ಕಾನೂನು ಡಿಗ್ರಿ ತೋರಿಸಿ ಪಾಕಿಸ್ತಾನದ ಹೈಕೋರ್ಟ್​ನಲ್ಲಿ ನಕಲಿ ವ್ಯಕ್ತಿ 5 ವರ್ಷ ನ್ಯಾಯಾಧೀಶ !

ಇಸ್ಲಮಾಬಾದ್ : ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಯನ್ನು ಬೆಚ್ಚಿಬೀಳಿಸಿದ ಹಗರಣವೊಂದು ಬೆಳಕಿಗೆ ಬಂದಿದೆ. ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ತನ್ನ ನ್ಯಾಯಾಧೀಶರಲ್ಲಿ ಒಬ್ಬರಾದ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನು ವಜಾಗೊಳಿಸುವ ಕುರಿತು ವಿವರವಾದ 116 ಪುಟಗಳ ತೀರ್ಪನ್ನು ನೀಡಿದೆ. ಪಾಕಿಸ್ತಾನದ (Pakistan) ನ್ಯಾಯಾಧೀಶರು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ (IHC) 5 ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಅವರು ನಕಲಿ ಕಾನೂನು ಪದವಿ ಹೊಂದಿದ್ದಾರೆಂದು ಯಾರಿಗೂ ತಿಳಿಯದಂತೆ ತೀರ್ಪುಗಳನ್ನು ನೀಡಿದ್ದರು. ಅವರು ನಕಲಿ ಡಿಗ್ರಿ ಸರ್ಟಿಫಿಕೆಟ್ ಹೊಂದಿದ್ದಾರೆಂದು ಬಯಲಾಗಿದ್ದು ಹೇಗೆ ಗೊತ್ತಾ?

ನ್ಯಾಯಮೂರ್ತಿ ತಾರಿಕ್ ಮಹಮೂದ್ ಜಹಾಂಗಿರಿ 5 ವರ್ಷಗಳ ಕಾಲ ನ್ಯಾಯಮೂರ್ತಿಯಾಗಿದ್ದರೂ ಅವರು ಕಾನೂನು ಪದವಿಯನ್ನು ಹೊಂದಿರಲಿಲ್ಲ. ಆದ್ದರಿಂದ, ಹೈಕೋರ್ಟ್ ನ್ಯಾಯಾಧೀಶರಾಗಿ ಅವರ ನೇಮಕಾತಿ ಕಾನೂನುಬದ್ಧವಾಗಿ ಅಮಾನ್ಯವಾಗಿದೆ. ಇಸ್ಲಮಾಬಾದ್ ಹೈಕೋರ್ಟ್ ಫೆಬ್ರವರಿ 23ರ ಸೋಮವಾರದಂದು ವಿವರವಾದ 116 ಪುಟಗಳ ತೀರ್ಪನ್ನು ನೀಡಿತು. ಹೈಕೋರ್ಟ್ ನ್ಯಾಯಾಧೀಶರಲ್ಲಿ ಒಬ್ಬರಾದ ಅವರನ್ನು ಜಡ್ಜ್ ಹುದ್ದೆಯಿಂದ ತೆಗೆದುಹಾಕಲಾಗಿದೆ. ಜಹಾಂಗಿರಿ ಅವರನ್ನು ಡಿಸೆಂಬರ್ 2020ರಲ್ಲಿ ಹೈಕೋರ್ಟ್‌ಗೆ ನೇಮಿಸಲಾಗಿತ್ತು. ಅವರಿಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನ್ಯಾಯಾಧೀಶರಾಗಿ ನ್ಯಾಯಾಂಗ ಕರ್ತವ್ಯಗಳನ್ನು ನಿರ್ವಹಿಸುವುದನ್ನು ನಿಷೇಧಿಸಲಾಯಿತು.

ತಾರಿಕ್ ಮೆಹಮೂದ್ ಜಹಾಂಗಿರಿ ಮೊದಲು 1988ರಲ್ಲಿ . ನಕಲಿ ದಾಖಲಾತಿ ಸಂಖ್ಯೆಯ ಅಡಿಯಲ್ಲಿ ತಮ್ಮ ಎಲ್ಎಲ್.ಬಿ. ಭಾಗ-I ಪರೀಕ್ಷೆಗೆ ಹಾಜರಾಗಿದ್ದರುನಂತರ ಅವರು ಅನ್ಯಾಯದ ವಿಧಾನಗಳನ್ನು ಬಳಸಿ ಸಿಕ್ಕಿಬಿದ್ದರು ಮತ್ತು 1989ರಲ್ಲಿ ಹೊರಡಿಸಲಾದ ವಿಶ್ವವಿದ್ಯಾಲಯದ ಅನರ್ಹತೆಯ ಸುತ್ತೋಲೆಯ ಮೂಲಕ ಮೂರು ವರ್ಷಗಳ ಕಾಲ ನಿಷೇಧಿಸಲ್ಪಟ್ಟರು.

ಕರಾಚಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಒದಗಿಸಿದ ಮೂಲ ದಾಖಲೆಗಳನ್ನು ಆಧರಿಸಿ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ತಾರಿಕ್ ಮಹಮೂದ್ ಜಹಾಂಗಿರಿ ಅವರ ಶೈಕ್ಷಣಿಕ ದಾಖಲೆಗಳು ನಕಲಿ ಎಂದು ನ್ಯಾಯಾಲಯ ಹೇಳಿದೆ. ಜಹಾಂಗಿರಿ 1988ರಲ್ಲಿ ನಕಲಿ ದಾಖಲಾತಿ ಸಂಖ್ಯೆಯನ್ನು ಬಳಸಿಕೊಂಡು ಪರೀಕ್ಷೆಗೆ ಹಾಜರಾಗಿದ್ದರು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಅವರು ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವುದು ಕಂಡುಬಂದಿತು. 1989ರಲ್ಲಿ ವಿಶ್ವವಿದ್ಯಾನಿಲಯವು ಅವರನ್ನು 3 ವರ್ಷಗಳ ಕಾಲ ನಿಷೇಧಿಸಿತ್ತು. ಅದಾದ ಮುಂದಿನ ವರ್ಷ, ಅವರು ಇಮ್ತಿಯಾಜ್ ಅಹ್ಮದ್ ಎಂಬ ಇನ್ನೊಬ್ಬ ವಿದ್ಯಾರ್ಥಿಗೆ ನಿಯೋಜಿಸಲಾದ ದಾಖಲಾತಿ ಸಂಖ್ಯೆಯನ್ನು ಬಳಸಿಕೊಂಡು ತಾರಿಕ್ ಜಹಾಂಗಿರಿ ಎಂಬ ಹೆಸರಿನಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು.
ತೀರ್ಪಿನಲ್ಲಿ, ಜಹಾಂಗಿರಿ ಅವರಿಗೆ ಮೂಲ ದಾಖಲೆಗಳನ್ನು ಮತ್ತು ಲಿಖಿತ ಉತ್ತರವನ್ನು ನೀಡಲು ಹಲವು ಅವಕಾಶಗಳನ್ನು ನೀಡಿದ್ದರೂ ಅವರು ದಾಖಲೆ ನೀಡಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು