70ನೇ ಫಿಲ್ಮ್​ಫೇರ್ ಪ್ರಶಸ್ತಿ ಪಡೆದ ಕನ್ನಡ ಕಲಾವಿದರು

 

70ನೇ ಫಿಲ್ಮ್​ಫೇರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೊಚ್ಚಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಶ್ರೀಮುರಳಿ ಮತ್ತು ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಶಾಖಾಹಾರಿ’ ಸಿನಿಮಾಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ.

ಕೇರಳದ ಕೊಚ್ಚಿಯಲ್ಲಿ ‘70ನೇ ಫಿಲ್ಮ್​​ಫೇರ್ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆದಿದೆ. 2024ರಲ್ಲಿ ತೆರೆಕಂಡ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಝಗಮಗಿಸುವ ವೇದಿಕೆಯಲ್ಲಿ ಅವಾರ್ಡ್ ಫಂಕ್ಷನ್ ನಡೆಯಿತು. ‘ಕೋಳಿ ಎಸ್ರು’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು. ‘ಬಘೀರ’ ಸಿನಿಮಾದ ನಟನೆಗಾಗಿ ಶ್ರೀಮುರಳಿ ಅವರಿಗೆ ಬೆಸ್ಟ್ ಆ್ಯಕ್ಟರ್ ಅವಾರ್ಡ್ ನೀಡಲಾಯಿತು.

‘ಕೆರೆಬೇಟೆ’ ಸಿನಿಮಾದಲ್ಲಿನ ನಟನೆಗಾಗಿ ಗೌರಿಶಂಕರ್ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರು. ಅಂಕಿತಾ ಅಮರ್ ಅವರಿಗೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ‘ಬ್ಲಿಂಕ್’ ಚಿತ್ರಕ್ಕಾಗಿ ಗೋಪಾಲಕೃಷ್ಣ ದೇಶಪಾಂಡೆ ಅವರು ಅತ್ಯುತ್ತಮ ಪೋಷಕ ನಟ ಪಶಸ್ತಿ ಪಡೆದರು. ‘ಭೀಮ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಪ್ರಿಯಾ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸಿಕ್ಕಿದೆ.

70ನೇ ಫಿಲ್ಮ್ ಫೇರ್ ಪ್ರಶಸ್ತಿ ಪಡೆದವರ ಪಟ್ಟಿ: ಅತ್ಯುತ್ತಮ ಸಿನಿಮಾ: ಶಾಖಾಹಾರಿ (ನಿರ್ದೇಶನ: ಸಂದೀಪ್ ಸುಂಕದ್) ಅತ್ಯುತ್ತಮ ನಿರ್ದೇಶಕ: ಪೃಥ್ವಿ ಕೋಣನೂರು (ಹದಿನೇಳೆಂಟು) ಅತ್ಯುತ್ತಮ ನಿನಿಮಾ: ವಿಮರ್ಶಕರ ಆಯ್ಕೆ- ಬ್ಲಿಂಕ್ (ನಿರ್ದೇಶನ: ಶ್ರೀನಿಧಿ ಬೆಂಗಳೂರು) ಅತ್ಯುತ್ತಮ ಸಂಗೀತ: ಅರ್ಜುನ್ ಜನ್ಯ (ಕೃಷ್ಣಂ ಪ್ರಣಯ ಸಖಿ)

ಅತ್ಯುತ್ತಮ ಹೊಸ ನಟಿ: ಬಿಂಧು ಶಿವರಾಮ್ (ಕೆರೆಬೇಟೆ) ಅತ್ಯುತ್ತಮ ಹೊಸ ನಟ: ಸಮರ್​ಜಿತ್ ಲಂಕೇಶ್ (ಗೌರಿ) ಅತ್ಯುತ್ತಮ ಹಿನ್ನೆಲೆ ಗಾಯಕಿ: ಶ್ರುತಿ ಪ್ರಹ್ಲಾದ (ಹಿತ್ತಲಕ ಕರಿಬ್ಯಾಡ) ಅತ್ಯುತ್ತಮ ಹಿನ್ನೆಲೆ ಗಾಯಕ: ಜಸ್ಕರಣ್ ಸಿಂಗ್ (ದ್ವಾಪರ ದಾಟುತ) ಅತ್ಯುತ್ತಮ ಗೀತರಚನೆ: ನಾಗೇಂದ್ರ ಪ್ರಸಾದ್ (ದ್ವಾಪರ ದಾಟುತ)

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!