2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ.

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು. 2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿ ಹೊಡೆದು 23 ವರ್ಷದ ಜಾಹ್ನವಿ ಕಂದುಲಾ ಸಾವನ್ನಪ್ಪಿದ್ದರು.

ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಈ ಘಟನೆ ಜನವರಿ 2023 ರಲ್ಲಿ ನಡೆದಿತ್ತು. ಸಿಯಾಟಲ್ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಮಾದಕವಸ್ತು ಸೇವನೆ ಮಾಡಿ, ಫೋನ್​​ ಅಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದರು.

ಅವರು 25 mph ವೇಗದಲ್ಲಿ ಚಾಲನೆ ಮಾಡುವ ಪ್ರದೇಶದಲ್ಲಿ 74 mph (119 kph) ವೇಗದಲ್ಲಿ ಚಾಲನೆ ಮಾಡುತ್ತಿದ್ದರು. ನಂತರ ಅಧಿಕಾರಿಗೆ ಅಜಾಗರೂಕ ಚಾಲನೆಗಾಗಿ 5,000 ಡಾಲರ್ ದಂಡ ವಿಧಿಸಲಾಯಿತು. ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಯಿತು. ಆದಾಗ್ಯೂ, ಕಿಂಗ್ ಕೌಂಟಿ ಪ್ರಾಸಿಕ್ಯೂಟರ್‌ಗಳು ಅಧಿಕಾರಿ ಉದ್ದೇಶಪೂರ್ವಕವಾಗಿ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದಾರೆಂದು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಅವರ ವಿರುದ್ಧ ಯಾವುದೇ ಗಂಭೀರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಿಲ್ಲ.

ಮತ್ತೊಬ್ಬರ ಬಾಡಿ ಕ್ಯಾಮರಾದಲ್ಲಿ ರೆಕಾರ್ಡ್​ ಆಗಿದ್ದ ದೃಶ್ಯಗಳು ಬೆಳಕಿಗೆ ಬಂದಾಗ ವಿಷಯ ತುಂಬಾ ಗಂಭೀರವಾಯಿತು. ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ನ್ಯಾಯಾಲಯದಲ್ಲಿ ಇತ್ಯರ್ಥ ಅರ್ಜಿ ಸಲ್ಲಿಸಲಾಗಿದೆ. ಕುಟುಂಬದ ವಕೀಲರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಗರ ಅಟಾರ್ನಿ ಎರಿಕಾ ಇವಾನ್ಸ್ ಮಾತನಾಡಿ, ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಇತ್ಯರ್ಥವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಸಾಂತ್ವನ ನೀಡುತ್ತದೆ ಎಂದು ನಂಬಿದ್ದೇವೆಂದು ಹೇಳಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!