2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ.

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು. 2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿ ಹೊಡೆದು 23 ವರ್ಷದ ಜಾಹ್ನವಿ ಕಂದುಲಾ ಸಾವನ್ನಪ್ಪಿದ್ದರು.

ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಈ ಘಟನೆ ಜನವರಿ 2023 ರಲ್ಲಿ ನಡೆದಿತ್ತು. ಸಿಯಾಟಲ್ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಮಾದಕವಸ್ತು ಸೇವನೆ ಮಾಡಿ, ಫೋನ್​​ ಅಲ್ಲಿ ಮಾತನಾಡುತ್ತಾ ಕಾರು ಚಲಾಯಿಸುತ್ತಿದ್ದರು.

ಅವರು 25 mph ವೇಗದಲ್ಲಿ ಚಾಲನೆ ಮಾಡುವ ಪ್ರದೇಶದಲ್ಲಿ 74 mph (119 kph) ವೇಗದಲ್ಲಿ ಚಾಲನೆ ಮಾಡುತ್ತಿದ್ದರು. ನಂತರ ಅಧಿಕಾರಿಗೆ ಅಜಾಗರೂಕ ಚಾಲನೆಗಾಗಿ 5,000 ಡಾಲರ್ ದಂಡ ವಿಧಿಸಲಾಯಿತು. ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಯಿತು. ಆದಾಗ್ಯೂ, ಕಿಂಗ್ ಕೌಂಟಿ ಪ್ರಾಸಿಕ್ಯೂಟರ್‌ಗಳು ಅಧಿಕಾರಿ ಉದ್ದೇಶಪೂರ್ವಕವಾಗಿ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದಾರೆಂದು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಅವರ ವಿರುದ್ಧ ಯಾವುದೇ ಗಂಭೀರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಿಲ್ಲ.

ಮತ್ತೊಬ್ಬರ ಬಾಡಿ ಕ್ಯಾಮರಾದಲ್ಲಿ ರೆಕಾರ್ಡ್​ ಆಗಿದ್ದ ದೃಶ್ಯಗಳು ಬೆಳಕಿಗೆ ಬಂದಾಗ ವಿಷಯ ತುಂಬಾ ಗಂಭೀರವಾಯಿತು. ಕಳೆದ ಶುಕ್ರವಾರ ಕಿಂಗ್ ಕೌಂಟಿ ಸುಪೀರಿಯರ್ ನ್ಯಾಯಾಲಯದಲ್ಲಿ ಇತ್ಯರ್ಥ ಅರ್ಜಿ ಸಲ್ಲಿಸಲಾಗಿದೆ. ಕುಟುಂಬದ ವಕೀಲರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಗರ ಅಟಾರ್ನಿ ಎರಿಕಾ ಇವಾನ್ಸ್ ಮಾತನಾಡಿ, ಜಾಹ್ನವಿ ಕಂದುಲಾ ಅವರ ಸಾವು ಹೃದಯವಿದ್ರಾವಕವಾಗಿತ್ತು. ಈ ಆರ್ಥಿಕ ಇತ್ಯರ್ಥವು ಕಂದುಲಾ ಕುಟುಂಬಕ್ಕೆ ಸ್ವಲ್ಪ ಸಾಂತ್ವನ ನೀಡುತ್ತದೆ ಎಂದು ನಂಬಿದ್ದೇವೆಂದು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!