ಮತ್ತೆ 69 ತಾಲಿಬಾನಿಗಳ ಸಾವು!

 

ಅಫ್ಘನ್ ಮೇಲೆ ದಾಳಿ ತೀವ್ರಗೊಳಿಸಿದ ಪಾಕಿಸ್ತಾನ, ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಅಪ್ಸನ್‌ ಮತ್ತೆ 69 ತಾಲಿಬಾನ್ ಅಧಿಕಾರಿಗಳನ್ನು ಮತ್ತು ಅವರ ಬೆಂಬಲಿತ ಭಯೋತ್ಪಾದಕ ‘ರನ್ನು ಒಂದೇ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
ಮಂಗಳವಾರ ಬೆಳಗಿನ ಜಾವ ನೈರುತ್ಯ ಭಾಗದ ಗಡಿಯಲ್ಲಿ ನಡೆದ ಪಾಕಿಸ್ತಾನ ಸೇನೆಯ ದಾಳಿಗಳಲ್ಲಿ 69 ತಾಲಿಬಾನ್ ಸಿಬ್ಬಂದಿಗಳು ಹಾಗೂ ಭಯೋತ್ಪಾದಕರು ಸತ್ತಿದ್ದಾರೆ ಎಂದು ತಿಳಿಸಿದೆ. ಈ ಮೊದಲು ದಾಳಿ ಶುರುವಾದಾಗಿನಿಂದ ಸುಮಾರು – 331 ಅಫ್ಘನ್‌ನ ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಪಾಕ್ ತಿಳಿಸಿತ್ತು.

ಅನೇಕ ತಾಲಿಬಾಲಿನಿಗಳು ಚಮನ್ ಜಿಲ್ಲೆಯ ಗಡಿಯಲ್ಲಿ ಯಾವುದೇ ಶಸ್ತ್ರಗಳಿಲ್ಲದೇ ನಮ್ಮವರನ್ನು ಬರಿಗೈಯಲ್ಲಿ ಎದುರಿಸಲು ಬಂದು ಹತರಾಗಿದ್ದಾರೆ ಎಂದು ಮಾಹಿತಿ ಸಚಿವ ಆತುಲ್ಲಾ ತಾರರ್ ತಿಳಿಸಿದ್ದಾರೆ.
ಖೈಬ‌ರ್ ಪಂಕ್ತುವ್ವಾ ಪ್ರಾಂತ್ಯದ 12 ಸ್ಥಳಗಳಲ್ಲಿ ಅಫ್ಘನ್ ವಿರುದ್ಧ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮ ಕಡೆ ಇಂದು
ಯಾವುದೇ ಸಾವು-ನೋವುಗಳಾಗಿಲ್ಲ ಎಂದು ವಿವರಿಸಿದ್ದಾರೆ.

ಪಾಕಿಸ್ತಾನ-ಅಫ್ಘಾನಿಸ್ತಾನದ 2,600 ಕಿಲೋಮೀಟರ್ ಉದ್ದದ ಗಡಿಗೆ ಹೊಂದಿ ಕೊಂಡ ಪಾಕ್‌ನ 53 ಸ್ಥಳಗಳನ್ನು ಗುರಿಯಾಗಿಸಿ ಅಫ್ಘಾನಿಸ್ತಾನ ಕಳೆದ ಫೆಬ್ರುವರಿ 26ರಂದು ದಾಳಿ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಶುಕ್ರವಾರ ಪಾಕಿಸ್ತಾನ ಸೇನೆ ಅಫ್ಘಾನಿಸ್ತಾನದ ರಾಜ ಧಾನಿ ಕಾಬೂಲ್ ಮತ್ತು ಕಾಂದಹಾರ್‌ಗಳ ಮೇಲೂ ಬಾಂಬ್ ದಾಳಿ ನಡೆಸಿತ್ತು. ಇದರಿಂದ ಎರಡೂ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಅಫ್ಘಾನಿಸ್ತಾನದಿಂದ ಪಾಕಿಸ್ತಾನದ ಕಡೆಗೆ ಡೋನ್ ದಾಳಿ ಮುಂದುವರಿದ ಕಾರಣ ಪಾಕಿಸ್ತಾನದ ಗಡಿಯ ಅನೇಕ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡ ಲಾಗಿದೆ. ಮೊಹಮಂದ್‌ನಲ್ಲಿ 54, ಘಲಾನೈ ನಲ್ಲಿ 1, ಬೈಜೈನಲ್ಲಿ 33, ಸಫಿಯಲ್ಲಿ 10 ಹಾಗೂ ಖೈಜೈನಲ್ಲಿ 2 ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ವಜೀರಿಸ್ತಾನದಲ್ಲಿ 33, ಬಾಜರ್‌ನಲ್ಲಿ 39 ಶಾಲೆಗಳಿಗೂ ಬೀಗ ಹಾಕಲಾಗಿದೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!