ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಇಲ್ಲ ಎಂದ ಬಿಗ್ ಬಾಸ್ ಅತಿಥಿಗಳು

ಬಿಗ್ ಬಾಸ್ ಮನೆಗೆ ಆಗಮಿಸಿದ ಅತಿಥಿಗಳು ಗಿಲ್ಲಿಯ ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹನುಮಂತನ ಶಾಂತ ಸ್ವಭಾವಕ್ಕೆ ಗಿಲ್ಲಿಯನ್ನು ಹೋಲಿಸಿದ ಅತಿಥಿಗಳು, ಗಿಲ್ಲಿ ಆಟ ಹನುಮಂತನ 10 ಪರ್ಸೆಂಟ್ ಕೂಡ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ. ಗಿಲ್ಲಿ ಅತಿಥಿಗಳೊಂದಿಗೆ ಹಾಸ್ಯ ಮಾಡಿದರು, ಆದರೆ ಅತಿಥಿಗಳು ಅದನ್ನು ಗಂಭೀರವಾಗಿ ತೆಗೆದುಕೊಂಡರು.

 

ಕಳೆದ ಸೀಸನ್​ನಲ್ಲಿ ಹನುಮಂತ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಇಡೀ ಶೋ ದಿಕ್ಕನ್ನು ಬದಲಿಸಿದ್ದರು. ಹಲವು ತಿಂಗಳ ಕಾಲ ಅವರು ಭರ್ಜರಿ ಮನರಂಜನೆ ನೀಡಿದ್ದರು. ಯಾರೇ ನಾಮಿನೇಷನ್ ಮಾಡಿದರೂ ಅವರು ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಆ ಬಳಿಕ ಕೋಟಿ ಮತಗಳ ಅಂತರದಲ್ಲಿ ಅವರು ಗೆಲುವು ಕಂಡರು. ಈ ಸೀಸನ್​ ಅಲ್ಲಿ ಗಿಲ್ಲಿ ಕೂಡ ರೇಸ್​ನಲ್ಲಿ ಮುಂದಿದ್ದಾರೆ. ಆದರೆ, ಹನುಮಂತನ 10 ಪರ್ಸೆಂಟ್ ಕೂಡ ಗಿಲ್ಲಿ ಇಲ್ಲ ಎಂದು ಬಿಗ್ ಬಾಸ್ (Bigg Boss)​ ಮನೆಗೆ ಬಂದ ಅತಿಥಿಗಳು ಹೇಳಿಕೆ ನೀಡಿದ್ದಾರೆ. ಬಿಗ್ ಬಾಸ್​ ಈಗ ಬಿಬಿ ಪ್ಯಾಲೇಸ್ ಆಗಿ ಬದಲಾಗಿದೆ. ಉಗ್ರಂ ಮಂಜು ಅವರು ಬ್ಯಾಚುಲರ್ ಪಾರ್ಟಿ ಮಾಡೋದಕ್ಕೆ ಆಗಮಿಸಿದ್ದಾರೆ. ಅವರ ಜೊತೆ ಮೋಕ್ಷಿತಾ ಪೈ, ರಜತ್, ಚೈತ್ರಾ ಕುಂದಾಪುರ, ತ್ರಿವಿಕ್ರಮ್ ಕೂಡ ಜೊತೆಗಿದ್ದಾರೆ. ಅವರು ಸಖತ್ ಮನರಂಜನೆ ನೀಡುತ್ತಿದ್ದಾರೆ. ಈ ವೇಳೆ ಗಿಲ್ಲಿಯನ್ನು ಅವರು ಹನುಮಂತನ ಜೊತೆ ಹೋಲಿಕೆ ಮಾಡಿ ನೋಡಿದ್ದಾರೆ.

ಅತಿಥಿಗಳ ಆತಿಥ್ಯವನ್ನು ಒಳ್ಳೆಯ ರೀತಿಯಲ್ಲಿ ಮಾಡಬೇಕು ಎಂಬುದು ಬಿಗ್ ಬಾಸ್ ಆದೇಶ ಆಗಿತ್ತು. ಆದರೆ, ಇದನ್ನು ಗಿಲ್ಲಿ ಅವರು ಗಂಭೀರವಾಗಿ ಸ್ವೀಕರಿಸಿಲ್ಲ. ಅತಿಥಿಗಳ ಕಾಲೆಳೆಯುವ ಪ್ರಯತ್ನವನ್ನು ಗಿಲ್ಲಿ ಮಾಡಿದ್ದಾರೆ. ಇದು ಅತಿಥಿಗಳ ಕೋಪಕ್ಕೆ ಕಾರಣ ಆಗಿದೆ. ರಜತ್ ಹಾಗೂ ಮಂಜು ಕರೆದು ಅನೇಕ ಬಾರಿ ವಾರ್ನ್ ಮಾಡಿದ್ದಾರೆ. ಆದರೆ, ಈ ವಾರ್ನಿಂಗ್​​ಗೆ ಎಲ್ಲ ಗಿಲ್ಲಿ ಜಗ್ಗುವವರೇ ಅಲ್ಲ. ಅವರು ತಮ್ಮ ಕೀಟಲೆ ಮುಂದುವರಿಸಿದ್ದಾರೆ. ಎಲ್ಲ ಸಂದರ್ಭದಲ್ಲೂ ಹಾಸ್ಯ ಮನಸ್ಥಿತಿಯಲ್ಲೇ ನಡೆದುಕೊಂಡಿದ್ದಾರೆ. ಈ ವಿಚಾರದ ಬಗ್ಗೆ ರಜತ್, ತ್ರಿವಿಕ್ರಂ ಮಂಜು ಮೊದಲಾದವರು ಚರ್ಚೆ ಮಾಡಿದ್ದಾರೆ. ‘ಇವನು ನಮ್ಮವನ (ಹನುಮಂತ) ರೀತಿಯೇ. ನಮ್ಮವನು ಶಾಂತವಾಗಿ ಇರ್ತಿದ್ದ. ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತ್ರ ಮಾತನಾಡುತ್ತಿದ್ದ. ಇವನು ಬಾಯಿಗೆ ಬಂದಂತೆಲ್ಲ ಮಾತನಾಡುತ್ತಿದ್ದಾನೆ’ ಎಂದು ರಜತ್ ಹೇಳಿದರು. ‘ಅವನ 10 ಪರ್ಸೆಂಟ್ ಕೂಡ ಇವನಿಲ್ಲ ಬಿಡಿ’ ಎಂದು ತ್ರಿವಿಕ್ರಂ ಅವರು ಹೇಳಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!