ರಾಜ್ಯ ಸರ್ಕಾರ 3 ವರ್ಷಗಳಲ್ಲಿ ಭರ್ತಿ ಮಾಡಿರುವ ಉದ್ಯೋಗ ಕೇವಲ 8 ಸಾವಿರ?

ಫೆಬ್ರವರಿ 25: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ ಎಂದು ತಿಳಿಸಿದ್ದರು. ಆದ್ರೆ ಮುಖ್ಯಮಂತ್ರಿಗಳ ಹೇಳಿಕೆ ಹಸೀ ಸುಳ್ಳು ಎಂದು ವಿಪಕ್ಷ ಬಿಜೆಪಿ ಆರೋಪಿಸಿದ್ದು, ಮಿಂಚಿನ ವೇಗಕ್ಕಿಂತಲೂ ಸಿದ್ದರಾಮಯ್ಯನವರು ಹೇಳುವ ಸುಳ್ಳಿನ ವೇಗವೇ ಹೆಚ್ಚು ಎಂದು ವ್ಯಂಗ್ಯವಾಡಿದೆ.

ಬಿಜೆಪಿ ಆರೋಪವೇನು?

ಸುಳ್ಳು ಹೇಳಿದರೂ ಸತ್ಯದ ತಲೆ ಮೇಲೆ ಹೊಡೆದಂತೆ ಹೇಳಬೇಕು ಎಂಬ ನಾಣ್ಣುಡಿ ಇದೆ. ಆದರೆ ಸಿದ್ದರಾಮಯ್ಯ ಅವರು ಸತ್ಯದ ತಲೆ ಮೇಲೆ ಮಾತ್ರವಲ್ಲ, ಸತ್ಯದ ಪೂರ್ತಿ ದೇಹದ ಮೇಲೆಯೇ ಹೊಡೆಯುವಂತಹ ಸುಳ್ಳು ಹೇಳಿದ್ದಾರೆ. ತಮ್ಮ ಕರ್ನಾಟಕ ನಿರ್ನಾಮದ ಬೋಗಸ್‌ ಗ್ಯಾರಂಟಿ ಸರ್ಕಾರದ ಈ ಅವಧಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ ಎಂದು ನಿನ್ನೆ ಹಸಿಹಸಿ ಸುಳ್ಳು ಹೇಳಿದ್ದರು. ಆದರೆ ಕಾಂಗ್ರೆಸ್​​ ಸರ್ಕಾರದ ಈ ಅವಧಿಯಲ್ಲಿ ನೇಮಕಾತಿ ಪೂರ್ಣಗೊಂಡ ಸರ್ಕಾರಿ ಹುದ್ದೆಗಳು ಕೇವಲ 8,157 ಹಾಗೂ ನೇಮಕಾತಿ ಪ್ರಗತಿಯಲ್ಲಿರುವ ಹುದ್ದೆಗಳು ಕೇವಲ 3,081. ಈ ಮಾಹಿತಿಯನ್ನು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಎರಡು ತಿಂಗಳ ಹಿಂದೆ ನಡೆದ ಚಳಿಗಾಲದ ಅಧಿವೇಶನದಲ್ಲಿ ತಿಳಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

2025ರ ಡಿಸೆಂಬರ್​​ 18ರಂದು ಈ ಬಗ್ಗೆ ಸತ್ಯ ಮಾಹಿತಿ ನೀಡಿದ್ದ ಸಿಎಂ 2026ರ ಫೆಬ್ರವರಿ 24ರಂದು ಸುಳ್ಳು ಹೇಳಿದ್ದಾರೆ. ಸತ್ಯ ಏನೆಂಬುದು ತಿಳಿದಿದ್ದರೂ, ಸಿಎಂ ಹುದ್ದೆಯಲ್ಲಿ ಕುಳಿತು ಹೀಗೆ ಹಸಿಹಸಿ ಸುಳ್ಳು ಹೇಳುವುದಕ್ಕೆ ಅವರಿಗೆ ನಾಚಿಕೆಯಾಗಬೇಕು ಎಂದು ವಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸದನದ ಒಳಗೊಂದು ಮಾಹಿತಿ, ಹೊರಗೆ ಸುಳ್ಳಿನ ಪ್ರದರ್ಶನ ಮಾಡಿ ಇನ್ನೂ ಎಷ್ಟು ದಿನ ಜನರನ್ನು ವಂಚಿಸುವಿರಿ? ಜನರ ಮುಂದೆ, 40,000 ಹುದ್ದೆ ಭರ್ತಿ ಮಾಡಿದ್ದೇವೆ ಎಂದು ಹಸಿ ಸುಳ್ಳು ಹೇಳುವುದು ರಾಜ್ಯದ ನಿರುದ್ಯೋಗಿ ಯುವಜನತೆಗೆ ಮಾಡುತ್ತಿರುವ ನೇರ ವಂಚನೆಯಲ್ಲವೇ? ರಾಜ್ಯದ ಅತಿ ದೀರ್ಘಾವಧಿ ಮುಖ್ಯಮಂತ್ರಿಗಳಾಗಿರುವ ತಾವೇ ಈ ರೀತಿ ರಾಜ್ಯದ ಜನತೆಯ ದಾರಿ ತಪ್ಪಿಸಿದರೆ ಹೇಗೆ? ದಯವಿಟ್ಟು ಸುಳ್ಳಿನ ಪ್ರಚಾರ ನಿಲ್ಲಿಸಿ, ಯುವಜನರ ಆಕ್ರೋಶ, ನೋವನ್ನು ಅರ್ಥಮಾಡಿಕೊಳ್ಳಿ. ಪರಿಸ್ಥಿತಿ ಕೈಮೀರುವ ಮುನ್ನ ಬಾಕಿ ಇರುವ ನೇಮಕಾತಿ ಪ್ರಕ್ರಿಯೆಗಳನ್ನು ಕೂಡಲೇ ಪೂರ್ಣಗೊಳಿಸಿ, ನಮ್ಮ ಯುವಜನತೆಗೆ ನ್ಯಾಯ ಒದಗಿಸಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಕೌಂಟರ್​​ ಕೊಟ್ಟಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!