ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!

ಹೈದರಾಬಾದ್: ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರು ತಿಂಗಳಿಗೆ ಸುಮಾರು 2 ಲಕ್ಷ ರೂ. ಸಂಬಳ  ಪಡೆಯುತ್ತಿರುವ ವಿಚಾರ ಬಳಕಿಗೆ ಬಂದಿದೆ.

ಹೌದು. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್  ನಲ್ಲಿರುವ ಹಿರಿಯ ನೈರ್ಮಲ್ಯ ಕಾರ್ಮಿಕರು ದೀರ್ಘ ವರ್ಷಗಳ ಸೇವೆ ಮತ್ತು ಪರಿಷ್ಕರಣೆಗಳ ನಂತರ ತಿಂಗಳಿಗೆ ಸುಮಾರು 2 ಲಕ್ಷ ರೂ. ಸಂಬಳ ಪಡೆದರೆ ಉನ್ನತ ಸರ್ಕಾರಿ ಎಂಜಿನಿಯರ್‌ಗಳು ತಿಂಗಳಿಗೆ 7 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ.

ತೆಲಂಗಾಣದಲ್ಲಿ ಅತಿ ಹೆಚ್ಚು ವೇತನ ತೆಲಂಗಾಣ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ , ತೆಲಂಗಾಣ ರಾಜ್ಯ ಪ್ರಸರಣ ನಿಗಮ ಲಿಮಿಟೆಡ್ , ಮತ್ತು DISCOM ಗಳಾದ ತೆಲಂಗಾಣ ಸದರ್ನ್ ಪವರ್ ಡಿಸ್ಟ್ರಿಬ್ಯೂಷನ್ ಕಂಪನಿ ಲಿಮಿಟೆಡ್ ಮತ್ತು ತೆಲಂಗಾಣ ನಾರ್ದರ್ನ್ ಪವರ್ ಡಿಸ್ಟ್ರಿಬ್ಯೂಷನ್ ಕಂಪನಿ ಲಿಮಿಟೆಡ್‌ನ ಮುಖ್ಯ ಎಂಜಿನಿಯರ್‌ಗಳಿಗೆ ಸಿಗುತ್ತಿದೆ.

ತೆಲಂಗಾಣದ ಸಂಬಳ ಮತ್ತು ಪಿಂಚಣಿ ಏರಿಕೆಯಾಗಿದ್ದು ಬಜೆಟ್‌ಗೆ ಭಾರೀ ಹೊರೆಯಾಗಿದೆ. ರಾಜ್ಯವು ಈಗ ಪ್ರತಿ ತಿಂಗಳು ಸುಮಾರು 6,000 ಕೋಟಿ ರೂ.ಗಳನ್ನು ವೇತನ ಮತ್ತು ಪಿಂಚಣಿಗಾಗಿ ಖರ್ಚು ಮಾಡುತ್ತಿದೆ. 2014 ರಲ್ಲಿ ರಾಜ್ಯ ರಚನೆಯ ಸಮಯದಲ್ಲಿ ಖರ್ಚು ಮಾಡಿದ್ದಕ್ಕಿಂತ ಸುಮಾರು ನಾಲ್ಕು ಪಟ್ಟು ಏರಿಕೆಯಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಹೈದರಾಬಾದ್ ನಗರವನ್ನು ನಿರ್ವಹಿಸುವ GHMC ಅಡಿ ಕೆಲಸ ಮಾಡುತ್ತಿರುವ ನೈರ್ಮಲ್ಯ ಕಾರ್ಮಿಕರು ತಿಂಗಳಿಗೆ ಸರಾಸರಿ 70 ಸಾವಿರ ರೂ. ಪಡೆಯುತ್ತಿದ್ದಾರೆ. ಆದರೆ ಆರಂಭಿಕ ಹಂತದ ಪುರಸಭೆಯ ಸಿಬ್ಬಂದಿ ಸುಮಾರು 28 ಸಾವಿರ ಪಡೆದರೆ, ದೀರ್ಘ ಸೇವೆಯನ್ನು ಹೊಂದಿರುವ ಹಿರಿಯ ವರ್ಗ -4ರ ಕಾರ್ಮಿಕರು ಮಾಸಿಕ 2 ಲಕ್ಷ ರೂ. ಗಳಿಸುತ್ತಿದ್ದಾರೆ. ಹೆಚ್ಚಿನ ಉದ್ಯೋಗಿಗಳು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿದ್ದಾರೆ. ಇತ್ತೀಚಿನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿಯ ಪ್ರಕಾರ 2023-24ರಲ್ಲಿ ರಾಜ್ಯದ ಆದಾಯದ ಸುಮಾರು 45% ಸಂಬಳ, ಪಿಂಚಣಿ ಮತ್ತು ಸಾಲದ ಮೇಲಿನ ಬಡ್ಡಿಯನ್ನು ಪಾವತಿಸಲು ಹೋಗುತ್ತಿದೆ.

#Hyderabad #Telangana#MunicipalCorporation

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!