ಅಭಿಮಾನಿಗಳಿಗೆ ಉತ್ತರ ಕೊಟ್ಟ ನಟ ವಿಜಯ್ – ಡಿವೋರ್ಸ್ ವಿವಾದದ ಬಗ್ಗೆ ಮೊದಲು ಮಾತು.

ಕಾಲಿವುಡ್ ಸ್ಟಾರ್ ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ವಿಜಯ್ ಅವರು, ಪತ್ನಿ ಸಂಗೀತಾ ಸೋರ್ನಲಿಂಗಂ ಜೊತೆಗಿನ ವಿಚ್ಛೇದನ ಪ್ರಕರಣದ ಸುದ್ದಿಗಳು ಬಹಿರಂಗವಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ವೈಯಕ್ತಿಕ ಜೀವನದ ವಿವಾದದ ಬಗ್ಗೆ ಮೌನ ಮುರಿದಿದ್ದಾರೆ.

ತಮ್ಮ ಪಕ್ಷದ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ್, ತಮ್ಮ ಬೆಂಬಲಿಗರಿಗೆ ಇಂತಹ ಆರೋಪಗಳಿಂದ ವಿಚಲಿತರಾಗಬೇಡಿ, ಬದಲಾಗಿ ಜನರ ಸಮಸ್ಯೆಗಳ ಬಗ್ಗೆ ಗಮನಹರಿಸಿ ಎಂದು ಕಿವಿಮಾತು ಹೇಳಿದ್ದಾರೆ.

ವಿಜಯ್ ಹೇಳಿದ್ದೇನು?
ಶನಿವಾರ ಮಹಿಳಾ ಕಾರ್ಯಕರ್ತರಿಂದ ತುಂಬಿದ್ದ ಸಭಾಂಗಣವನ್ನು ಉದ್ದೇಶಿಸಿ ಮಾತನಾಡಿದ ವಿಜಯ್, ‘ಇತ್ತೀಚೆಗೆ ಕೆಲವು ವಿಚಾರಗಳು ಓಡಾಡುತ್ತಿವೆ, ಅಲ್ಲವೇ?’ ಎಂದು ಪರೋಕ್ಷವಾಗಿ ತಮ್ಮ ಡಿವೋರ್ಸ್ ಬಗ್ಗೆ ಪ್ರಸ್ತಾಪಿಸಿದರು.

