ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!

ಮಧ್ಯಪ್ರಾಚ್ಯದ ಇರಾನ್ ಮತ್ತು ಇಸ್ರೇಲ್ ನಡುವಿನ ಸಮರದಿಂದಾಗಿ ಬೆಂಗಳೂರಿನ ಹೋಟೆಲ್ ಮತ್ತು ರೆಸ್ಟೊರೆಂಟ್​ಗಳಿಗೆ ಮಾತ್ರವಲ್ಲದೇ ಲಕ್ಷಾಂತರ ಜನ ವಾಸವಿರೋ ಪಿಜಿಗಳಿಗೂ ಸಂಕಷ್ಟ ಎದುರಾಗಿದೆ.

ಬೆಂಗಳೂರಿನ ಹೋಟೆಲ್ ಮಾತ್ರವಲ್ಲ.. ಪಿಜಿಗಳಿಗೂ ಸಂಕಷ್ಟ
ಆಹಾರ ಪೂರೈಕೆ ಸ್ಥಗಿತದ ಭೀತಿ.. ಆತಂಕದಲ್ಲಿ 10 ಲಕ್ಷ ಮಂದಿ
ಕೆಲ ಪಿಜಿಗಳಲ್ಲಿ ಆಹಾರ ಪೂರೈಕೆ ಸ್ಥಗಿತಗೊಳ್ಳುವ ಮುನ್ಸೂಚನೆ
ಈಗಾಗಲೇ ಕೆಲವು ಪಿಜಿಗಳಲ್ಲಿ ಬಗೆ ಬಗೆಯ ಅಡುಗೆಗೆ ಬ್ರೇಕ್​

ಬೆಂಗಳೂರು : ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ. ಗ್ಯಾಸ್ ಸರಬರಾಜಿನಲ್ಲಿ ಉಂಟಾಗಿರುವ ಅಡಚಣೆ ಮತ್ತು ಬೆಲೆ ಏರಿಕೆಯು ನಗರದ ಹೋಟೆಲ್‌ಗಳನ್ನು ಮಾತ್ರವಲ್ಲದೆ, ಲಕ್ಷಾಂತರ ಮಂದಿ ವಾಸವಿರುವ ಪಿಜಿಗಳನ್ನೂ ಬೆಂಬಿಡದೆ ಕಾಡುತ್ತಿದೆ.

ಬೆಂಗಳೂರಿನಲ್ಲಿ ಉದ್ಯೋಗಿಗಳ ಮತ್ತು ವಿದ್ಯಾರ್ಥಿಗಳ ಹಬ್ ಆಗಿರುವುದರಿಂದ ಇಲ್ಲಿನ ಪಿಜಿಗಳ ಮೇಲೆ ಸಾಕಷ್ಟು ಜನ ಅವಲಂಬಿತರಾಗಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಒಟ್ಟು 15,000 ಪಿಜಿಗಳಿದ್ದು, ಅದರಲ್ಲಿ ಸುಮಾರು 10,00,000 ಜನ ವಾಸವಾಗಿದ್ದಾರೆ. ಸಾಮಾನ್ಯವಾಗಿ ಪಿಜಿಗಳಲ್ಲಿ ದಿನಕ್ಕೆ ಮೂರು ಬಾರಿ ಊಟದ ವ್ಯವಸ್ಥೆ ಮಾಡಲಾಗುತ್ತದೆ. ಆದರೆ ಈಗ ಉಂಟಾಗಿರುವ ಗ್ಯಾಸ್ ಅಲಭ್ಯತೆಯಿಂದಾಗಿ ಮಾಲೀಕರು ಅಡುಗೆ ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ.

ಮೆನುವಿನಲ್ಲಿ ಕಡಿತಗೊಂಡ ಅಡುಗೆ ರೆಸಿಪಿಗಳು
ಈಗಾಗಲೇ ಹಲವು ಪಿಜಿಗಳಲ್ಲಿ ಸಿಲಿಂಡರ್ ಉಳಿಸುವ ಉದ್ದೇಶದಿಂದಾಗಿ ಬಗೆ ಬಗೆಯ ಅಡುಗೆಗಳಿಗೆ ಬ್ರೇಕ್ ಹಾಕಲಾಗಿದೆ. ಕೇವಲ ಅಗತ್ಯವಾದ ಸೀಮಿತ ಪ್ರಮಾಣದ ಆಹಾರವನ್ನು ಮಾತ್ರ ನೀಡಲಾಗುತ್ತಿದೆ. ಇದರಿಂದಾಗಿ ಪಿಜಿಯಲ್ಲಿನ ಜನ ಹೋಟೆಲ್​ನತ್ತ ಮುಖ ಮಾಡೋದು ಸರ್ವೇ ಸಾಮಾನ್ಯ, ಆದರೆ ಆದರೆ ಹೋಟೆಲ್‌ಗಳಲ್ಲೂ ಕಮರ್ಷಿಯಲ್ ಗ್ಯಾಸ್ ಕೊರತೆ ಇರುವುದರಿಂದ ಅಲ್ಲಿಯೂ ಊಟ ಸಿಗುವುದು ಕಷ್ಟವಾಗಲಿದೆ.ಒಂದು ವೇಳೆ ಮುಂದಿನ ಒಂದು ವಾರದೊಳಗೆ ಈ ಸಮಸ್ಯೆ ಬಗೆಹರಿಯದಿದ್ದರೆ, ಬಹುತೇಕ ಪಿಜಿಗಳಲ್ಲಿ ಆಹಾರದ ಪೂರೈಕೆ ಸಂಪೂರ್ಣವಾಗಿ ಬಂದ್​ ಮಾಡುವ ಮುನ್ಸೂಚನೆ ಇದೆ.

