ಪಾಕ್‌ ಆಟಗಾರನಿಗೆ ಬಿತ್ತು ದಂಡ – ಮಹಿಳೆ ಜೊತೆ ಅಸಭ್ಯ ವರ್ತನೆ

ಕೊಲಂಬೋ: ಟಿ20 ವಿಶ್ವಕಪ್‌ ಟೂರ್ನಿಯಾಡಲು ಶ್ರೀಲಂಕಾಗೆ ಬಂದಿದ್ದ ಪಾಕಿಸ್ತಾನದಆಟಗಾರನೊಬ್ಬ ಕ್ಯಾಂಡಿಯ ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆತಿಥೇಯ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಕೊನೆಯ ಸೂಪರ್ 8 ಪಂದ್ಯಕ್ಕೂ ಮುನ್ನ ಈ ಘಟನೆ ನಡೆದಿದೆ. ಮಹಿಳಾ ಸಿಬ್ಬಂದಿ ಕೂಗುತ್ತಾ ಸಹಾಯಕ್ಕಾಗಿ ಕರೆ ಮಾಡಿದಾಗ ಹೋಟೆಲ್ ಸಿಬ್ಬಂದಿ ಆಕೆಯ ರಕ್ಷಣೆಗೆ ಬಂದು ಪಾಕಿಸ್ತಾನ ತಂಡದ ವ್ಯವಸ್ಥಾಪಕ ನವೈದ್ ಚೀಮಾ ಅವರಿಗೆ ವಿಷಯ ತಿಳಿಸಿದ್ದಾರೆ.

ಗೋಲ್ಡನ್ ಕ್ರೌನ್ ಹೋಟೆಲ್‌ನ ಆಡಳಿತ ಮಂಡಳಿ ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ಆತನ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿತು. ಆಟಗಾರನ ಪರವಾಗಿ ನವೈದ್ ಚೀಮಾ ಕ್ಷಮೆಯಾಚಿಸಿದರು. ಬಳಿಕ ಅನುಚಿತ ವರ್ತನೆ ತೋರಿದ ಆಟಗಾರನಿಗೆ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.

 

ಶ್ರೀಲಂಕಾ ವಿರುದ್ಧ 5 ರನ್‌ಗಳಿಂದ ಪಂದ್ಯ ಗೆದ್ದಿದ್ದದ್ದರೂ ನೆಟ್‌ ರನ್‌ ರೇಟ್‌ ಕಡಿಮೆ ಇದ್ದ ಕಾರಣ ಪಾಕ್‌ ತಂಡ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾಯಿತು. ತಂಡ ಭಾನುವಾರ ಮತ್ತು ಸೋಮವಾರ ಪಾಕಿಸ್ತಾನಕ್ಕೆ ತೆರಳಿತ್ತು.

 

ಈ ಆಟಗಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಶಿಸ್ತು ಸಮಿತಿಯ ಮುಂದೆ ಹಾಜರಾಗುವ ಸಾಧ್ಯತೆಯಿದೆ ಮತ್ತು ಅವರಿಗೆ ಹೆಚ್ಚಿನ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ.

ಪಾಕಿಸ್ತಾನಿ ಆಟಗಾರರು ಪ್ರವಾಸದ ಸಮಯದಲ್ಲಿ ಅಸಭ್ಯ ವರ್ತನೆ ತೋರುವುದು ಹೊಸದೆನಲ್ಲ. ಇಂಗ್ಲೆಂಡ್ ಪ್ರವಾಸದಲ್ಲಿ ಹುಡುಗಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪಾಕಿಸ್ತಾನ ಶಾಹೀನ್ಸ್ ತಂಡದ ಯುವ ಬ್ಯಾಟರ್ ಹೈದರ್ ಅಲಿಯನ್ನು ಕಳೆದ ವರ್ಷ ಮ್ಯಾಂಚೆಸ್ಟರ್ ಪೊಲೀಸರು ಬಂಧಿಸಲಾಗಿತ್ತು. ಹೈದರ್‌ನನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಿಡುಗಡೆ ಮಾಡಲಾಗಿತ್ತು.

ಕೆಲವು ವರ್ಷಗಳ ಹಿಂದೆ ಮಲೇಷ್ಯಾ ಪ್ರವಾಸದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಪಾಕಿಸ್ತಾನ ತಂಡದ ಮಸಾಜ್ ಪಟು ಮಲಾಂಗ್ ಅಲಿ ಅವರ ಮೇಲೂ ದೂರು ದಾಖಲಾಗಿ ದಂಡ ವಿಧಿಸಲಾಗಿತ್ತು.

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!