‘ನೀವೆಲ್ಲರೂ ಆ ಆರೋಪಗಳ ವಿರುದ್ಧ ಹೋರಾಡುತ್ತಾ, ನೋವು ಅನುಭವಿಸುತ್ತಿರುವುದನ್ನು ನಾನು ನೋಡುತ್ತಿದ್ದೇನೆ. ನಿಮಗೆ ನೋವಾಗುವುದನ್ನು ಕಂಡು ನನಗೂ ಬೇಸರವಾಗುತ್ತಿದೆ. ಅದನ್ನೆಲ್ಲಾ ನಾನು ನೋಡಿಕೊಳ್ಳುತ್ತೇನೆ. ನಾವು ಜನರ ಸಮಸ್ಯೆಗಳತ್ತ ಗಮನ ಹರಿಸೋಣ. ಆ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಅದು ತಲೆಕೆಡಿಸಿಕೊಳ್ಳುವಂತಹ ವಿಷಯವಲ್ಲ. ಧೈರ್ಯವಾಗಿರಿ, ಎಲ್ಲವೂ ಒಳ್ಳೆಯದೇ ಆಗುತ್ತದೆ ಎಂದು ವಿಜಯ್ ಹೇಳಿದ್ದಾರೆ. ಇದು ತಮ್ಮ ವೈಯಕ್ತಿಕ ಜೀವನದ ವದಂತಿಗಳಿಗೆ ನೀಡಿದ ಸ್ಪಷ್ಟನೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ವಿಜಯ್ ಮನೆಯಲ್ಲೇ ಉಳಿಯಲು ಪತ್ನಿ ಸಂಗೀತಾ ಪಟ್ಟು!
ವಿಜಯ್ ಈ ಹೇಳಿಕೆ ನೀಡಿದ ದಿನವೇ, ಅವರ ಪತ್ನಿ ಸಂಗೀತಾ ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯ ವಿವರಗಳು ಹೊರಬಿದ್ದಿವೆ. ವಿಚ್ಛೇದನ ಪ್ರಕ್ರಿಯೆ ಮುಗಿಯುವವರೆಗೆ ಚೆನ್ನೈನ ಈಸ್ಟ್ ಕೋಸ್ಟ್ ರೋಡ್‌ನಲ್ಲಿರುವ (ECR) ವಿಜಯ್ ಅವರ ಮನೆಯಲ್ಲೇ (Matrimonial home) ತಮಗೆ ವಾಸಿಸಲು ಅನುಮತಿ ನೀಡಬೇಕು ಎಂದು ಕೋರಿ ಸಂಗೀತಾ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ತಾವು ಬ್ರಿಟಿಷ್ ಪ್ರಜೆಯಾಗಿದ್ದು, ಚೆನ್ನೈನಲ್ಲಿ ತಮಗೆ ಬೇರೆ ಯಾವುದೇ ವಸತಿ ಸೌಕರ್ಯಗಳಿಲ್ಲ. ಹೀಗಾಗಿ ಕೇಸ್ ಇತ್ಯರ್ಥವಾಗುವವರೆಗೆ ಅಥವಾ ವಿಜಯ್ ಅವರು ಇದೇ ದರ್ಜೆಯ ಮತ್ತೊಂದು ಮನೆಯನ್ನು ವ್ಯವಸ್ಥೆ ಮಾಡುವವರೆಗೆ ಪ್ರಸ್ತುತ ಇರುವ ಮನೆಯಲ್ಲೇ ಉಳಿಯಲು ಅವಕಾಶ ನೀಡುವಂತೆ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ವಿಜಯ್ ಅವರ ರಾಜಕೀಯ ಮತ್ತು ವೃತ್ತಿಜೀವನವನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಹಿಂದೆ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆಯಲು ಪ್ರಯತ್ನಿಸಲಾಗಿತ್ತು. ಆದರೆ ಆ ಮಾತುಕತೆ ವಿಫಲವಾಯಿತು. ಒಂದು ವೇಳೆ ಕಾನೂನು ಹೋರಾಟಕ್ಕೆ ಮುಂದಾದರೆ ಮನೆಯಿಂದ ಹೊರಹಾಕುವುದಾಗಿ ಪ್ರತಿವಾದಿಯ (ವಿಜಯ್) ವಕೀಲರು ಬೆದರಿಕೆ ಹಾಕಿದ್ದರು ಎಂದು ಸಂಗೀತಾ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ನಟಿಯ ಜೊತೆ ಅಕ್ರಮ ಸಂಬಂಧ ಆರೋಪ
ಸಂಗೀತಾ ಅವರು ಶಾಶ್ವತ ಜೀವನಾಂಶ ಹಾಗೂ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 20 ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸುವ ನಿರೀಕ್ಷೆಯಿದೆ. ಅರ್ಜಿಯಲ್ಲಿ ವಿಜಯ್ ವಿರುದ್ಧ ಗಂಭೀರ ಆರೋಪ ಮಾಡಿರುವ ಸಂಗೀತಾ, ವಿಜಯ್ ಅವರು ನಟಿಯೊಬ್ಬಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ. ತನಗೆ ನಿರಂತರವಾಗಿ ಮಾನಸಿಕ ಹಿಂಸೆ ನೀಡಿ, ನಿರ್ಲಕ್ಷಿಸಿದ್ದಾರೆ ಎಂದು ದೂರಿದ್ದಾರೆ.

ತ್ರಿಷಾ ಜೊತೆ ಕಾಣಿಸಿಕೊಂಡಿದ್ದ ವಿಜಯ್:
ಈ ಎಲ್ಲಾ ವಿಚ್ಛೇದನ ವಿವಾದಗಳ ನಡುವೆಯೇ ಇತ್ತೀಚೆಗೆ ಚೆನ್ನೈನಲ್ಲಿ ನಡೆದ ವಿವಾಹ ಆರತಕ್ಷತೆಯೊಂದರಲ್ಲಿ ನಟ ವಿಜಯ್ ಮತ್ತು ನಟಿ ತ್ರಿಷಾ ಕೃಷ್ಣನ್ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇವರಿಬ್ಬರ ಫೋಟೋಗಳು ಮತ್ತು ವಿಡಿಯೋಗಳು ಆನ್‌ಲೈನ್‌ನಲ್ಲಿ ಭಾರಿ ವೈರಲ್ ಆಗಿದ್ದು, ಇಬ್ಬರ ನಡುವೆ ರಿಲೇಶನ್‌ಶಿಪ್ ಇದೆ ಎಂಬ ಅಭಿಮಾನಿಗಳ ಹಳೆಯ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು