ಇಂಧನ ಭದ್ರತೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ

ನವದೆಹಲಿ: ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಪ್ರಾರಂಭಗೊಂಡಿದ್ದು, ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ’ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಅಡ್ಡಿಪಡಿಸಿದ್ದರಿಂದ ಸದನದಲ್ಲಿ ಗದ್ದಲ ಉಂಟಾಯಿತು.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ನಿಯಮ 176ರ ಅಡಿಯಲ್ಲಿ ‘ಅಲ್ಪಾವಧಿ ಚರ್ಚೆ’ಗೆ ಅವಕಾಶ ಕೋರಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಅಧ್ಯಕ್ಷರಿಗೆ ನೋಟಿಸ್ ನೀಡಿದ್ದರು. ಪಶ್ಚಿಮ ಏಷ್ಯಾದಲ್ಲಿನ ಅಸ್ಥಿರತೆಯಿಂದಾಗಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಭಾರತವು ತನ್ನ ಒಟ್ಟು ಕಚ್ಚಾ ತೈಲದ ಸುಮಾರು 55%ರಷ್ಟನ್ನು ಈ ಪ್ರದೇಶದಿಂದಲೇ ಆಮದು ಮಾಡಿಕೊಳ್ಳುತ್ತಿದೆ ಎಂದು ಖರ್ಗೆ ತಮ್ಮ ನೋಟಿಸ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದರು. ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಸುರಕ್ಷತೆಯ ಬಗ್ಗೆಯೂ ಚರ್ಚೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು.

ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಶ್ಚಿಮ ಏಷ್ಯಾದ ಸ್ಥಿತಿಗತಿ ಕುರಿತು ಹೇಳಿಕೆ ನೀಡಲು ಮುಂದಾದಾರು. ಈ ವೇಳೆ ವಿರೋಧ ಪಕ್ಷದ ನಾಯಕರಿಗೆ ಮೊದಲು ಮಾತನಾಡಲು ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಇದರಿಂದಾಗಿ ಸದನದಲ್ಲಿ ತೀವ್ರ ಗದ್ದಲ ಉಂಟಾಯಿತು. ಗದ್ದಲದ ನಡುವೆಯೇ, ಪದೇ ಪದೇ ವಿನಂತಿಸಿದ ನಂತರ ಸಭಾಧ್ಯಕ್ಷರು ನಿಯಮ 176ರ ಅಡಿಯಲ್ಲಿ (ಅಲ್ಪಾವಧಿ ಚರ್ಚೆ) ವಿಷಯವನ್ನು ಪ್ರಸ್ತಾಪಿಸಲು ಖರ್ಗೆ ಅವರಿಗೆ ಅವಕಾಶ ಮಾಡಿಕೊಟ್ಟರು. ಅಂತಿಮವಾಗಿ, ಖರ್ಗೆ ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಭಾರತದ ಇಂಧನ ಭದ್ರತೆಯ ಮೇಲಾಗುವ ಪರಿಣಾಮಗಳ ಕುರಿತು ಮಾತನಾಡಿದರು.

ಖರ್ಗೆ ಮಾತನಾಡುತ್ತಿದ್ದಾಗ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮತ್ತು ಸಭಾಧ್ಯಕ್ಷರು ಭಾಷಣ ಮುಕ್ತಾಯಗೊಳಿಸಲು ಸೂಚಿಸಿದ್ದರಿಂದ ಸದನದಲ್ಲಿ ಮತ್ತೆ ಗದ್ದಲ ಮುಂದುವರಿಯಿತು. ಈ ನಡುವೆ ವಿರೋಧ ಪಕ್ಷಗಳ ಸದಸ್ಯರು ನಿಯಮ 267ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿ ನೀಡಿದ್ದ ನೋಟಿಸ್‌ಗಳನ್ನು ಸಭಾಧ್ಯಕ್ಷರು ತಿರಸ್ಕರಿಸಿದರು.

ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದ ಭಾರತಕ್ಕಾಗುವ ಪರಿಣಾಮಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲಾ ನೋಟಿಸ್ ನೀಡಿದ್ದರು. ಇಂಧನ ಭದ್ರತೆ, ಆರ್ಥಿಕತೆ ಮತ್ತು ಅನಿವಾಸಿ ಭಾರತೀಯರ ರಕ್ಷಣೆಯ ಬಗ್ಗೆ ಚರ್ಚಿಸಲು ಕೋರಿ ಎಎಪಿಯ ಸಂಜಯ್ ಸಿಂಗ್ ನೋಟಿಸ್ ಸಲ್ಲಿಸಿದ್ದರು. ಮತದಾರರ ಹಕ್ಕು ಕಸಿದುಕೊಳ್ಳುವಿಕೆ ಕುರಿತು ಚರ್ಚಿಸಲು ಟಿಎಂಸಿಯ ನದಿಮುಲ್ ಹಕ್ ಮತ್ತು ಸಾಕೇತ್ ಗೋಖಲೆ ನಿಯಮ 267ರ ಅಡಿ ನೋಟಿಸ್ ನೀಡಿದ್ದರು. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಿಪಿಐನ ಪಿ. ಸಂತೋಷ್ ನೋಟಿಸ್ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಸಭಾಧ್ಯಕ್ಷರು ಈ ಎಲ್ಲಾ 267ರ ಅಡಿಯ ನೋಟಿಸ್‌ಗಳನ್ನು ತಿರಸ್ಕರಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ನಿಯಮ 176ರ ಅಡಿಯಲ್ಲಿ ಅಲ್ಪಾವಧಿ ಚರ್ಚೆಗೆ ಅವಕಾಶ ನೀಡಿದರು.

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!