70ನೇ ಫಿಲ್ಮ್​ಫೇರ್ ಪ್ರಶಸ್ತಿ ಪಡೆದ ಕನ್ನಡ ಕಲಾವಿದರು

 

70ನೇ ಫಿಲ್ಮ್​ಫೇರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೊಚ್ಚಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಶ್ರೀಮುರಳಿ ಮತ್ತು ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಶಾಖಾಹಾರಿ’ ಸಿನಿಮಾಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ.

ಕೇರಳದ ಕೊಚ್ಚಿಯಲ್ಲಿ ‘70ನೇ ಫಿಲ್ಮ್​​ಫೇರ್ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆದಿದೆ. 2024ರಲ್ಲಿ ತೆರೆಕಂಡ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಝಗಮಗಿಸುವ ವೇದಿಕೆಯಲ್ಲಿ ಅವಾರ್ಡ್ ಫಂಕ್ಷನ್ ನಡೆಯಿತು. ‘ಕೋಳಿ ಎಸ್ರು’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು. ‘ಬಘೀರ’ ಸಿನಿಮಾದ ನಟನೆಗಾಗಿ ಶ್ರೀಮುರಳಿ ಅವರಿಗೆ ಬೆಸ್ಟ್ ಆ್ಯಕ್ಟರ್ ಅವಾರ್ಡ್ ನೀಡಲಾಯಿತು.

‘ಕೆರೆಬೇಟೆ’ ಸಿನಿಮಾದಲ್ಲಿನ ನಟನೆಗಾಗಿ ಗೌರಿಶಂಕರ್ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರು. ಅಂಕಿತಾ ಅಮರ್ ಅವರಿಗೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ‘ಬ್ಲಿಂಕ್’ ಚಿತ್ರಕ್ಕಾಗಿ ಗೋಪಾಲಕೃಷ್ಣ ದೇಶಪಾಂಡೆ ಅವರು ಅತ್ಯುತ್ತಮ ಪೋಷಕ ನಟ ಪಶಸ್ತಿ ಪಡೆದರು. ‘ಭೀಮ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಪ್ರಿಯಾ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸಿಕ್ಕಿದೆ.

70ನೇ ಫಿಲ್ಮ್ ಫೇರ್ ಪ್ರಶಸ್ತಿ ಪಡೆದವರ ಪಟ್ಟಿ: ಅತ್ಯುತ್ತಮ ಸಿನಿಮಾ: ಶಾಖಾಹಾರಿ (ನಿರ್ದೇಶನ: ಸಂದೀಪ್ ಸುಂಕದ್) ಅತ್ಯುತ್ತಮ ನಿರ್ದೇಶಕ: ಪೃಥ್ವಿ ಕೋಣನೂರು (ಹದಿನೇಳೆಂಟು) ಅತ್ಯುತ್ತಮ ನಿನಿಮಾ: ವಿಮರ್ಶಕರ ಆಯ್ಕೆ- ಬ್ಲಿಂಕ್ (ನಿರ್ದೇಶನ: ಶ್ರೀನಿಧಿ ಬೆಂಗಳೂರು) ಅತ್ಯುತ್ತಮ ಸಂಗೀತ: ಅರ್ಜುನ್ ಜನ್ಯ (ಕೃಷ್ಣಂ ಪ್ರಣಯ ಸಖಿ)

ಅತ್ಯುತ್ತಮ ಹೊಸ ನಟಿ: ಬಿಂಧು ಶಿವರಾಮ್ (ಕೆರೆಬೇಟೆ) ಅತ್ಯುತ್ತಮ ಹೊಸ ನಟ: ಸಮರ್​ಜಿತ್ ಲಂಕೇಶ್ (ಗೌರಿ) ಅತ್ಯುತ್ತಮ ಹಿನ್ನೆಲೆ ಗಾಯಕಿ: ಶ್ರುತಿ ಪ್ರಹ್ಲಾದ (ಹಿತ್ತಲಕ ಕರಿಬ್ಯಾಡ) ಅತ್ಯುತ್ತಮ ಹಿನ್ನೆಲೆ ಗಾಯಕ: ಜಸ್ಕರಣ್ ಸಿಂಗ್ (ದ್ವಾಪರ ದಾಟುತ) ಅತ್ಯುತ್ತಮ ಗೀತರಚನೆ: ನಾಗೇಂದ್ರ ಪ್ರಸಾದ್ (ದ್ವಾಪರ ದಾಟುತ)

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!