ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ,ಕೋಟ್ಯಂತರ ರೂ. ವಂಚನೆ!

ವೆಂಕಟೇಶ ಎಂಬಾತ ಚಿಟ್ ಫಂಡ್ ವ್ಯವಹಾರದ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರಿಂದ ಹಣ ಸಂಗ್ರಹಿಸಿ ಪರಾರಿಯಾಗಿದ್ದಾನೆ. 800ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದು, 200ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ವಂಚಕನನ್ನು ಬಂಧಿಸಿ ಹಣ ಮರಳಿಸುವಂತೆ ಸಂತ್ರಸ್ತರು ಆಗ್ರಹಿಸಿದ್ದಾರೆ.
ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ

ಭಾರೀ ಚೀಟಿ ವಂಚನೆ ಪ್ರಕರಣವೊಂದರಲ್ಲಿ ಬಳ್ಳಾರಿಯ ನೂರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಬೆಳಕಿಗೆ ಬಂದಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಎಂಬಾತ ಚೀಟಿ ವ್ಯವಹಾರದ ಹೆಸರಿನಲ್ಲಿ ಸುಮಾರು 800ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹಿಸಿದ್ದಾನೆ ಎನ್ನಲಾಗಿದೆ. ಒಬ್ಬರಿಂದ 10 ಸಾವಿರ ರೂಪಾಯಿಯಿಂದ ಹಿಡಿದು 1 ಕೋಟಿ ರೂಪಾಯಿ ವರೆಗೆ ಹಣ ಪಡೆದುಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಆತ ಸಂಗ್ರಹಿಸಿದ ಒಟ್ಟು ಮೊತ್ತ ನೂರಾರು ಕೋಟಿಗಳಿಗೆ ತಲುಪಿರಬಹುದೆಂದು ಅಂದಾಜಿಸಲಾಗಿದೆ.


ಹಣ ಕಳೆದುಕೊಂಡವರಲ್ಲಿ ಟೀ ಅಂಗಡಿ ನಡೆಸುವವರು, ಬೀದಿ ವ್ಯಾಪಾರಿಗಳು, ತರಕಾರಿ ಮಾರಾಟಗಾರರು ಸೇರಿದಂತೆ ಬಡ ಹಾಗೂ ಮಧ್ಯಮ ವರ್ಗದ ಜನರು ಹೆಚ್ಚಿದ್ದಾರೆ. ಮಕ್ಕಳ ಶಿಕ್ಷಣ, ಮಗಳ ಮದುವೆ, ಮನೆ ನಿರ್ಮಾಣ, ಹೋಟೆಲ್ ಆರಂಭಿಸುವ ಕನಸು ಸೇರಿದಂತೆ ವಿವಿಧ ಉದ್ದೇಶಗಳಿಗೆ ವರ್ಷಗಳ ಕಾಲ ದುಡಿದು ಕೂಡಿಸಿದ ಹಣವನ್ನು ಚೀಟಿ ರೂಪದಲ್ಲಿ ಹೂಡಿಕೆ ಮಾಡಿದ್ದರು. ಕಟ್ಟಿದ ಹಣಕ್ಕೆ ಹೆಚ್ಚಿನ ಬಡ್ಡಿ ಸಿಗುತ್ತದೆ ಎಂಬ ಭರವಸೆಯ ಮಾತುಗಳಿಗೆ ಮೋಸಹೋಗಿದ್ದಾರೆ.

200ಕ್ಕೂ ಹೆಚ್ಚು ಜನರಿಂದ ಪೊಲೀಸ್ ದೂರು


ಕೋಟ್ಯಂತರ ರೂಪಾಯಿ ಸಂಗ್ರಹಿಸಿದ ಬಳಿಕ ವೆಂಕಟೇಶ ಕಳೆದ ತಿಂಗಳು ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಇದುವರೆಗೆ ಆತನ ಸುಳಿವು ಪತ್ತೆಯಾಗಿಲ್ಲ. ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರು ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಶೀಘ್ರ ಬಂಧಿಸಿ ನಮ್ಮ ಹಣ ವಾಪಸ್ ಕೊಡಿಸುವಂತೆ ವಂಚನೆಗೊಳಗಾದವರು ಪೊಲೀಸರನ್ನು ಆಗ್ರಹಿಸುತ್ತಿದ್ದಾರೆ.

ಈ ಪ್ರಕರಣ ಸಂಬಂಧ ಸ್ಥಳೀಯ ಶಾಸಕ ಭರತ್ ರೆಡ್ಡಿ ಕೂಡ ಪೊಲೀಸರೊಂದಿಗೆ ಮಾತನಾಡಿ, ಆರೋಪಿಯನ್ನು ಪತ್ತೆಹಚ್ಚಿ ಅಮಾಯಕರ ಹಣ ಮರಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ವಿಪರ್ಯಾಸವೆಂದರೆ, ವೆಂಕಟೇಶ ಕಾಣೆಯಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಮಿಸ್ಸಿಂಗ್ ದೂರು ದಾಖಲಿಸಿರುವ ಮಾಹಿತಿ ಕೂಡ ಲಭ್ಯವಾಗಿದೆ. ಇದರಿಂದ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದೆ.

ಉಂಡ ಮನೆಗೇ ಕನ್ನ ಹಾಕಿದ BSNL ಅಧಿಕಾರಿಗಳು 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳವು, ಒಟ್ಟಿನಲ್ಲಿ ಹೆಚ್ಚು ಲಾಭದ ಆಸೆಗೆ ಬಿದ್ದು ದುಡಿದ ಹಣವನ್ನು ಹೂಡಿಕೆ ಮಾಡಿದ ನೂರಾರು ಕುಟುಂಬಗಳು ಇದೀಗ ಬೀದಿಗೆ ಬಂದಂತಾಗಿದ್ದು, ಕಂಗಾಲಾಗಿವೆ. ವಂಚಕನನ್ನು ಶೀಘ್ರ ಪತ್ತೆಹಚ್ಚಿ ಜನರ ಹಣ ಮರಳಿಸುವಲ್ಲಿ ಪೊಲೀಸರು ಯಶಸ್ವಿಯಾಗುತ್ತಾರೆಯೇ ಎಂಬುದು ಕಾದು ನೋಡಬೇಕಾಗಿದೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!