ದರಗಳ ವ್ಯತ್ಯಾಸ ಹೀಗಿದೆ
ಗೃಹ ಬಳಕೆ ಸಿಲಿಂಡರ್ ಹಳೆ ದರ: ರೂ. 855.50 – ಹೊಸ ದರ: ರೂ. 915.50
ಕಮರ್ಷಿಯಲ್ ಸಿಲಿಂಡರ್ಹಳೆ ದರ: ರೂ. 1,814 – ಹೊಸ ದರ: ರೂ. 1,929

ಸದ್ಯಕ್ಕೆ ಸಂಕಷ್ಟದಲ್ಲಿರುವವರು ಯಾರು?
ನಗರಕ್ಕೆ ಉದ್ಯೋಗ ಅರಸಿ ಬಂದ ಐಟಿ ಉದ್ಯೋಗಿಗಳು, ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಈ ಬಿಕ್ಕಟ್ಟಿನಿಂದ ನೇರವಾಗಿ ತತ್ತರಿಸಿದ್ದಾರೆ. ಅತ್ತ ಪಿಜಿ ಬಾಡಿಗೆ ಏರಿಸುವ ಆತಂಕ, ಇತ್ತ ಊಟ ಸಿಗದ ಆತಂಕ ಎರಡೂ ಜನರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ.
ಒಟ್ಟಾರೆಯಾಗಿ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಬೆಂಗಳೂರಿನಂತಹ ಮಹಾನಗರದ ಸಾಮಾನ್ಯ ಜನರ ಹೊಟ್ಟೆ ಮೆಲೆ ಪರಿಣಾಮ ಬೀರುತ್ತಿರುವುದು ಜಾಗತಿಕ ಅವಲಂಬನೆಯ ಕಟು ಸತ್ಯವನ್ನು ತೋರಿಸುತ್ತಿದೆ.

Related Posts

ಬಾಡಿಗೆದಾರರಿಗೆ ಗುಡ್‌ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಬಾಡಿಗೆದಾರರಿಂದ ವಿಪರೀತವಾಗಿ ಹಣ ತೆಗೆದುಕೊಳ್ಳುವುದಕ್ಕೆ ಬ್ರೇಕ್.

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿದಾರರು ಬಾಡಿಗೆ ಮನೆಗಳ ಬೆಲೆಯನ್ನು ವಿಪರೀತವಾಗಿ ಹೆಚ್ಚಳ ಮಾಡುತ್ತಿದ್ದಾರೆ. ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಹೊಸ ಬಾಡಿಗೆ ನಿಯಮಗಳು 2026ರ ವಿಷಯವು ಭಾರೀ ಚರ್ಚೆ ಆಗುತ್ತಿದೆ. ಈ ನಿಯಮವು ಜಾರಿಯಾದರೆ ಬೆಂಗಳೂರು…

ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರವರಿಗೆ ಪತ್ರ ಬರೆದು ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವು ಸಂಕಷ್ಟಕ್ಕೆ ಸಿಲುಕಿದೆ. ಈ ಬಿಕ್ಕಟ್ಟನ್ನು ಬಗೆಹರಿಸಲು ತಕ್ಷಣವೇ ಮಧ್ಯಪ್ರವೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಬೆಂಗಳೂರು (ಮಾ.10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ…

You Missed

ಬಾಡಿಗೆದಾರರಿಗೆ ಗುಡ್‌ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಬಾಡಿಗೆದಾರರಿಂದ ವಿಪರೀತವಾಗಿ ಹಣ ತೆಗೆದುಕೊಳ್ಳುವುದಕ್ಕೆ ಬ್ರೇಕ್.

ಬಾಡಿಗೆದಾರರಿಗೆ ಗುಡ್‌ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಬಾಡಿಗೆದಾರರಿಂದ ವಿಪರೀತವಾಗಿ ಹಣ ತೆಗೆದುಕೊಳ್ಳುವುದಕ್ಕೆ ಬ್ರೇಕ್.

ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ ಇದೀಗ ನೇರವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನದ ಮೇಲೆ ಬೀರುತ್ತಿದೆ!

ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರವರಿಗೆ ಪತ್ರ ಬರೆದು ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ.

ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರವರಿಗೆ ಪತ್ರ ಬರೆದು ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ.

ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ನಿಂತ ಉದ್ಯಮಿ ಧೀರಜ್ ಜೈನ್

ದುಬೈನಲ್ಲಿ ಸಿಲುಕಿರುವ ಭಾರತೀಯರ ನೆರವಿಗೆ ನಿಂತ ಉದ್ಯಮಿ ಧೀರಜ್ ಜೈನ್

ಕೈಕೊಟ್ಟ ಮತ್ತೊಬ್ಬ ಸ್ಟಾರ್ ನಿರ್ದೇಶಕ – ಹೊಳಪು ಕಳೆದುಕೊಂಡ ಸೂರ್ಯ?

ಕೈಕೊಟ್ಟ ಮತ್ತೊಬ್ಬ ಸ್ಟಾರ್ ನಿರ್ದೇಶಕ – ಹೊಳಪು ಕಳೆದುಕೊಂಡ ಸೂರ್ಯ?

ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್!

ಮಲ್ಲಿಕಾರ್ಜುನ  ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್!