ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 , 352 ರ ಆಡಿ ರಜತ್‌ ಮತ್ತು ಧನರಾಜ್‌ ಮೇಲೆ ಕೇಸ್ ದಾಖಲು ಮಾಡಿದ್ದಾರೆ.

ದೂರಿನಲ್ಲಿ ಏನಿದೆ?
ಕಳೆದ ವರ್ಷದ ಡಿ.12 ರಂದು ರಜತ್‌ ಕರೆ ಮಾಡಿ ನಾನು ಮತ್ತು ನನ್ನ ಸ್ನೇಹಿತ ಧನರಾಜ್ ಇಬ್ಬರು ಸೇರಿ ಒಂದು ಯೂಟ್ಯೂಬ್ ಚಾನೆಲ್‌ ಆರಂಭಿಸುತ್ತಿದ್ದೇವೆ. ಚಾನೆಲ್‌ ಆರಂಭದಲ್ಲಿ ನಿಮ್ಮ ಸಂದರ್ಶನವನ್ನು ಹಾಕುತ್ತೇವೆ ಎಂದು ಹೇಳಿ ನನ್ನನ್ನು ಮಾತನಾಡಿಸಿದ್ದರು. ಆದರೆ ಅಪ್ಲೋಡ್‌ ಮಾಡುವಾಗ ನನ್ನ ಸಂಭಾಷಣೆಯನ್ನು ತಿರುಚಿ ನನಗೆ ಅವಮಾನ ಮಾಡಿದ್ದಾರೆ.

ಎರಡು ಕ್ಯಾಮೆರಾ ಮತ್ತು ಎರಡು ಮೊಬೈಲ್ ನಲ್ಲಿ ನಾಲ್ಕು ಮಂದಿ ಸಂದರ್ಶನವನ್ನು ಶೂಟ್ ಮಾಡಿದ್ದರು. ಈ ಫೆಬ್ರವರಿ 27 ರಂದು ರಾತ್ರಿ 10:30ಕ್ಕೆ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಮೆಸೇಜ್‌ ಹಾಕಿದ್ದಕ್ಕೆ ರಜತ್ ಅವರು ನನ್ನ ಮೇಲೆ ಕೊಲೆ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಆತನ ಫೋನಿನಿಂದ ಮಧ್ಯರಾತ್ರಿ ಕೊಲೆ ಬೆದರಿಕೆ ಬರುತ್ತಿತ್ತು. ರಜತ್‌ ಮತ್ತು ಧನರಾಜ್‌ ಉದ್ದೇಶಪೂರ್ವಕವಾಗಿ ಮಾನಹಾನ ಮಾಡಿ ಬೈದಿದ್ದಾರೆ. ಇವರ ವಿರುದ್ಧ ಕ್ರಮಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!