ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು.

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕನ್ನಡ ಚಿತ್ರರಂಗಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಮನೆಯೊಂದು ಮ್ಯೂಸಿಯಂ ರೂಪ ಪಡೆದುಕೊಳ್ಳುತ್ತಿರುವುದು ಇದೇ ಮೊದಲು. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್‌ ಗ್ರಾಮದಲ್ಲಿ ಪುಟ್ಟಣ್ಣ ಕಣಗಾಲ್‌ ಅವರ ನಿವಾಸ ಇದೆ. ಪುಟ್ಟಣ್ಣ ಕಣಗಾಲ್‌ ಅಳಿಯ ಹಾಗೂ ಪತ್ರಕರ್ತ ಸುಂದರೇಶ್‌, ಪುಟ್ಟಣ್ಣ ಹೆಸರು ಉಳಿಸುವಂತಹ ಯಾವುದಾದರೂ ಯೋಜನೆ ರೂಪಿಸಿ ಎಂದು ಸರ್ಕಾರಕ್ಕೆ ಕಳೆದ ನಾಲ್ಕೈದು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದರು. ಜೊತೆಗೆ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್‌ ಕೆ ವಿಶ್ವನಾಥ್‌ ನೇತೃತ್ವದಲ್ಲಿ ಸಂಘದ ಸದಸ್ಯರು ಕಣಗಾಲ್‌ ಗ್ರಾಮಕ್ಕೆ ತೆರಳಿ ಭೇಟಿ ಕೊಟ್ಟು ನಂತರ ಸ್ಮಾರಕ ರೂಪಿಸಲು ಮನವಿ ಪತ್ರ ಕೊಟ್ಟಿದ್ದರು.

ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮಹತ್ವದ ಯೋಜನೆಯೊಂದನ್ನು ಘೋಷಣೆ ಮಾಡಿದೆ.

ಬ್ಯಾನ್ ಆಗಿದ್ದ ಕಾದಂಬರಿಯನ್ನೇ ಸಿನಿಮಾ ಮಾಡಿದ್ದ ಪುಟ್ಟಣ್ಣ ಕಣಗಾಲ್; ನೀವೂ ನೋಡಿರಬಹುದು!
ಪುಟ್ಟಣ್ಣ ಕಣಗಾಲ್‌ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿಸುವ ರಾಜ್ಯ ಸರ್ಕಾರದ ಯೋಜನೆ ಸ್ವಾಗತಾರ್ಹ. ನಮ್ಮ ಸಂಘದಿಂದಲೂ ಮನವಿ ಮಾಡಿಕೊಂಡಿದ್ದೇವೆ. ಹಿರಿಯ ನಿರ್ದೇಶಕನನ್ನು ಗೌರವಿಸುವ ಈ ಯೋಜನೆ ಆದಷ್ಟು ಬೇಗ ಜಾರಿ ಆಗಲಿ.ಕಣಗಾಲ್‌ನಲ್ಲಿ ಪುಟ್ಟಣ್ಣ ಮನೆ ತುಂಬಾ ಶಿಥಿಲಗೊಂಡಿದೆ. ಅದನ್ನು ಯಾವ ರೀತಿ ಮ್ಯೂಸಿಯಂ ಮಾಡುತ್ತಾರೋ, ಯಾವ ರೀತಿ ನಿರ್ವಹಣೆ ಮಾಡುತ್ತಾರೋ ನೋಡಬೇಕು. ಆದರೆ, ಯೋಜನೆ ಒಳ್ಳೆಯದು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!