ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ ಸಾಧ್ಯತೆ ಇದೆ.

ನಟ ದಳಪತಿ ವಿಜಯ್ ಅವರ ರಾಜಕೀಯ ಜೀವನಕ್ಕಿಂತಲೂ ವೈಯಕ್ತಿಕ ಜೀವನದ ವಿಚಾರವೇ ಹೆಚ್ಚು ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಆಗಿರುವುದು ತ್ರಿಷಾ ಜೊತೆಗಿನ ಒಡನಾಟ. ಈಗಾಗಲೇ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಕೂಡ ಸಂಗೀತಾ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ತ್ರಿಷಾ ಮತ್ತು ವಿಜಯ್ ಅವರು ಖುಲ್ಲಂ ಖುಲ್ಲಾ ಜೊತೆಯಾಗಿ ತಿರುಗಾಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಅದನ್ನು ಕಂಡು ಅಭಿಮಾನಿಗಳು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಿನಿಮಾ ಕಲಾವಿದರು ರಾಜಕೀಯದಲ್ಲಿ ಯಶಸ್ಸು ಕಂಡ ಸಾಕಷ್ಟು ಉದಾಹರಣೆ ತಮಿಳುನಾಡಿನಲ್ಲಿದೆ. ದಳಪತಿ ವಿಜಯ್ ಅವರು ಟಿವಿಕೆ ಪಕ್ಷ ಸ್ಥಾಪಿಸಿಕೊಂಡು ರಾಜಕೀಯಕ್ಕೆ ಇಳಿದಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ. ಅದಕ್ಕಾಗಿ ಅವರು ಎಲ್ಲ ರೀತಿಯಿಂದಲೂ ತಯಾರಿ ಮಾಡಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ತ್ರಿಷಾ ಜೊತೆ ಕಾಣಿಸಿಕೊಂಡಿದ್ದು ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ.

ದಳಪತಿ ವಿಜಯ್ ಅವರ ಹೆಸರು ತ್ರಿಷಾ ಜೊತೆ ತಳುಕು ಹಾಕಿಕೊಂಡಾಗಲೆಲ್ಲ ಅಭಿಮಾನಿಗಳು ರಕ್ಷಣೆಗೆ ಬರುತ್ತಿದ್ದರು. ವಿಜಯ್ ಮತ್ತು ತ್ರಿಷಾ ಕೇವಲ ಸ್ನೇಹಿತರು ಎಂದು ಫ್ಯಾನ್ಸ್ ವಾದ ಮಾಡುತ್ತಿದ್ದರು. ಗಾಸಿಪ್​​ನಿಂದ ವಿಜಯ್ ಅವರ ರಾಜಕೀಯದ ಭವಿಷ್ಯಕ್ಕೆ ತೊಂದರೆ ಆಗದಿರಲಿ ಎಂದು ಅಭಿಮಾನಿಗಳು ಇಷ್ಟೆಲ್ಲ ಮಾಡುತ್ತಿದ್ದರು. ಆದರೆ ವಿಜಯ್ ಅವರು ಅದನ್ನೆಲ್ಲ ಈಗ ಗಾಳಿಗೆ ತೂರಿದ್ದಾರೆ.

ಇನ್ನೂ ಕೆಲವು ಅಭಿಮಾನಿಗಳು ವಿಜಯ್ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಒಂದು ವೇಳೆ ವಿಜಯ್ ಮತ್ತು ತ್ರಿಷಾ ನಡುವೆ ಸಂಬಂಧ ಇರುವುದೇ ಹೌದಾದರೆ ಅದು ಇಂದಿಲ್ಲ ನಾಳೆ ಬಹಿರಂಗ ಆಗಲೇಬೇಕು. ಅದನ್ನು ರಾಜಕೀಯ ವಿರೋಧಿಗಳು ದಾಳವಾಗಿ ಉಪಯೋಗಿಸಿಕೊಳ್ಳುವುದಕ್ಕೂ ಮುನ್ನವೇ ಸ್ವತಃ ವಿಜಯ್ ಅವರು ಈಗ ಬಹಿರಂಗಪಡಿಸಿದ್ದಾರೆ ಎಂಬುದು ಕಟ್ಟಾ ಅಭಿಮಾನಿಗಳ ವಾದ.

ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಈ ಸಂದರ್ಭದಲ್ಲೇ ವಿಜಯ್ ಅವರು ತ್ರಿಷಾ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ರೀತಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅವರಿಬ್ಬರು ತಮ್ಮ ಸಂಬಂಧವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂಬುದು ನೆಟ್ಟಿಗರವಾದ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!