ರಾಜ್ಯ ಸರ್ಕಾರ 3 ವರ್ಷಗಳಲ್ಲಿ ಭರ್ತಿ ಮಾಡಿರುವ ಉದ್ಯೋಗ ಕೇವಲ 8 ಸಾವಿರ?

ಫೆಬ್ರವರಿ 25: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ ಎಂದು ತಿಳಿಸಿದ್ದರು. ಆದ್ರೆ ಮುಖ್ಯಮಂತ್ರಿಗಳ ಹೇಳಿಕೆ ಹಸೀ ಸುಳ್ಳು ಎಂದು ವಿಪಕ್ಷ ಬಿಜೆಪಿ ಆರೋಪಿಸಿದ್ದು, ಮಿಂಚಿನ ವೇಗಕ್ಕಿಂತಲೂ ಸಿದ್ದರಾಮಯ್ಯನವರು ಹೇಳುವ ಸುಳ್ಳಿನ ವೇಗವೇ ಹೆಚ್ಚು ಎಂದು ವ್ಯಂಗ್ಯವಾಡಿದೆ.

ಬಿಜೆಪಿ ಆರೋಪವೇನು?

ಸುಳ್ಳು ಹೇಳಿದರೂ ಸತ್ಯದ ತಲೆ ಮೇಲೆ ಹೊಡೆದಂತೆ ಹೇಳಬೇಕು ಎಂಬ ನಾಣ್ಣುಡಿ ಇದೆ. ಆದರೆ ಸಿದ್ದರಾಮಯ್ಯ ಅವರು ಸತ್ಯದ ತಲೆ ಮೇಲೆ ಮಾತ್ರವಲ್ಲ, ಸತ್ಯದ ಪೂರ್ತಿ ದೇಹದ ಮೇಲೆಯೇ ಹೊಡೆಯುವಂತಹ ಸುಳ್ಳು ಹೇಳಿದ್ದಾರೆ. ತಮ್ಮ ಕರ್ನಾಟಕ ನಿರ್ನಾಮದ ಬೋಗಸ್‌ ಗ್ಯಾರಂಟಿ ಸರ್ಕಾರದ ಈ ಅವಧಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ ಎಂದು ನಿನ್ನೆ ಹಸಿಹಸಿ ಸುಳ್ಳು ಹೇಳಿದ್ದರು. ಆದರೆ ಕಾಂಗ್ರೆಸ್​​ ಸರ್ಕಾರದ ಈ ಅವಧಿಯಲ್ಲಿ ನೇಮಕಾತಿ ಪೂರ್ಣಗೊಂಡ ಸರ್ಕಾರಿ ಹುದ್ದೆಗಳು ಕೇವಲ 8,157 ಹಾಗೂ ನೇಮಕಾತಿ ಪ್ರಗತಿಯಲ್ಲಿರುವ ಹುದ್ದೆಗಳು ಕೇವಲ 3,081. ಈ ಮಾಹಿತಿಯನ್ನು ಸ್ವತಃ ಸಿಎಂ ಸಿದ್ದರಾಮಯ್ಯನವರೇ ಎರಡು ತಿಂಗಳ ಹಿಂದೆ ನಡೆದ ಚಳಿಗಾಲದ ಅಧಿವೇಶನದಲ್ಲಿ ತಿಳಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

2025ರ ಡಿಸೆಂಬರ್​​ 18ರಂದು ಈ ಬಗ್ಗೆ ಸತ್ಯ ಮಾಹಿತಿ ನೀಡಿದ್ದ ಸಿಎಂ 2026ರ ಫೆಬ್ರವರಿ 24ರಂದು ಸುಳ್ಳು ಹೇಳಿದ್ದಾರೆ. ಸತ್ಯ ಏನೆಂಬುದು ತಿಳಿದಿದ್ದರೂ, ಸಿಎಂ ಹುದ್ದೆಯಲ್ಲಿ ಕುಳಿತು ಹೀಗೆ ಹಸಿಹಸಿ ಸುಳ್ಳು ಹೇಳುವುದಕ್ಕೆ ಅವರಿಗೆ ನಾಚಿಕೆಯಾಗಬೇಕು ಎಂದು ವಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸದನದ ಒಳಗೊಂದು ಮಾಹಿತಿ, ಹೊರಗೆ ಸುಳ್ಳಿನ ಪ್ರದರ್ಶನ ಮಾಡಿ ಇನ್ನೂ ಎಷ್ಟು ದಿನ ಜನರನ್ನು ವಂಚಿಸುವಿರಿ? ಜನರ ಮುಂದೆ, 40,000 ಹುದ್ದೆ ಭರ್ತಿ ಮಾಡಿದ್ದೇವೆ ಎಂದು ಹಸಿ ಸುಳ್ಳು ಹೇಳುವುದು ರಾಜ್ಯದ ನಿರುದ್ಯೋಗಿ ಯುವಜನತೆಗೆ ಮಾಡುತ್ತಿರುವ ನೇರ ವಂಚನೆಯಲ್ಲವೇ? ರಾಜ್ಯದ ಅತಿ ದೀರ್ಘಾವಧಿ ಮುಖ್ಯಮಂತ್ರಿಗಳಾಗಿರುವ ತಾವೇ ಈ ರೀತಿ ರಾಜ್ಯದ ಜನತೆಯ ದಾರಿ ತಪ್ಪಿಸಿದರೆ ಹೇಗೆ? ದಯವಿಟ್ಟು ಸುಳ್ಳಿನ ಪ್ರಚಾರ ನಿಲ್ಲಿಸಿ, ಯುವಜನರ ಆಕ್ರೋಶ, ನೋವನ್ನು ಅರ್ಥಮಾಡಿಕೊಳ್ಳಿ. ಪರಿಸ್ಥಿತಿ ಕೈಮೀರುವ ಮುನ್ನ ಬಾಕಿ ಇರುವ ನೇಮಕಾತಿ ಪ್ರಕ್ರಿಯೆಗಳನ್ನು ಕೂಡಲೇ ಪೂರ್ಣಗೊಳಿಸಿ, ನಮ್ಮ ಯುವಜನತೆಗೆ ನ್ಯಾಯ ಒದಗಿಸಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಕೌಂಟರ್​​ ಕೊಟ್ಟಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!