ಕಾನೂನು ಡಿಗ್ರಿ ತೋರಿಸಿ ಪಾಕಿಸ್ತಾನದ ಹೈಕೋರ್ಟ್​ನಲ್ಲಿ ನಕಲಿ ವ್ಯಕ್ತಿ 5 ವರ್ಷ ನ್ಯಾಯಾಧೀಶ !

ಇಸ್ಲಮಾಬಾದ್ : ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಯನ್ನು ಬೆಚ್ಚಿಬೀಳಿಸಿದ ಹಗರಣವೊಂದು ಬೆಳಕಿಗೆ ಬಂದಿದೆ. ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ತನ್ನ ನ್ಯಾಯಾಧೀಶರಲ್ಲಿ ಒಬ್ಬರಾದ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನು ವಜಾಗೊಳಿಸುವ ಕುರಿತು ವಿವರವಾದ 116 ಪುಟಗಳ ತೀರ್ಪನ್ನು ನೀಡಿದೆ. ಪಾಕಿಸ್ತಾನದ (Pakistan) ನ್ಯಾಯಾಧೀಶರು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ (IHC) 5 ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಅವರು ನಕಲಿ ಕಾನೂನು ಪದವಿ ಹೊಂದಿದ್ದಾರೆಂದು ಯಾರಿಗೂ ತಿಳಿಯದಂತೆ ತೀರ್ಪುಗಳನ್ನು ನೀಡಿದ್ದರು. ಅವರು ನಕಲಿ ಡಿಗ್ರಿ ಸರ್ಟಿಫಿಕೆಟ್ ಹೊಂದಿದ್ದಾರೆಂದು ಬಯಲಾಗಿದ್ದು ಹೇಗೆ ಗೊತ್ತಾ?

ನ್ಯಾಯಮೂರ್ತಿ ತಾರಿಕ್ ಮಹಮೂದ್ ಜಹಾಂಗಿರಿ 5 ವರ್ಷಗಳ ಕಾಲ ನ್ಯಾಯಮೂರ್ತಿಯಾಗಿದ್ದರೂ ಅವರು ಕಾನೂನು ಪದವಿಯನ್ನು ಹೊಂದಿರಲಿಲ್ಲ. ಆದ್ದರಿಂದ, ಹೈಕೋರ್ಟ್ ನ್ಯಾಯಾಧೀಶರಾಗಿ ಅವರ ನೇಮಕಾತಿ ಕಾನೂನುಬದ್ಧವಾಗಿ ಅಮಾನ್ಯವಾಗಿದೆ. ಇಸ್ಲಮಾಬಾದ್ ಹೈಕೋರ್ಟ್ ಫೆಬ್ರವರಿ 23ರ ಸೋಮವಾರದಂದು ವಿವರವಾದ 116 ಪುಟಗಳ ತೀರ್ಪನ್ನು ನೀಡಿತು. ಹೈಕೋರ್ಟ್ ನ್ಯಾಯಾಧೀಶರಲ್ಲಿ ಒಬ್ಬರಾದ ಅವರನ್ನು ಜಡ್ಜ್ ಹುದ್ದೆಯಿಂದ ತೆಗೆದುಹಾಕಲಾಗಿದೆ. ಜಹಾಂಗಿರಿ ಅವರನ್ನು ಡಿಸೆಂಬರ್ 2020ರಲ್ಲಿ ಹೈಕೋರ್ಟ್‌ಗೆ ನೇಮಿಸಲಾಗಿತ್ತು. ಅವರಿಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನ್ಯಾಯಾಧೀಶರಾಗಿ ನ್ಯಾಯಾಂಗ ಕರ್ತವ್ಯಗಳನ್ನು ನಿರ್ವಹಿಸುವುದನ್ನು ನಿಷೇಧಿಸಲಾಯಿತು.

ತಾರಿಕ್ ಮೆಹಮೂದ್ ಜಹಾಂಗಿರಿ ಮೊದಲು 1988ರಲ್ಲಿ . ನಕಲಿ ದಾಖಲಾತಿ ಸಂಖ್ಯೆಯ ಅಡಿಯಲ್ಲಿ ತಮ್ಮ ಎಲ್ಎಲ್.ಬಿ. ಭಾಗ-I ಪರೀಕ್ಷೆಗೆ ಹಾಜರಾಗಿದ್ದರುನಂತರ ಅವರು ಅನ್ಯಾಯದ ವಿಧಾನಗಳನ್ನು ಬಳಸಿ ಸಿಕ್ಕಿಬಿದ್ದರು ಮತ್ತು 1989ರಲ್ಲಿ ಹೊರಡಿಸಲಾದ ವಿಶ್ವವಿದ್ಯಾಲಯದ ಅನರ್ಹತೆಯ ಸುತ್ತೋಲೆಯ ಮೂಲಕ ಮೂರು ವರ್ಷಗಳ ಕಾಲ ನಿಷೇಧಿಸಲ್ಪಟ್ಟರು.

ಕರಾಚಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಒದಗಿಸಿದ ಮೂಲ ದಾಖಲೆಗಳನ್ನು ಆಧರಿಸಿ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ತಾರಿಕ್ ಮಹಮೂದ್ ಜಹಾಂಗಿರಿ ಅವರ ಶೈಕ್ಷಣಿಕ ದಾಖಲೆಗಳು ನಕಲಿ ಎಂದು ನ್ಯಾಯಾಲಯ ಹೇಳಿದೆ. ಜಹಾಂಗಿರಿ 1988ರಲ್ಲಿ ನಕಲಿ ದಾಖಲಾತಿ ಸಂಖ್ಯೆಯನ್ನು ಬಳಸಿಕೊಂಡು ಪರೀಕ್ಷೆಗೆ ಹಾಜರಾಗಿದ್ದರು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಅವರು ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವುದು ಕಂಡುಬಂದಿತು. 1989ರಲ್ಲಿ ವಿಶ್ವವಿದ್ಯಾನಿಲಯವು ಅವರನ್ನು 3 ವರ್ಷಗಳ ಕಾಲ ನಿಷೇಧಿಸಿತ್ತು. ಅದಾದ ಮುಂದಿನ ವರ್ಷ, ಅವರು ಇಮ್ತಿಯಾಜ್ ಅಹ್ಮದ್ ಎಂಬ ಇನ್ನೊಬ್ಬ ವಿದ್ಯಾರ್ಥಿಗೆ ನಿಯೋಜಿಸಲಾದ ದಾಖಲಾತಿ ಸಂಖ್ಯೆಯನ್ನು ಬಳಸಿಕೊಂಡು ತಾರಿಕ್ ಜಹಾಂಗಿರಿ ಎಂಬ ಹೆಸರಿನಲ್ಲಿ ಮತ್ತೆ ಪರೀಕ್ಷೆಗೆ ಹಾಜರಾದರು.
ತೀರ್ಪಿನಲ್ಲಿ, ಜಹಾಂಗಿರಿ ಅವರಿಗೆ ಮೂಲ ದಾಖಲೆಗಳನ್ನು ಮತ್ತು ಲಿಖಿತ ಉತ್ತರವನ್ನು ನೀಡಲು ಹಲವು ಅವಕಾಶಗಳನ್ನು ನೀಡಿದ್ದರೂ ಅವರು ದಾಖಲೆ ನೀಡಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!