಯಾಪ್ಟನ್ ಆಗುತ್ತಿದ್ದಿರಿ ಅಲ್ಲವೇ’ ಎಂದು ಸುದೀಪ್ ಪ್ರಶ್ನೆ ಮಾಡಿದರು. ಆದರೂ ಅಶ್ವಿನಿ ಅವರು ತಾವು ಮಾಡಿದ್ದೇ ಸರಿ ಎಂದು ಸಮರ್ಥಿಸಿಕೊಳ್ಳಲು ಬಂದರು. 10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ ತೊಂದರೆ ಆಗಿತ್ತು. ಇದನ್ನು ಸುದೀಪ್ ನೆನಪಿಸಿಕೊಂಡರು.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!