ಟಾಸ್ಕ್ ಸೋತ ಅಶ್ವಿನಿಗೆ ಸಂಗೀತಾ, ಡ್ರೋನ್ ಉದಾಹರಣೆ ಕೊಟ್ಟ ಸುದೀಪ್

Bigg Boss: 10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ ತೊಂದರೆ ಆಗಿತ್ತು. ಇದನ್ನು ಸುದೀಪ್ ನೆನಪಿಸಿಕೊಂಡರು.

ಬಿಗ್ ಬಾಸ್ ಮನೆಯಲ್ಲಿ ಕೆಲವೊಮ್ಮೆ ಟಾಸ್ಕ್​ಗಳು ನಡೆಯುವಾಗ ಅದು ಯಾವ ಹಂತಕ್ಕೆ ಬೇಕಾದರೂ ಹೋಗಬಹುದು. ಆಟವನ್ನು ಗೆಲ್ಲಬೇಕು ಎಂಬ ಭರದಲ್ಲಿ ಸಾಕಷ್ಟು ತಪ್ಪುಗಳು ನಡೆದು ಹೋಗುತ್ತವೆ. ಈ ವಾರವೂ ಕೆಲವು ತಪ್ಪುಗಳು ನಡೆದವು. ಅದನ್ನು ಸುದೀಪ್ ತಿದ್ದಿದ್ದಾರೆ. ಇನ್ನು, ಆಟವನ್ನು ವೈಯಕ್ತಿಕವಾಗಿ ತೆಗೆದುಕೊಂಡ ಅಶ್ವಿನಿ ಗೌಡ ಅವರಿಗೆ ಸುದೀಪ್ ಪಾಠ ಮಾಡಿದರು. 10ನೇ ಸೀಸನ್​ನ ಸಂಗೀತಾ ಹಾಗೂ ಡ್ರೋನ್ ಪ್ರತಾಪ್ ಉದಾಹರಣೆಯನ್ನು ನೀಡಿದರು.

ಬಿಗ್ ಬಾಸ್ ಕನ್ನಡದಲ್ಲಿ ಈ ವಾರ ಒಂದು ಟಾಸ್ಕ್ ನೀಡಲಾಗಿತ್ತು. ಕ್ಯಾಪ್ಟನ್ ರೇಸ್​ ಅಲ್ಲಿ ಕುಳಿತ ಅಶ್ವಿನಿ ಹಾಗೂ ಅಭಿಷೇಕ್ ಅವರನ್ನು ಡಿಸ್ಟ್ರಾಕ್ಟ್ ಮಾಡಬೇಕು. ಗಿಲ್ಲಿ ಅವರು ಅಶ್ವಿನಿ ಅವರ ವೈಯಕ್ತಿಕ ವಿಚಾರ ಇಟ್ಟುಕೊಂಡು ಅವರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದರು. ಈ ಪ್ರಯತ್ನ ಯಶಸ್ಸು ಆಗಿದೆ ಎಂದೇ ಹೇಳಿದರೂ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಗಿಲ್ಲಿ ಮಾತು ಕೇಳುತ್ತಾ ಕೇಳುತ್ತಾ ಅವರು ತಾವು 12 ನಿಮಿಷಕ್ಕೆ ಬೆಲ್ ಹೊಡೆಯಬೇಕು ಎಂಬುದನ್ನು ಮರೆತಿದ್ದರು. ತಮ್ಮ ಕೆಲಸವನ್ನು ಅವರು ಸಮರ್ಥಿಸಿಕೊಳ್ಳಲು ಬಂದರು. ‘ಗಿಲ್ಲಿ ಮನಸ್ಸಲ್ಲಿ ಎಷ್ಟು ಕೆಟ್ಟ ಅಂಶಗಳು ಇವೆ ಎಂಬುದನ್ನು ನೋಡಬೇಕಿತ್ತು’ ಎಂದು ಅಶ್ವಿನಿ ಹೇಳಿದರು. ಇದನ್ನು ಸುದೀಪ್ ಒಪ್ಪಲಿಲ್ಲ. ‘10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಟಾಸ್ಕ್ ಆಡುವಾಗ ಸಾಕಷ್ಟು ತೊಂದರೆ ಅನುಭವಿಸಿದರು. ಅವರು ಆಸ್ಪತ್ರೆಗೆ ಕೂಡ ಹೋಗಬೇಕಾಯಿತು. ಅಲ್ಲಿ ಆಟ ಆಡಿ ಗೆಲ್ಲೋದಷ್ಟೇ ಮುಖ್ಯ. ಹಾಗೆ ನೋಡಿದರೆ ಗಿಲ್ಲಿ-ಕಾವ್ಯಾ ಗೆದ್ದರು’ ಎಂದು ಹೇಳಿದರು.

‘ನೀವು ಟ್ರಿಗರ್ ಆಗದೆ 12 ನಿಮಿಷದ ಲೆಕ್ಕಾಚಾರಕ್ಕೆ ಬೆಲ್ ಹೊಡೆದಿದ್ದರೆ ಮೊದಲ ಮಹಿಳಾ ಕ್ಯಾಪ್ಟನ್ ಆಗುತ್ತಿದ್ದಿರಿ ಅಲ್ಲವೇ’ ಎಂದು ಸುದೀಪ್ ಪ್ರಶ್ನೆ ಮಾಡಿದರು. ಆದರೂ ಅಶ್ವಿನಿ ಅವರು ತಾವು ಮಾಡಿದ್ದೇ ಸರಿ ಎಂದು ಸಮರ್ಥಿಸಿಕೊಳ್ಳಲು ಬಂದರು. 10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ ತೊಂದರೆ ಆಗಿತ್ತು. ಇದನ್ನು ಸುದೀಪ್ ನೆನಪಿಸಿಕೊಂಡರು.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!