ಕೈಕೊಟ್ಟ ಮತ್ತೊಬ್ಬ ಸ್ಟಾರ್ ನಿರ್ದೇಶಕ – ಹೊಳಪು ಕಳೆದುಕೊಂಡ ಸೂರ್ಯ?

ಸೂರ್ಯ ಭಾರತದ ಅತ್ಯುತ್ತಮ ನಟರುಗಳಲ್ಲಿ ಒಬ್ಬರು. ಕೆಲವು ಅದ್ಭುತವಾದ ಸೂಪರ್ ಹಿಟ್ ಸಿನಿಮಾಗಳನ್ನು ಅವರು ನೀಡಿದ್ದಾರೆ. ಭಿನ್ನ-ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸಬಹುದಾದ ಪ್ರತಿಭೆಯುಳ್ಳ ಜೊತೆಗೆ ಸ್ಟಾರ್ ಗಿರಿ ಸಹ ಉಳ್ಳ ನಟ ಅವರು. ಆದರೆ ಇತ್ತೀಚೆಗೆ ಅವರಿಂದ ನಿರ್ದೇಶಕರುಗಳು ದೂರಾಗುತ್ತಿದ್ದಾರೆ ಕಾರಣ ಏನು?
ಹೊಳಪು ಕಳೆದುಕೊಂಡ ಸೂರ್ಯ? ಕೈಕೊಟ್ಟ ಮತ್ತೊಬ್ಬ ಸ್ಟಾರ್ ನಿರ್ದೇಶಕ

ತಮಿಳಿನ ಸ್ಟಾರ್ ನಟರುಗಳಲ್ಲಿ ಸೂರ್ಯ ಸಹ ಒಬ್ಬರು. ದೊಡ್ಡ ಸಂಖ್ಯೆಯ ಅಭಿಮಾನಿಗಳು ಅವರಿಗಿದ್ದಾರೆ. ಆದರೆ ತಮಿಳಿನಿಂದ ಮೊದಲಿನಿಂದಲೂ ನಟನೆ, ಒಳ್ಳೆಯ ಕತೆಗಳ ಆಯ್ಕೆ ಮಾಡಿಕೊಳ್ಳುವ ನಟರಿಗಿಂತಲೂ ಮಾಸ್ ನಟರನ್ನು ಬೆಳೆಸುವುದೇ ಹೆಚ್ಚು. ಸ್ವತಃ ಕಮಲ್ ಹಾಸನ್ ಸಹ ಹಲವು ಸೋಲುಗಳನ್ನು ತಮಿಳಿನಲ್ಲಿ ಕಂಡಿದ್ದಾರೆ. ಇದೀಗ ಸೂರ್ಯ ಸಹ ಇದೇ ಹಾದಿಯಲ್ಲಿದ್ದಾರೆ. ಸೂರ್ಯ ಅವರಿಗೆ ಸತತ ಹಿನ್ನಡೆಗಳು ಎದುರಾಗುತ್ತಿವೆ. ಒಟ್ಟು ಮೂರು ಮಂದಿ ಸ್ಟಾರ್ ನಿರ್ದೇಶಕರು ಸೂರ್ಯ ಜೊತೆ ಕೆಲಸ ಮಾಡುವುದಾಗಿ ಒಪ್ಪಿಕೊಂಡು ಈಗ ಹಿಂದೆ ಸರಿದಿದ್ದಾರೆ.

ಚಾಲ್ತಿಯಲ್ಲಿರುವ ನಿರ್ದೇಶಕರುಗಳಲ್ಲಿ ಒಬ್ಬರಾದ ಲೋಕೇಶ್ ಕನಗರಾಜ್ ಅವರು ಸೂರ್ಯ ಕೈಬಿಟ್ಟಿದ್ದಾಗಿದೆ. ಸೂರ್ಯ ಜೊತೆಗೆ ‘ವಡಕೈ’ ಹೆಸರಿನ ಸೂಪರ್ ಹೀರೋ ಸಿನಿಮಾವನ್ನು ಮಾಡುವುದಾಗಿ ಲೋಕೇಶ್ ಹೇಳಿದ್ದರು. ಆದರೆ ಅದೇ ಕತೆಯನ್ನು ಈಗ ಬಾಲಿವುಡ್ ಹೀರೋ ಆಮಿರ್ ಖಾನ್ ಜೊತೆಗೆ ಮಾಡುತ್ತಿದ್ದಾರೆ ಲೋಕೇಶ್ ಕನಗರಾಜ್. ಸ್ವತಃ ಸೂರ್ಯ ಅವರು ಈ ಬೆಳವಣಿಗೆ ಬಗ್ಗೆ ಹಿಂದೆ ಬೇಸರ ವ್ಯಕ್ತಪಡಿಸಿದ್ದರು.

