ಕಾಮನ್ ಲಾ ಅಡ್ಮಿಷನ್ ಟೆಸ್ಟ್‌ನಲ್ಲಿ ರೋಹನ್ ವಿ. ಗಂಗಡ್ಕರ್ ರಾಜ್ಯಕ್ಕೆ ಎರಡನೇ ಸ್ಥಾನ

ರಾಷ್ಟ್ರ ಮಟ್ಟದಲ್ಲಿ ನಡೆಯುವ ಕಾಮನ್ ಲಾ ಅಡ್ಮಿಷನ್ ಟೆಸ್ಟ್‌ನಲ್ಲಿ ಮೈಸೂರಿನ ಕಾನೂನು ವಿದ್ಯಾರ್ಥಿ ರೋಹನ್ ವಿ ಗಂಗಡ್ಕರ್ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಒಟ್ಟು 737 ಸೀಟುಗಳಿದ್ದು ರೋಹನ್ 36ನೇ ರ‌್ಯಾಂಕ್ ಗಳಿಸಿದ್ದಾರೆ. ಜತೆಗೆ ರಾಜ್ಯ ಮಟ್ಟದಲ್ಲಿ 10 ಸೀಟುಗಳಿದ್ದು 2ನೇ ರ‌್ಯಾಂಕ್ ಪಡೆದಿದ್ದಾರೆ. ಈ ಪರೀಕ್ಷೆಯಲ್ಲಿ ವಿವಿಧ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.‌

ರೋಹನ್ ವಿ ಗಂಗಡ್ಕರ್ ಹಿರಿಯ ವಕೀಲರು ಹಾಗೂ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕ ಎಚ್ ಎನ್ ವೆಂಕಟೇಶ್ ಹಾಗೂ ಕೆ ಎ‌ ಎಸ್ ಅಧಿಕಾರಿ ಮಂಜುಳಾ ಅವರ ಪುತ್ರ. ರೋಹನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಮೊದಲ ಸ್ಥಾನ ಗಳಿಸಿದ್ದರು. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ್ದರು.

ಸದ್ಯ ಮೈಸೂರು ಜೆ ಎಸ್ ಎಸ್ ಕಾನೂನು ಕಾಲೇಜಿನಲ್ಲಿ ಓದುತ್ತಿರುವ ರೋಹನ್ ಹಲವು ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಸ್ಥಾನ ಗಳಿಸಿ ರಾಜ್ಯ ಹಾಗೂ ಮೈಸೂರು ಜಿಲ್ಲೆಗೆ ಕೀರ್ತಿ ತಂದುಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ, ಹೈಕೋರ್ಟ್ ಸುಪ್ರೀಂ ಕೋರ್ಟ್ ಜಿಲ್ಲಾ ಹಾಗೂ ರಾಜ್ಯ ಪೊಲೀಸ್ ಸೈಬರ್ ಕಚೇರಿಯಲ್ಲಿ ಯಶಸ್ವಿಯಾಗಿ ಇಂಟೆನ್‌ಶಿಪ್ ಪೂರ್ಣಗೊಳಿಸಿದ್ದಾರೆ.

ರೋಹನ್ ವಿ ಗಂಗಡ್ಕರ್ ತಂದೆ ಎಚ್. ಎನ್. ವೆಂಕಟೇಶ್ ಅವರ ಲಾಗೈಡ್ ಪತ್ರಿಕೆ ಆನ್‌ಲೈನ್ ಸ್ವರೂಪದಲ್ಲಿ ಹೊರಬರಲು ಹಾಗೂ ಅದರಲ್ಲಿ ಜನ ಸಾಮಾನ್ಯರಿಗೆ ಬೇಕಾದ ಲೇಖನಗಳು ಹಾಗೂ ಮಹತ್ವದ ತೀರ್ಪುಗಳ ಲೇಖನ ಹೊರತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

    ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!