ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!

ಮಧ್ಯಪ್ರಾಚ್ಯದ ಇರಾನ್ ಮತ್ತು ಇಸ್ರೇಲ್ ನಡುವಿನ ಸಮರದಿಂದಾಗಿ ಬೆಂಗಳೂರಿನ ಹೋಟೆಲ್ ಮತ್ತು ರೆಸ್ಟೊರೆಂಟ್​ಗಳಿಗೆ ಮಾತ್ರವಲ್ಲದೇ ಲಕ್ಷಾಂತರ ಜನ ವಾಸವಿರೋ ಪಿಜಿಗಳಿಗೂ ಸಂಕಷ್ಟ ಎದುರಾಗಿದೆ.

ಬೆಂಗಳೂರಿನ ಹೋಟೆಲ್ ಮಾತ್ರವಲ್ಲ.. ಪಿಜಿಗಳಿಗೂ ಸಂಕಷ್ಟ
ಆಹಾರ ಪೂರೈಕೆ ಸ್ಥಗಿತದ ಭೀತಿ.. ಆತಂಕದಲ್ಲಿ 10 ಲಕ್ಷ ಮಂದಿ
ಕೆಲ ಪಿಜಿಗಳಲ್ಲಿ ಆಹಾರ ಪೂರೈಕೆ ಸ್ಥಗಿತಗೊಳ್ಳುವ ಮುನ್ಸೂಚನೆ
ಈಗಾಗಲೇ ಕೆಲವು ಪಿಜಿಗಳಲ್ಲಿ ಬಗೆ ಬಗೆಯ ಅಡುಗೆಗೆ ಬ್ರೇಕ್​

ಬೆಂಗಳೂರು : ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ. ಗ್ಯಾಸ್ ಸರಬರಾಜಿನಲ್ಲಿ ಉಂಟಾಗಿರುವ ಅಡಚಣೆ ಮತ್ತು ಬೆಲೆ ಏರಿಕೆಯು ನಗರದ ಹೋಟೆಲ್‌ಗಳನ್ನು ಮಾತ್ರವಲ್ಲದೆ, ಲಕ್ಷಾಂತರ ಮಂದಿ ವಾಸವಿರುವ ಪಿಜಿಗಳನ್ನೂ ಬೆಂಬಿಡದೆ ಕಾಡುತ್ತಿದೆ.

ಬೆಂಗಳೂರಿನಲ್ಲಿ ಉದ್ಯೋಗಿಗಳ ಮತ್ತು ವಿದ್ಯಾರ್ಥಿಗಳ ಹಬ್ ಆಗಿರುವುದರಿಂದ ಇಲ್ಲಿನ ಪಿಜಿಗಳ ಮೇಲೆ ಸಾಕಷ್ಟು ಜನ ಅವಲಂಬಿತರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಒಟ್ಟು 15,000 ಪಿಜಿಗಳಿದ್ದು, ಅದರಲ್ಲಿ ಸುಮಾರು 10,00,000 ಜನ ವಾಸವಾಗಿದ್ದಾರೆ. ಸಾಮಾನ್ಯವಾಗಿ ಪಿಜಿಗಳಲ್ಲಿ ದಿನಕ್ಕೆ ಮೂರು ಬಾರಿ ಊಟದ ವ್ಯವಸ್ಥೆ ಮಾಡಲಾಗುತ್ತದೆ. ಆದರೆ ಈಗ ಉಂಟಾಗಿರುವ ಗ್ಯಾಸ್ ಅಲಭ್ಯತೆಯಿಂದಾಗಿ ಮಾಲೀಕರು ಅಡುಗೆ ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ.

ಮೆನುವಿನಲ್ಲಿ ಕಡಿತಗೊಂಡ ಅಡುಗೆ ರೆಸಿಪಿಗಳು
ಈಗಾಗಲೇ ಹಲವು ಪಿಜಿಗಳಲ್ಲಿ ಸಿಲಿಂಡರ್ ಉಳಿಸುವ ಉದ್ದೇಶದಿಂದಾಗಿ ಬಗೆ ಬಗೆಯ ಅಡುಗೆಗಳಿಗೆ ಬ್ರೇಕ್ ಹಾಕಲಾಗಿದೆ. ಕೇವಲ ಅಗತ್ಯವಾದ ಸೀಮಿತ ಪ್ರಮಾಣದ ಆಹಾರವನ್ನು ಮಾತ್ರ ನೀಡಲಾಗುತ್ತಿದೆ. ಇದರಿಂದಾಗಿ ಪಿಜಿಯಲ್ಲಿನ ಜನ ಹೋಟೆಲ್​ನತ್ತ ಮುಖ ಮಾಡೋದು ಸರ್ವೇ ಸಾಮಾನ್ಯ, ಆದರೆ ಆದರೆ ಹೋಟೆಲ್‌ಗಳಲ್ಲೂ ಕಮರ್ಷಿಯಲ್ ಗ್ಯಾಸ್ ಕೊರತೆ ಇರುವುದರಿಂದ ಅಲ್ಲಿಯೂ ಊಟ ಸಿಗುವುದು ಕಷ್ಟವಾಗಲಿದೆ.ಒಂದು ವೇಳೆ ಮುಂದಿನ ಒಂದು ವಾರದೊಳಗೆ ಈ ಸಮಸ್ಯೆ ಬಗೆಹರಿಯದಿದ್ದರೆ, ಬಹುತೇಕ ಪಿಜಿಗಳಲ್ಲಿ ಆಹಾರದ ಪೂರೈಕೆ ಸಂಪೂರ್ಣವಾಗಿ ಬಂದ್​ ಮಾಡುವ ಮುನ್ಸೂಚನೆ ಇದೆ.

ದರಗಳ ವ್ಯತ್ಯಾಸ ಹೀಗಿದೆ
ಗೃಹ ಬಳಕೆ ಸಿಲಿಂಡರ್ ಹಳೆ ದರ: ರೂ. 855.50 – ಹೊಸ ದರ: ರೂ. 915.50
ಕಮರ್ಷಿಯಲ್ ಸಿಲಿಂಡರ್ಹಳೆ ದರ: ರೂ. 1,814 – ಹೊಸ ದರ: ರೂ. 1,929

ಸದ್ಯಕ್ಕೆ ಸಂಕಷ್ಟದಲ್ಲಿರುವವರು ಯಾರು?
ನಗರಕ್ಕೆ ಉದ್ಯೋಗ ಅರಸಿ ಬಂದ ಐಟಿ ಉದ್ಯೋಗಿಗಳು, ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಈ ಬಿಕ್ಕಟ್ಟಿನಿಂದ ನೇರವಾಗಿ ತತ್ತರಿಸಿದ್ದಾರೆ. ಅತ್ತ ಪಿಜಿ ಬಾಡಿಗೆ ಏರಿಸುವ ಆತಂಕ, ಇತ್ತ ಊಟ ಸಿಗದ ಆತಂಕ ಎರಡೂ ಜನರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ.
ಒಟ್ಟಾರೆಯಾಗಿ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಬೆಂಗಳೂರಿನಂತಹ ಮಹಾನಗರದ ಸಾಮಾನ್ಯ ಜನರ ಹೊಟ್ಟೆ ಮೆಲೆ ಪರಿಣಾಮ ಬೀರುತ್ತಿರುವುದು ಜಾಗತಿಕ ಅವಲಂಬನೆಯ ಕಟು ಸತ್ಯವನ್ನು ತೋರಿಸುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!