ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ?

ಪಶ್ಚಿಮ ಏಷ್ಯಾ ಪ್ರದೇಶವು ಹೊತ್ತಿ ಉರಿಯುತ್ತಿದೆ. ಹಣವಂತರು ತಮ್ಮ ಹಣದ ಸುರಕ್ಷತೆಗೆ ಚಿನ್ನದ ಮೊರೆ ಹೋಗುತ್ತಿದ್ದಾರೆ. ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಚಿನ್ನದ ಬೆಲೆ ಮತ್ತೆ ನಾಗಾಲೋಟ ಮಾಡುವುದು ನಿಶ್ಚಿತವಾಗಿದೆ. ತಜ್ಞರ ಪ್ರಕಾರ ಚಿನ್ನದ ಬೆಲೆ ಸದ್ಯದಲ್ಲೇ ಗ್ರಾಮ್​ಗೆ 20,000 ರೂ ಸಮೀಪ ಮುಟ್ಟಬಹುದು.

ಪಶ್ಚಿಮ ಏಷ್ಯನ್ ಪ್ರದೇಶದಲ್ಲಿ ಯುದ್ಧದ ವಾತಾವರಣ ಹೀಗೇ ಮುಂದುವರಿದರೆ ಚಿನ್ನದ ಬೆಲೆ ಹೈಜಂಪ್ ಮಾಡಿಕೊಂಡು ಸಾಗಬಹುದು ಎಂದು ಪರಿಣಿತರು ಊಹಿಸಿದ್ದಾರೆ. ಈಗಾಗಲೇ ಹೂಡಿಕೆದಾರರು ಗೋಲ್ಡ್ ಇಟಿಎಫ್​ಗಳನ್ನು ಹಣ ಹಾಕುವುದನ್ನು ಹೆಚ್ಚಿಸಿದ್ದಾರೆ. ಇದು ಇನ್ನೂ ಬಹಳಷ್ಟು ಹೆಚ್ಚಬಹುದು. ಡಾಲರ್ ಎದುರು ರುಪಾಯಿ ಮೌಲ್ಯದ ಕುಸಿತದ ಪರಿಣಾಮವೂ ಚಿನ್ನದ ಬೆಲೆ ಮೇಲೆ ಆಗಲಿದೆ.

20,000 ರೂ ಸಮೀಪಕ್ಕೆ ಚಿನ್ನದ ಬೆಲೆ?
ಸ್ಪಾಟ್ ಗೋಲ್ಡ್ ಬೆಲೆ ಒಂದು ಔನ್ಸ್​ಗೆ 5,400 ಯುಎಸ್ ಡಾಲರ್ ಇದೆ. ಅಂದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಗ್ರಾಮ್​ಗೆ 17,434 ರು ಬೆಲೆ ಇದೆ. ಈಗ ಜಾಗತಿಕವಾಗಿ ಭಯದ ವಾತಾವರಣ ತೀವ್ರಗೊಳ್ಳುತ್ತಿದ್ದು, ಇಂಥ ಸಂದರ್ಭಗಳಲ್ಲಿ ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುವುದು ಸ್ವಾಭಾವಿಕ. ಈಗ ಅದೇ ಆಗುತ್ತಿರುವುದು. ತಜ್ಞರು ಮಾಡಿರುವ ಅಂದಾಜು ಪ್ರಕಾರ, ಒಂದು ಔನ್ಸ್​ಗೆ 5,400 ಡಾಲರ್ ಇರುವ ಚಿನ್ನದ ಬೆಲೆ ಕೆಲ ದಿನಗಳಲ್ಲಿ 6,000 ಡಾಲರ್ ಮುಟ್ಟಬಹುದು. ಅಂದರೆ, ಒಂದು ಗ್ರಾಮ್ ಚಿನ್ನದ ಬೆಲೆ 19,400 ರೂ ಮುಟ್ಟಬಹುದು.

ವಿವಿಧ ದೇಶಗಳ ಸೆಂಟ್ರಲ್ ಬ್ಯಾಂಕುಗಳು ಚಿನ್ನದ ಖರೀದಿ ಹೆಚ್ಚಿಸಲಿವೆ. ಗೋಲ್ಡ್ ಇಟಿಎಫ್​ಗಳ ಮೇಲೆ ಹೂಡಿಕೆ ಹೆಚ್ಚಲಿವೆ. ಡಾಲರ್ ಎದುರು ರುಪಾಯಿ ಮೌಲ್ಯ ಕುಸಿಯುತ್ತಿದೆ. ಈ ಮೂರು ಅಂಶಗಳು ಚಿನ್ನದ ಬೆಲೆಯನ್ನು ಸಿಕ್ಕಾಪಟ್ಟೆ ಏರಿಸಬಹುದು. ಚಿನ್ನ ಮಾತ್ರವಲ್ಲ, ಬೆಳ್ಳಿ ಬೆಲೆಯೂ ಜಂಪ್ ಪಡೆಯಬಹುದು.ಭಾರತದಲ್ಲಿ ಚಿನ್ನದ ಬೆಲೆ ಸೋಮವಾರ ಬೆಳಗ್ಗೆ ಭರ್ಜರಿ ಇಳಿಕೆ ಕಂಡು ನಂತರ ಮತ್ತೆ ಶೇ. 4.37ರಷ್ಟು ಮೇಲೇರಿದೆ. ಅಪರಂಜಿ ಚಿನ್ನದ ಬೆಲೆ 17,000 ರೂ ಸಮೀಪಕ್ಕೆ ಹೋಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 296 ರೂ ದಾಟಿದೆ.

ಈ ಹಿನ್ನಲೆಯಲ್ಲಿ ತೈಲ ಬೆಲೆ ಏರಿಕೆ !
ಇರಾನ್ ಯುದ್ಧದ ಪರಿಣಾಮ ತೈಲ ಬೆಲೆ ಏರಿಕೆ ಆಗುವ ಭೀತಿ ಇದೆ. ಈಗಾಗಲೇ ಹೆಚ್ಚಿನ ಮಟ್ಟದಲ್ಲಿರುವ ತೈಲ ಬೆಲೆ ಬ್ಯಾರಲ್​ಗೆ 90 ಡಾಲರ್ ಮಟ್ಟದಲ್ಲೇ ಹೆಚ್ಚಿನ ಕಾಲ ಮುಂದುವರಿದರೆ ಭಾರತದ ಆರ್ಥಿಕತೆಗೆ ತುಸು ಹಿನ್ನಡೆ ತರಬಹುದು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು