ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ.
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿನಟಿ ಜೊತೆ ಅನೈತಿಕ ಸಂಬಂಧ ಆರೋಪ

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಆದರೆ, ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಕೇಳಿಬಂದಿರುವುದರಿಂದ ರಾಜಕೀಯದ ಹಾದಿಗೆ ಇದು ಕಪ್ಪು ಚುಕ್ಕಿ ಆಗಲಿದೆ.

ಚೆಂಗಲ್​ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಂಗೀತಾ ಅವರು ಫೆಬ್ರವರಿ 27ರಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿದಿದ್ದಾರೆ. ಈ ವಿಷಯದ ಬಗ್ಗೆ ವಿಜಯ್ ಅವರು ಇನ್ನೂ ಅಧಿಕೃತ ಹೇಳಿಕೆ ನೀಡುವುದು ಬಾಕಿ ಇದೆ. ನಟಿಯ ಜೊತೆ ವಿಜಯ್ ಅವರಿಗೆ ಅನೈತಿಕ ಸಂಬಂಧ ಇದೆ ಎಂದು ಪತ್ನಿ ಆರೋಪ ಮಾಡಿದ್ದು, ಕೋರ್ಟ್ ವಿಚಾರಣೆ ವೇಳೆ ಆ ನಟಿಯ ಹೆಸರು ಹೊರಬರಲಿದೆ.

ವಿಜಯ್ ಮತ್ತು ಸಂಗೀತಾ ಅವರ ಸಂಸಾರದ ವಿಚಾರಗಳು ಆದಷ್ಟು ಗುಟ್ಟಾಗಿ ಇರುತ್ತಿದ್ದವು. ಅದರ ನಡುವೆ ದಳಪತಿ ವಿಜಯ್ ಅವರ ನಟಿಯೊಬ್ಬರ ಜೊತೆ ಸಂಬಂಧ ಹೊಂದಿದ್ದಾರೆ ಎಂಬ ಗಾಸಿಪ್ ಹಬ್ಬಿತ್ತು. ಸೋಶಿಯಲ್ ಮೀಡಿಯಾದಲ್ಲಿ ಆ ಬಗ್ಗೆ ಗುಸುಗುಸು ಕೇಳಿಬರುತ್ತಿತ್ತು. ಈಗ ಸ್ವತಃ ಪತ್ನಿಯೇ ಆರೋಪ ಮಾಡಿರುವುದರಿಂದ ವದಂತಿ ನಿಜವಾದಂತಾಗಿದೆ.

ದಳಪತಿ ವಿಜಯ್ ನಟಿಸಿರುವ ಕೊನೇ ಸಿನಿಮಾ ‘ಜನ ನಾಯಗನ್’ ಇನ್ನೂ ಬಿಡುಗಡೆ ಆಗುವುದು ಬಾಕಿ ಇದೆ. ಆ ಚಿತ್ರ ತೆರೆಕಂಡ ಬಳಿಕ ಅವರು ಚಿತ್ರರಂಗದಿಂದ ಸಂಪೂರ್ಣ ದೂರ ಉಳಿದು, ರಾಜಕೀಯದಲ್ಲಿ ಸಕ್ರಿಯರಾಗಲಿದ್ದಾರೆ.

.

Related Posts

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!