ಅದಾದ ಬಳಿಕ ಭಾರತದ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಒಬ್ಬರು ಎನಿಸಿಕೊಳ್ಳುವ ವೆಟ್ರಿಮಾರನ್ ಸಹ ಇದೀಗ ಸೂರ್ಯಗೆ ಕೈಕೊಟ್ಟಂತಿದ್ದಾರೆ. ಸೂರ್ಯ ಜೊತೆಗೆ ‘ವಡಿವಾಸಲ್’ ಹೆಸರಿನ ಸಿನಿಮಾವನ್ನು ವೆಟ್ರಿಮಾರನ್ ಘೋಷಿಸಿದ್ದರು. ಆ ಸಿನಿಮಾ ಇದೇ ವರ್ಷ ಸೆಟ್ಟೇರಲಿದೆ ಎನ್ನಲಾಗಿತ್ತು. ಆದರೆ ಈಗ ಆಗಿರುವ ಬೆಳವಣಿಗೆ ನೋಡಿದರೆ ಆ ಸಿನಿಮಾ ನಿಂತೇ ಹೋಯ್ತು ಎನಿಸುತ್ತಿದೆ. ಏಕೆಂದರೆ ವೆಟ್ರಿಮಾರನ್ ಬೇರೆ ಸ್ಟಾರ್ ನಟರುಗಳೊಟ್ಟಿಗೆ ಒಪ್ಪಂದ ಮಾಡಿಕೊಂಡಿದ್ದಾರೆ.

ವೆಟ್ರಿಮಾರನ್ ಅವರು ಪ್ರಸ್ತುತ ‘ಅರಸನ್’ ಹೆಸರಿನ ಸಿನಿಮಾ ನಿರ್ದೇಶಿಸುತ್ತಿದ್ದು, ಸಿನಿಮಾನಲ್ಲಿ ಸಿಂಭು ನಾಯಕ. ಆ ಸಿನಿಮಾದ ಬಳಿಕ ‘ವಡಿವಾಸಲ್’ ಸೆಟ್ಟೇರಲಿದೆ ಎನ್ನಲಾಗಿತ್ತು. ಆದರೆ ಅದು ಸುಳ್ಳಾಗಿದ್ದು, ‘ಅರಸನ್’ ಸಿನಿಮಾದ ಬಳಿಕ ‘ವಡ ಚೆನ್ನೈ 2’ ಮತ್ತು ಕಮಲ್ ಹಾಸನ್ ಅವರೊಟ್ಟಿಗೆ ಹೊಸ ಸಿನಿಮಾನಲ್ಲಿ ವೆಟ್ರಿಮಾರನ್ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.

ಸೂರ್ಯ ಅವರೊಟ್ಟಿಗೆ ನಿರ್ದೇಶಕ ಬಾಲ ಸಹ ಹೊಸ ಸಿನಿಮಾ ಘೋಷಿಸಿದ್ದರು. ಆದರೆ ಆ ಸಿನಿಮಾವನ್ನು ಸಹ ನಿಲ್ಲಿಸಬೇಕಾಯ್ತು. ಇನ್ನು ‘ಕಂಗುವ’ ಸಿನಿಮಾದ ಎರಡನೇ ಭಾಗ ಬರಲಿದೆ ಎನ್ನಲಾಗಿತ್ತು. ‘ಕಂಗುವ’ ಫ್ಲಾಪ್ ಆದ ಕಾರಣ ಅದೂ ಸಹ ನಿಂತು ಹೋಗಿದೆ. ಪ್ರಸ್ತುತ ಸೂರ್ಯ ಅವರು ‘ಕರುಪ್ಪು’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ‘ವಿಶ್ವನಾಥ್ ಆಂಡ್ ಸನ್ಸ್’ ಸಿನಿಮಾನಲ್ಲಿ ನಟಿಸಲಿದ್ದಾರೆ.

Related Posts

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

  E20 ಜನತಾ ಪಕ್ಷವು ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ ಬದಲಿಗೆ ಶೇ. 100 ಶುದ್ಧ ಪೆಟ್ರೋಲ್ ನೀಡಲು ಆಗ್ರಹಿಸುತ್ತಿದೆ. E20 ಇಂಧನದಿಂದ ವಾಹನಗಳ ಮೈಲೇಜ್ ಕಡಿಮೆಯಾಗಿ, ಎಂಜಿನ್ ಸಮಸ್ಯೆಗಳು ಹೆಚ್ಚುತ್ತಿವೆ ಎಂಬುದು ಅವರ ಆರೋಪ. ಸಚಿವ ನಿತಿನ್ ಗಡ್ಕರಿ ರಾಜೀನಾಮೆಗೆ…

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

You Missed

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !