ಮತ್ತೆ 69 ತಾಲಿಬಾನಿಗಳ ಸಾವು!

 

ಅಫ್ಘನ್ ಮೇಲೆ ದಾಳಿ ತೀವ್ರಗೊಳಿಸಿದ ಪಾಕಿಸ್ತಾನ, ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಲ್ಲಿ ಅಪ್ಸನ್‌ ಮತ್ತೆ 69 ತಾಲಿಬಾನ್ ಅಧಿಕಾರಿಗಳನ್ನು ಮತ್ತು ಅವರ ಬೆಂಬಲಿತ ಭಯೋತ್ಪಾದಕ ‘ರನ್ನು ಒಂದೇ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.
ಮಂಗಳವಾರ ಬೆಳಗಿನ ಜಾವ ನೈರುತ್ಯ ಭಾಗದ ಗಡಿಯಲ್ಲಿ ನಡೆದ ಪಾಕಿಸ್ತಾನ ಸೇನೆಯ ದಾಳಿಗಳಲ್ಲಿ 69 ತಾಲಿಬಾನ್ ಸಿಬ್ಬಂದಿಗಳು ಹಾಗೂ ಭಯೋತ್ಪಾದಕರು ಸತ್ತಿದ್ದಾರೆ ಎಂದು ತಿಳಿಸಿದೆ. ಈ ಮೊದಲು ದಾಳಿ ಶುರುವಾದಾಗಿನಿಂದ ಸುಮಾರು – 331 ಅಫ್ಘನ್‌ನ ಮಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಪಾಕ್ ತಿಳಿಸಿತ್ತು.

ಅನೇಕ ತಾಲಿಬಾಲಿನಿಗಳು ಚಮನ್ ಜಿಲ್ಲೆಯ ಗಡಿಯಲ್ಲಿ ಯಾವುದೇ ಶಸ್ತ್ರಗಳಿಲ್ಲದೇ ನಮ್ಮವರನ್ನು ಬರಿಗೈಯಲ್ಲಿ ಎದುರಿಸಲು ಬಂದು ಹತರಾಗಿದ್ದಾರೆ ಎಂದು ಮಾಹಿತಿ ಸಚಿವ ಆತುಲ್ಲಾ ತಾರರ್ ತಿಳಿಸಿದ್ದಾರೆ.
ಖೈಬ‌ರ್ ಪಂಕ್ತುವ್ವಾ ಪ್ರಾಂತ್ಯದ 12 ಸ್ಥಳಗಳಲ್ಲಿ ಅಫ್ಘನ್ ವಿರುದ್ಧ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮ ಕಡೆ ಇಂದು
ಯಾವುದೇ ಸಾವು-ನೋವುಗಳಾಗಿಲ್ಲ ಎಂದು ವಿವರಿಸಿದ್ದಾರೆ.

ಪಾಕಿಸ್ತಾನ-ಅಫ್ಘಾನಿಸ್ತಾನದ 2,600 ಕಿಲೋಮೀಟರ್ ಉದ್ದದ ಗಡಿಗೆ ಹೊಂದಿ ಕೊಂಡ ಪಾಕ್‌ನ 53 ಸ್ಥಳಗಳನ್ನು ಗುರಿಯಾಗಿಸಿ ಅಫ್ಘಾನಿಸ್ತಾನ ಕಳೆದ ಫೆಬ್ರುವರಿ 26ರಂದು ದಾಳಿ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಶುಕ್ರವಾರ ಪಾಕಿಸ್ತಾನ ಸೇನೆ ಅಫ್ಘಾನಿಸ್ತಾನದ ರಾಜ ಧಾನಿ ಕಾಬೂಲ್ ಮತ್ತು ಕಾಂದಹಾರ್‌ಗಳ ಮೇಲೂ ಬಾಂಬ್ ದಾಳಿ ನಡೆಸಿತ್ತು. ಇದರಿಂದ ಎರಡೂ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಅಫ್ಘಾನಿಸ್ತಾನದಿಂದ ಪಾಕಿಸ್ತಾನದ ಕಡೆಗೆ ಡೋನ್ ದಾಳಿ ಮುಂದುವರಿದ ಕಾರಣ ಪಾಕಿಸ್ತಾನದ ಗಡಿಯ ಅನೇಕ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡ ಲಾಗಿದೆ. ಮೊಹಮಂದ್‌ನಲ್ಲಿ 54, ಘಲಾನೈ ನಲ್ಲಿ 1, ಬೈಜೈನಲ್ಲಿ 33, ಸಫಿಯಲ್ಲಿ 10 ಹಾಗೂ ಖೈಜೈನಲ್ಲಿ 2 ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ವಜೀರಿಸ್ತಾನದಲ್ಲಿ 33, ಬಾಜರ್‌ನಲ್ಲಿ 39 ಶಾಲೆಗಳಿಗೂ ಬೀಗ ಹಾಕಲಾಗಿದೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