ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!

ಮಧ್ಯಪ್ರಾಚ್ಯದ ಇರಾನ್ ಮತ್ತು ಇಸ್ರೇಲ್ ನಡುವಿನ ಸಮರದಿಂದಾಗಿ ಬೆಂಗಳೂರಿನ ಹೋಟೆಲ್ ಮತ್ತು ರೆಸ್ಟೊರೆಂಟ್​ಗಳಿಗೆ ಮಾತ್ರವಲ್ಲದೇ ಲಕ್ಷಾಂತರ ಜನ ವಾಸವಿರೋ ಪಿಜಿಗಳಿಗೂ ಸಂಕಷ್ಟ ಎದುರಾಗಿದೆ.

ಬೆಂಗಳೂರಿನ ಹೋಟೆಲ್ ಮಾತ್ರವಲ್ಲ.. ಪಿಜಿಗಳಿಗೂ ಸಂಕಷ್ಟ
ಆಹಾರ ಪೂರೈಕೆ ಸ್ಥಗಿತದ ಭೀತಿ.. ಆತಂಕದಲ್ಲಿ 10 ಲಕ್ಷ ಮಂದಿ
ಕೆಲ ಪಿಜಿಗಳಲ್ಲಿ ಆಹಾರ ಪೂರೈಕೆ ಸ್ಥಗಿತಗೊಳ್ಳುವ ಮುನ್ಸೂಚನೆ
ಈಗಾಗಲೇ ಕೆಲವು ಪಿಜಿಗಳಲ್ಲಿ ಬಗೆ ಬಗೆಯ ಅಡುಗೆಗೆ ಬ್ರೇಕ್​

ಬೆಂಗಳೂರು : ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ. ಗ್ಯಾಸ್ ಸರಬರಾಜಿನಲ್ಲಿ ಉಂಟಾಗಿರುವ ಅಡಚಣೆ ಮತ್ತು ಬೆಲೆ ಏರಿಕೆಯು ನಗರದ ಹೋಟೆಲ್‌ಗಳನ್ನು ಮಾತ್ರವಲ್ಲದೆ, ಲಕ್ಷಾಂತರ ಮಂದಿ ವಾಸವಿರುವ ಪಿಜಿಗಳನ್ನೂ ಬೆಂಬಿಡದೆ ಕಾಡುತ್ತಿದೆ.

ಬೆಂಗಳೂರಿನಲ್ಲಿ ಉದ್ಯೋಗಿಗಳ ಮತ್ತು ವಿದ್ಯಾರ್ಥಿಗಳ ಹಬ್ ಆಗಿರುವುದರಿಂದ ಇಲ್ಲಿನ ಪಿಜಿಗಳ ಮೇಲೆ ಸಾಕಷ್ಟು ಜನ ಅವಲಂಬಿತರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಒಟ್ಟು 15,000 ಪಿಜಿಗಳಿದ್ದು, ಅದರಲ್ಲಿ ಸುಮಾರು 10,00,000 ಜನ ವಾಸವಾಗಿದ್ದಾರೆ. ಸಾಮಾನ್ಯವಾಗಿ ಪಿಜಿಗಳಲ್ಲಿ ದಿನಕ್ಕೆ ಮೂರು ಬಾರಿ ಊಟದ ವ್ಯವಸ್ಥೆ ಮಾಡಲಾಗುತ್ತದೆ. ಆದರೆ ಈಗ ಉಂಟಾಗಿರುವ ಗ್ಯಾಸ್ ಅಲಭ್ಯತೆಯಿಂದಾಗಿ ಮಾಲೀಕರು ಅಡುಗೆ ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ.

ಮೆನುವಿನಲ್ಲಿ ಕಡಿತಗೊಂಡ ಅಡುಗೆ ರೆಸಿಪಿಗಳು
ಈಗಾಗಲೇ ಹಲವು ಪಿಜಿಗಳಲ್ಲಿ ಸಿಲಿಂಡರ್ ಉಳಿಸುವ ಉದ್ದೇಶದಿಂದಾಗಿ ಬಗೆ ಬಗೆಯ ಅಡುಗೆಗಳಿಗೆ ಬ್ರೇಕ್ ಹಾಕಲಾಗಿದೆ. ಕೇವಲ ಅಗತ್ಯವಾದ ಸೀಮಿತ ಪ್ರಮಾಣದ ಆಹಾರವನ್ನು ಮಾತ್ರ ನೀಡಲಾಗುತ್ತಿದೆ. ಇದರಿಂದಾಗಿ ಪಿಜಿಯಲ್ಲಿನ ಜನ ಹೋಟೆಲ್​ನತ್ತ ಮುಖ ಮಾಡೋದು ಸರ್ವೇ ಸಾಮಾನ್ಯ, ಆದರೆ ಆದರೆ ಹೋಟೆಲ್‌ಗಳಲ್ಲೂ ಕಮರ್ಷಿಯಲ್ ಗ್ಯಾಸ್ ಕೊರತೆ ಇರುವುದರಿಂದ ಅಲ್ಲಿಯೂ ಊಟ ಸಿಗುವುದು ಕಷ್ಟವಾಗಲಿದೆ.ಒಂದು ವೇಳೆ ಮುಂದಿನ ಒಂದು ವಾರದೊಳಗೆ ಈ ಸಮಸ್ಯೆ ಬಗೆಹರಿಯದಿದ್ದರೆ, ಬಹುತೇಕ ಪಿಜಿಗಳಲ್ಲಿ ಆಹಾರದ ಪೂರೈಕೆ ಸಂಪೂರ್ಣವಾಗಿ ಬಂದ್​ ಮಾಡುವ ಮುನ್ಸೂಚನೆ ಇದೆ.

ದರಗಳ ವ್ಯತ್ಯಾಸ ಹೀಗಿದೆ
ಗೃಹ ಬಳಕೆ ಸಿಲಿಂಡರ್ ಹಳೆ ದರ: ರೂ. 855.50 – ಹೊಸ ದರ: ರೂ. 915.50
ಕಮರ್ಷಿಯಲ್ ಸಿಲಿಂಡರ್ಹಳೆ ದರ: ರೂ. 1,814 – ಹೊಸ ದರ: ರೂ. 1,929

ಸದ್ಯಕ್ಕೆ ಸಂಕಷ್ಟದಲ್ಲಿರುವವರು ಯಾರು?
ನಗರಕ್ಕೆ ಉದ್ಯೋಗ ಅರಸಿ ಬಂದ ಐಟಿ ಉದ್ಯೋಗಿಗಳು, ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಈ ಬಿಕ್ಕಟ್ಟಿನಿಂದ ನೇರವಾಗಿ ತತ್ತರಿಸಿದ್ದಾರೆ. ಅತ್ತ ಪಿಜಿ ಬಾಡಿಗೆ ಏರಿಸುವ ಆತಂಕ, ಇತ್ತ ಊಟ ಸಿಗದ ಆತಂಕ ಎರಡೂ ಜನರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ.
ಒಟ್ಟಾರೆಯಾಗಿ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಬೆಂಗಳೂರಿನಂತಹ ಮಹಾನಗರದ ಸಾಮಾನ್ಯ ಜನರ ಹೊಟ್ಟೆ ಮೆಲೆ ಪರಿಣಾಮ ಬೀರುತ್ತಿರುವುದು ಜಾಗತಿಕ ಅವಲಂಬನೆಯ ಕಟು ಸತ್ಯವನ್ನು ತೋರಿಸುತ್ತಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!