ರಸ್ತೆಯಲ್ಲೆಲ್ಲಾ ಹಾರಾಡಿದ ನೋಟುಗಳು! ಹಣ ಬಾಚಲು ಮುಗಿಬಿದ್ದ ಜನ, 15 ಮಂದಿ ಸಾ*

ನೋಟುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಕಾರ್ಗೋ ವಿಮಾನವೊಂದು ಪತನಗೊಂಡು ಹೆದ್ದಾರಿಗೆ ಅಪ್ಪಳಿಸಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟಿರುವ ಭೀಕರ ಘಟನೆ ಬೊಲಿವಿಯಾದಲ್ಲಿ ನಡೆದಿದೆ.

ನೋಟುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಕಾರ್ಗೋ ವಿಮಾನವೊಂದು ಪತನಗೊಂಡು ಹೆದ್ದಾರಿಗೆ ಅಪ್ಪಳಿಸಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟಿರುವ ಭೀಕರ ಘಟನೆ ಬೊಲಿವಿಯಾದಲ್ಲಿ ನಡೆದಿದೆ. ವಿಮಾನ ಬಿದ್ದ ರಭಸಕ್ಕೆ ಅದರಲ್ಲಿದ್ದ ಕಂತೆ ಕಂತೆ ನೋಟುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದನ್ನು ಕಂಡ ಜನ ಹಣವನ್ನು ಬಾಚಿಕೊಳ್ಳಲು ಮುಗಿಬಿದ್ದ ಪ್ರಸಂಗವೂ ನಡೆದಿದೆ.

ಬೊಲಿವಿಯಾದ ರಾಜಧಾನಿ ಲಾ ಪಾಜ್ ಪಕ್ಕದಲ್ಲಿರುವ ಎಲ್ ಆಲ್ಟೊ (El Alto) ವಿಮಾನ ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ಬೊಲಿವಿಯಾ ವಾಯುಪಡೆಗೆ ಸೇರಿದ ಹರ್ಕ್ಯುಲಸ್ ಸಿ-130 (Hercules C-130) ವಿಮಾನವು ಹೊಸದಾಗಿ ಮುದ್ರಿಸಲಾದ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿತ್ತು.

ವಿಮಾನವು ಲ್ಯಾಂಡಿಂಗ್ ಆಗುವಾಗ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ, ಪಕ್ಕದ ರಸ್ತೆಗೆ ನುಗ್ಗಿದೆ. ಅಲ್ಲಿ ಸಂಚರಿಸುತ್ತಿದ್ದ ಸುಮಾರು 15ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲೇ ಭೀಕರ ವಾತಾವರಣ ನಿರ್ಮಾಣವಾಗಿತ್ತು.

15 ಸಾವು, ಹಲವರಿಗೆ ಗಾಯ
ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ನೀಡಿದ ಮಾಹಿತಿ ಪ್ರಕಾರ, ಈ ದುರಂತದಲ್ಲಿ ಕನಿಷ್ಠ 15 ಜನ ಮೃತಪಟ್ಟಿದ್ದಾರೆ. ಆದರೆ ಮೃತಪಟ್ಟವರು ವಿಮಾನದಲ್ಲಿದ್ದವರಾ ಅಥವಾ ಹೆದ್ದಾರಿಯಲ್ಲಿದ್ದ ಕಾರಿನಲ್ಲಿದ್ದವರಾ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ವಿಮಾನದಲ್ಲಿದ್ದ ಆರು ಸಿಬ್ಬಂದಿ ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ.

ಹಣ ಬಾಚಲು ಮುಗಿಬಿದ್ದ ಜನ!
ವಿಮಾನ ಪತನವಾಗುತ್ತಿದ್ದಂತೆಯೇ ಅದರಲ್ಲಿದ್ದ ಹಣದ ಬಂಡಲ್‌ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದನ್ನು ನೋಡಿದ ಸ್ಥಳೀಯರು ಮತ್ತು ದಾರಿಹೋಕರು, ಅಪಘಾತದ ಭಯವನ್ನೂ ಲೆಕ್ಕಿಸದೆ ಹಣವನ್ನು ಎತ್ತಿಕೊಳ್ಳಲು ಮುಗಿಬಿದ್ದಿದ್ದಾರೆ. ಪೊಲೀಸರು ಲಾಟೀ ಚಾರ್ಜ್ ಮಾಡುವ ಮೂಲಕ ಜನರನ್ನು ಚದುರಿಸಬೇಕಾಯಿತು.

ಇಲ್ಲಿ ಒಂದು ಟ್ವಿಸ್ಟ್ ಇದೆ. ಜನ ಮುಗಿಬಿದ್ದು ತೆಗೆದುಕೊಂಡ ಹಣಕ್ಕೆ ಸದ್ಯ ಯಾವುದೇ ಮೌಲ್ಯವಿಲ್ಲ (Legal Tender Status) ಎಂದು ಬೊಲಿವಿಯಾ ಸೆಂಟ್ರಲ್ ಬ್ಯಾಂಕ್ ಸ್ಪಷ್ಟಪಡಿಸಿದೆ. ಈ ನೋಟುಗಳು ಹೊಸದಾಗಿ ಮುದ್ರಣಗೊಂಡು ಚಲಾವಣೆಗೆ ಬರಬೇಕಿದ್ದವು. ಇವುಗಳಲ್ಲಿ ಇನ್ನೂ ಸೀರಿಯಲ್ ನಂಬರ್ (Serial Numbers) ಇಲ್ಲದ ಕಾರಣ, ಇವು ಕೇವಲ ಕಾಗದಕ್ಕೆ ಸಮಾನ ಎಂದು ಬ್ಯಾಂಕ್ ಅಧ್ಯಕ್ಷ ಡೇವಿಡ್ ಎಸ್ಪಿನೋಜಾ ತಿಳಿಸಿದ್ದಾರೆ.

ರಕ್ಷಣಾ ಸಚಿವ ಮಾರ್ಸೆಲೊ ಸಲಿನಾಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಸಾಂಟಾ ಕ್ರೂಜ್ ನಗರದಿಂದ ಈ ವಿಮಾನ ಹಣವನ್ನು ಹೊತ್ತು ತರುತ್ತಿತ್ತು ಎನ್ನಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!